ಪೆಗಾಸಸ್ : ದೇಶಾದ್ಯಂತ 22 ರಂದು ರಾಜ್ ಭವನಕ್ಕೆ ಕಾಂಗ್ರೆಸ್ ಮೆರವಣಿಗೆ   


Team Udayavani, Jul 20, 2021, 11:27 AM IST

Congress to hold press conferences in every state tomorrow on Pegasus Project report issue

ನವ ದೆಹಲಿ : ಸಂಸತ್ ಮುಂಗಾರು ಅಧಿವೇಶನ ಆರಂಭವಾಗುವುದರೊಂದಿಗೆ ರಾಷ್ಟ್ರ ರಾಜಕಾರಣದಲ್ಲಿ ‘ಪೆಗಾಸಸ್’ ಕೂಡ ದೊಡ್ಡ ಚರ್ಚೆಗೆ ಕಾರಣವಾಗಿದೆ.  ಜಗತ್ತಿನ ಪ್ರಮುಖ ಪತ್ರ ಕರ್ತರು, ರಾಜಕೀಯ ಕ್ಷೇತ್ರದ ವ್ಯಕ್ತಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡುವ ಪ್ರಮುಖರ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂಬ ವರದಿ ಹೊರ ಬೀಳುತ್ತಿದ್ದಂತೆ ರಾಷ್ಟ್ರೀಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

ನಾಳೆ(ಬುಧವಾರ, ಜುಲೈ 21) ದೇಶದ ಎಲ್ಲಾ ರಾಜ್ಯಗಲ್ಲಿ ಪೆಗಾಸಸ್ ಕುರಿತಾಗಿ ಕಾಂಗ್ರೆಸ್ ಪತ್ರಿಕಾ ಗೋಷ್ಟಿ ಕರೆದಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಇದನ್ನೂ ಓದಿ : ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು- ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ

‘ಪೆಗಾಸಸ್ ಪ್ರಾಜೆಕ್ಟ್’ ಮಾಧ್ಯಮ ವರದಿಯ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಿದ ನ್ಯಾಯಾಂಗ ವಿಚಾರಣೆಗೆ ಒತ್ತಾಯಿಸಿ ಪಕ್ಷದ ರಾಜ್ಯ ಘಟಕಗಳು ಜುಲೈ 22 ರಂದು ದೇಶಾದ್ಯಂತ ರಾಜ್ ಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಅವರ ಕಚೇರಿ ಸಿಬ್ಬಂದಿಗಳ ದೂರವಾಣಿಗಳನ್ನು ಸಹ ಹ್ಯಾಕ್ ಮಾಡಲಾಗಿದೆ ಎಂದು  ವರದಿಗಳು ತಿಳಿಸಿವೆ.

2019 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಸೆಲ್ ಫೋನ್ ಗಳನ್ನು ಹ್ಯಾಕ್ ಮಾಡಲು ಸ್ಪೈವೇರ್ ‘ಪೆಗಾಸಸ್’ ನನ್ನು ಸಹ ಬಳಸಲಾಗುತ್ತಿದೆ ಎಂದು ವರದಿಯಾಗಿದೆ.

“ಪೆಗಾಸಸ್” ಸ್ಪೈವೇರ್ ಮತ್ತು ಎಲ್ಲಾ ಎನ್ ಎಸ್ ಒ ಉತ್ಪನ್ನಗಳನ್ನು ಸರ್ಕಾರಕ್ಕೆ ಮಾತ್ರ ಮಾರಾಟ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ಆರೋಪಿಸಿದೆ.

ಇನ್ನು,  ಭಾರತ ಸರ್ಕಾರ ಮತ್ತು ಅದರ ಏಜೆನ್ಸಿಗಳು ವಿರೋಧ ಪಕ್ಷದ ನಾಯಕರು, ಪತ್ರಕರ್ತರು, ವಕೀಲರು ಮತ್ತು ಕಾರ್ಯಕರ್ತರ ಫೋನ್ ಗಳನ್ನು ಹ್ಯಾಕ್ ಮಾಡಲು ಸ್ಪೈವೇರ್ ನನ್ನು ಖರೀದಿಸಿವೆ ಎಂಬುದು ಸ್ಪಷ್ಟವಾಗಿದೆ. ಈ ನಿಟ್ಟಿನಲ್ಲಿ, ಸ್ಪೈವೇರ್ ಪೆಗಾಸಸ್ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಿದ ನ್ಯಾಯಾಂಗ ವಿಚಾರಣೆ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಪಕ್ಷ ನಿರ್ಧರಿಸಿದೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ :  ಇಳಿಕೆ ಕಾಣುತ್ತಿದೆ ಸೋಂಕು ಪ್ರಕರಣಗಳು: ದೇಶದಲ್ಲಿ 30,093 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಟಾಪ್ ನ್ಯೂಸ್

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.