ಅಫ್ಘಾನಿಸ್ತಾನದಿಂದ ದೇಶದ ಹಿಂದೂ, ಸಿಖ್ಖರನ್ನು ಕರೆತರಲು ವ್ಯವಸ್ಥೆ ಮಾಡಿ : ಕಾಂಗ್ರೆಸ್
ಹಿಂಸೆಯ ದುರಂತ ನಡೆ ಅಲ್ಲಿ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ : ಜೈವೀರ್ ಶೆರ್ಗಿಲ್
Team Udayavani, Aug 9, 2021, 4:00 PM IST
ನವ ದೆಹಲಿ : ಭಾರತ ಮೂಲದ ಹಿಂದೂ ಮತ್ತು ಸಿಖ್ಖರನ್ನು ಯುದ್ಧ ಪೀಡಿತ ಅಫ್ಘಾನಿಸ್ತಾನದಿಂದ ದೇಶಕ್ಕೆ ಕರೆಸಿಕೊಳ್ಳುವಂತೆ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಇಂದು (ಸೋಮವಾರ, ಆಗಸ್ಟ್ 9) ಒತ್ತಾಯಿಸಿದೆ.
ಕಾಂಗ್ರೆಸ್ ನಾಯಕ ಜೈವೀರ್ ಶೆರ್ಗಿಲ್ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಗೆ ಪತ್ರ ಬರೆದಿದ್ದು, ಯುದ್ಧ ಪೀಡಿತ ದೇಶದಿಂದ ಹಿಂದುಗಳು ಹಾಗೂ ಸಿಖ್ಖರನ್ನು ದೇಶಕ್ಕೆ ಕರೆಸಿಕೊಳ್ಳುವಂತೆ ಕೋರಿದ್ದಾರೆ.
“ನಿಮಗೆ ತಿಳಿದಿರುವಂತೆ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ದಾಳಿ ಹೆಚ್ಚಾಗಿದೆ, ಯುಎಸ್ ಸೈನ್ಯವನ್ನು ಹಿಂತೆಗೆದುಕೊಂಡಿದೆ, ಮತ್ತು ಅವರು ದೇಶವನ್ನು ಮತ್ತೊಮ್ಮೆ ಅಂತರಾಷ್ಟ್ರೀಯ ಭಯೋತ್ಪಾದನೆಯ ಕೇಂದ್ರವಾಗಿ ಪರಿವರ್ತಿಸಲು ನೋಡುತ್ತಿದ್ದಾರೆಂದು ಶೆರ್ಗಿಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್
ಹಿಂಸೆಯ ದುರಂತ ನಡೆ ಅಲ್ಲಿ ಮಾನವೀಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಮನುಷ್ಯರಿಗೆ ಅಲ್ಲಿ ಬದುಕುವುದಕ್ಕೆ ಸಾಧ್ಯವಿಲ್ಲ. ಭಾರತದ ಮೂಲವಾಸಿಗಳಿಗೂ ಅಲ್ಲಿ ಜೀವನ ನಡೆಸಲು ಸಾಧ್ಯವಿಲ್ಲ ಎಂದು ಪತ್ರದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ಸುಮಾರು 650 ಮಂದಿ ಸಿಖ್ ಧರ್ಮದವರು ಹಾಗೂ 50 ಕ್ಕೂ ಹೆಚ್ಚು ಮಂದಿ ಹಿಂದೂ ಧರ್ಮದವರು ಅಫ್ಘಾನಿಸ್ತಾನದ ಹಿಂಸೆಯ ನಡುವೆ ಸಿಲುಕಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿವೆ. ಅಲ್ಲಿ ಭಾರತದ ಮೂಲದವರೆಲ್ಲಾ ಭೀತಿಯಿಂದಿದ್ದಾರೆ. ಕೇಂದ್ರ ಸರ್ಕಾರ ಶೀಘ್ರದಲ್ಲಿ ಅವರನ್ನು ಭಾರತಕ್ಕೆ ಕರೆತರಯವಲ್ಲಿ ವ್ಯವಸ್ಥೆ ಮಾಡಬೇಖು ಎಂದಿದ್ದಾರೆ.
ಇನ್ನು, ಇಂದು ಬಿಗಿ ಉಡುಪು ಧರಿಸಿದ್ದಾರೆ ಮತ್ತು ಪುರುಷ ಸಂಬಂಧಿ ಜೊತೆಗಿಲ್ಲದ ಕಾರಣಕ್ಕೆ ಯುವತಿಯೊಬ್ಬರನ್ನು ತಾಲಿಬಾನ್ ಉಗ್ರರು ಗುಂಡಿಕ್ಕಿ ಕೊಂದು ಹಾಕಿದ ಘಟನೆ ಅಫ್ಘಾನಿಸ್ಥಾನದ ಉತ್ತರ ಬಲ್ಖ್ ಪ್ರಾಂತ್ಯದಲ್ಲಿ ನಡೆದಿದೆ.
ತಾಲಿಬಾನ್ ನಿಯಂತ್ರಣದಲ್ಲಿರುವ ಸಮರ್ ಖಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಫ್ಘಾನಿಸ್ಥಾನದ ರೇಡಿಯೊ ಆಜಾದಿ ವರದಿ ಮಾಡಿದೆ.
ಇದನ್ನೂ ಓದಿ : ಸಂಪುಟ ವಿಸ್ತರಣೆ ಸಮಯದಲ್ಲಿ ಅಸಮಾಧಾನ ಸಾಮಾನ್ಯ : ಸಚಿವ ಶಿವರಾಮ ಹೆಬ್ಬಾರ್ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ