EVM ವಿರೋಧಿ ಅಭಿಯಾನದಲ್ಲಿ ಕಾಂಗ್ರೆಸ್ :ವೀರಪ್ಪ ಮೊಯಿಲಿ ಕೆಂಡಾಮಂಡಲ


Team Udayavani, Apr 12, 2017, 12:14 PM IST

Veerappa Moily-700.jpg

ಹೊಸದಿಲ್ಲಿ : ಇಲೆಕ್ಟ್ರಾನಿಕ್‌ ಓಟಿಂಗ್‌ ಮಶೀನ್‌ (ಇವಿಎಂ) ವಿರುದ್ಧದ ಅಭಿಯಾನದಲ್ಲಿ ತನ್ನ ಪಕ್ಷವೂ ಸೇರಿಕೊಂಡಿರುವುದನ್ನು ಹಿರಿಯ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯಿಲಿ ಅವರು ತೀವ್ರವಾಗಿ ಟೀಕಿಸಿ ಕಿಡಿಕಾರಿದ್ದಾರೆ.

ತನ್ನದೇ ಕಾಂಗ್ರೆಸ್‌ ಪಕ್ಷ ಇವಿಎಂ ತಿರುಚಿವಿಕೆ ಅಭಿಯಾನದಲ್ಲಿ ಸೇರಿಕೊಂಡಿರುವುದಕ್ಕೆ ತೀವ್ರ ಅತೃಪ್ತಿ, ಹತಾಶೆ ಮತ್ತು ಜುಗುಪ್ಸೆಯನ್ನು ವ್ಯಕ್ತಪಡಿಸಿರುವ ಮೊಯಿಲಿ ಈ ಬಗ್ಗೆ ಹೇಳಿದ್ದು ಹೀಗೆ :

ಇವಿಎಂ ಗಳು ಎಲ್ಲ ಶಂಕೆಗಳನ್ನೂ ಮೀರಿರುವ ಸಾಧನವಾಗಿದೆ. ನಾನೋರ್ವ ಮಾಜಿ ಕಾನೂನು ಸಚಿವ. ಇವಿಎಂ ಗಳನ್ನು ಪರಿಚಯಿಸಲಾಗಿದ್ದೇ ನನ್ನ ಕಾಲದಲ್ಲಿ. ಕೆಲವೊಂದು ದೂರುಗಳು ಆಗಲೂ ಬಂದಿದ್ದವು. ಆಗ ನಾವು ಅವುಗಳನ್ನು ಪರಿಶೀಲಿಸಿದೆವು. ಹಾಗಿರುವಾಗ ನಾವು ಇತಿಹಾಸವನ್ನು ಮರೆಯಬಾರದು. ಇವಿಎಂ ವಿರುದ್ಧ ಯಾರೋ ಕೆಲವರು ಅಪಸ್ವರ ಎತ್ತಿ ಒಂದು ಆಂದೋಲನ ಆರಂಭಿಸಿದ್ದಾರೆ ಎಂದ ಮಾತ್ರಕ್ಕೆ ನಾವು ವಿಚಾರ-ವಿವೇಕ ಇಲ್ಲದೆ ಆ ಆಂದೋಲನಕ್ಕೆ ಧುಮುಕಬಾರದು. 

ವಿರೋಧ ಪಕ್ಷಗಳು ಮೊನ್ನೆ ಸೋಮವಾರ ಚುನಾವಣಾ ಆಯುಕ್ತರನ್ನು ಭೇಟಿಯಾಗಿ ತಮಗೆ ಇವಿಎಂಗಳಲ್ಲಿನ ವಿಶ್ವಾಸ ಸಂಪೂರ್ಣ ನಾಶವಾಗಿ ಹೋಗಿದೆ ಎಂದು ಹೇಳಿದ್ದರು. ಮಾತ್ರವಲ್ಲದೆ ವೋಟರ್‌ ವೆರಿಫೈಡ್‌ ಪೇಪರ್‌ ಆಡಿಟ್‌ ಟ್ರಯಲ್‌ (ವಿವಿಪ್ಯಾಟ್‌) ಯಂತ್ರವನ್ನು ಹಾಗೂ ಪೇಪರ್‌ ಬ್ಯಾಲಟ್‌ಗಲನ್ನು ಮುಂಬರುವ ಚುನಾವಣೆಗಳಲ್ಲಿ ಬಳಸುವಂತೆ ಆಗ್ರಹಿಸಿದ್ದರು. 

ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಎನ್‌ಸಿಪಿ ಮತ್ತು ಎಡ ಪಕ್ಷಗಳು ಸೇರಿದಂತೆ ಒಟ್ಟು 13 ವಿರೋಧ ಪಕ್ಷಗಳನ್ನು ಒಳಗೊಂಡ ನಿಯೋಗವೊಂದು ಚುನಾವಣಾ ಮಂಡಳಿಯನ್ನು ಭೇಟಿಯಾಗಿ ಕಳೆದ ಫೆಬ್ರವರಿ ಮಾರ್ಚ್‌ ತಿಂಗಳಲ್ಲಿ ನಡೆದಿದ್ದ ಪಂಚ ರಾಜ್ಯ ಚುನಾವಣೆಗಳು ಹಾಗೂ ಭಾನುವಾರ ಹಲವು ರಾಜ್ಯಗಳಲ್ಲಿ ನಡೆದಿದ್ದ ಉಪ ಚುನಾವಣೆಗಳಲ್ಲಿ ಇವಿಯಂಗಳನ್ನು ತಿರುಚಲಾಗಿದೆ ಎಂದು ಆರೋಪಿಸಿದರು. 

ಈ ನಿಯೋಗವನ್ನು ಕಾಂಗ್ರೆಸ್‌ ಸೇರುವಲ್ಲಿ ಯಾರೂ ನಮಗೆ ಮುಂಚಿತವಾಗಿ ತಿಳಿಸಿಲ್ಲ; ಸಮಾಲೋಚಿಸಿಲ್ಲ ಎಂದು ಮೊಯಿಲಿ ಹೇಳಿದ್ದು ನಾವು ಇವಿಎಂ ವಿರುದ್ಧದ ಅಭಿಯಾನಕ್ಕೆ ಸೇರಲೇಬಾರದಿತ್ತು ಎಂದು ಖಂಡ ತುಂಡವಾಗಿ ಹೇಳಿರುವುದನ್ನು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ. 

ಮುಂದುವರಿದು ಮೊಯಿಲಿ ಹೇಳಿದರು : ಇವಿಎಂಗಳು ಚೆನ್ನಾಗಿಯೇ ಇವೆ. ನಮ್ಮ ಯುಪಿಎ ಕಾಲದಲ್ಲಿ ನಾವದನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ, ಪರೀಕ್ಷಿಸಿದ್ದೇವೆ. ಚುನಾವಣೆಗಳಲ್ಲಿನ ನಮ್ಮ ಸೋಲಿಗೆ ಇವಿಎಂ ಗಳೇ ಕಾರಣ ಎನ್ನಬಾರದು. ಸೋಲುತ್ತಲೇ ಇರುವವರು ಮಾತ್ರವೇ ಇವಿಎಂ ಗಳನ್ನು ತಮ್ಮ ಸೋಲಿಗೆ ಕಾರಣೀಭೂತ ಗೊಳಿಸುತ್ತಾರೆ. ಅಲ್ಲದಿದ್ದರೆ ಇವಿಎಂಗಳಲ್ಲಿ ಯಾವುದೇ ಸಮಸ್ಯೆ ಇಲ್ಲ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.