ಕಾಂಗ್ರೆಸ್‌ನಿಂದ ಎಲೆಕ್ಟೋರಲ್‌ ಬಾಂಡ್‌ ಅಸ್ತ್ರ ; ಸಂಸತ್‌ನಲ್ಲಿ ಕೇಂದ್ರದ ವಿರುದ್ಧ ವಾಗ್ಧಾಳಿ

ಭ್ರಷ್ಟಾಚಾರ ಅಧಿಕೃತಗೊಂಡಿದೆ ಎಂದು ಆರೋಪ

Team Udayavani, Nov 22, 2019, 6:45 AM IST

Electoral-Bond-21-11

ಹೊಸದಿಲ್ಲಿ: ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಗುರುವಾರ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್‌ ಹೊಸ ಅಸ್ತ್ರ ಪ್ರಯೋಗಿಸಿದೆ. ಮೋದಿ ಸರಕಾರ ಪರಿಚಯಿಸಿದ ಎಲೆಕ್ಟೋರಲ್‌ ಬಾಂಡ್‌ ಮೂಲಕ ಅಕ್ರಮ ಎಸಗಲಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಚುನಾವಣಾ ಬಾಂಡ್‌ ಮೂಲಕ ಸರಕಾರವು ಭ್ರಷ್ಟಾಚಾರವನ್ನು ಅಧಿಕೃತಗೊಳಿಸಿದೆ. ಇದೊಂದು ಹಣಕಾಸು ಅಕ್ರಮ ಸಾಗಾಟ ಹಗರಣವಾಗಿದ್ದು, ದೇಶವನ್ನು ಲೂಟಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಕುರಿತು ಕಾಂಗ್ರೆಸ್‌ ನಾಯಕರಾದ ಮನೀಷ್‌ ತಿವಾರಿ, ಅಧೀರ್‌ ರಂಜನ್‌ ಚೌಧರಿ ಮಾತನಾಡಿ, ‘ಆರ್‌ಬಿಐ ಹಾಗೂ ಚುನಾವಣಾ ಆಯೋಗವೇ ಕೆಲ ಆಕ್ಷೇಪಗಳನ್ನು ಸಲ್ಲಿಸಿದ ಹೊರತಾಗಿಯೂ ಕೇಂದ್ರ ಸರಕಾರ ಚುನಾವಣಾ ಬಾಂಡ್‌ ಪರಿಚಯಿಸಿತು. ಇದರಿಂದಾಗಿ ರಾಜಕೀಯ ಪಕ್ಷಗಳಿಗೆ ಬರುವ ದೇಣಿಗೆಯು ಬೇನಾಮಿ ಆಯಿತು. ದೇಣಿಗೆ ಕೊಟ್ಟವರು ಯಾರು, ಸ್ವೀಕರಿಸಿದವರು ಯಾರು ಎಂಬುದು ಜನರಿಗೆ ಗೊತ್ತಾಗುತ್ತಿಲ್ಲ. ಅನಾಮಧೇಯ ವ್ಯಕ್ತಿಗಳು ಬಾಂಡ್‌ ಪಡೆದು, ದೇಣಿಗೆ ನೀಡಲಾರಂಭಿಸಿದರು. ಒಟ್ಟಿನಲ್ಲಿ ಈ ಯೋಜನೆ ಮೂಲಕ ಭ್ರಷ್ಟಾಚಾರವನ್ನು ಮುಚ್ಚಿಹಾಕಲಾಗುತ್ತಿದೆ’ಎಂದು ಆರೋಪಿಸಿದರು.

ಶೂನ್ಯ ಅವಧಿಯಲ್ಲಿ ಈ ಕುರಿತು ಪ್ರಸ್ತಾಪಿಸಿದ ತಿವಾರಿ, ಇದರ ಹಿಂದೆ ಪ್ರಧಾನಿ ಕಾರ್ಯಾಲಯದ ಕೈವಾಡವಿದೆ ಎಂದು ಆರೋಪಿಸಿದರು. ಕೂಡಲೇ ಸ್ಪೀಕರ್‌ ಓಂ ಬಿರ್ಲಾ ಅವರು ತಿವಾರಿ ಅವರ ಮೈಕ್‌ ಆಫ್ ಮಾಡಿದರು. ಇದರಿಂದ ಕ್ರುದ್ಧಗೊಂಡ ಕಾಂಗ್ರೆಸ್‌ ಸದಸ್ಯರು, ಕಲಾಪ ಬಹಿಷ್ಕರಿಸಿ ಹೊರನಡೆದರು.

ಹೂಡಿಕೆ ವಾಪಸ್‌ಗೆ ಕಿಡಿ: ಇದರ ಜೊತೆಗೆ, ಬಿಪಿಸಿಎಲ್‌ ಸೇರಿದಂತೆ ಸರ್ಕಾರಿ ಸ್ವಾಮ್ಯದ ಕಂಪೆನಿಗಳ ಖಾಸಗೀಕರಣ ನಿರ್ಧಾರವನ್ನು ಕೂಡ ಕಾಂಗ್ರೆಸ್‌ ತೀವ್ರವಾಗಿ ವಿರೋಧಿಸಿದ್ದು, ಸರಕಾರವು ದೇಶವನ್ನು ಮಾರುತ್ತಿದೆ ಎಂದು ಕಿಡಿಕಾರಿದೆ.

ಕಾಂಗ್ರೆಸ್‌ ಸಂಸದನ ವಿರುದ್ಧ ಸ್ಪೀಕರ್‌ ಕೆಂಡ: ಕಲಾಪದ ವೇಳೆ ಪಂಜಾಬ್‌ನ ಕಾಂಗ್ರೆಸ್‌ ಸಂಸದ ರವ್ನೀತ್‌ ಸಿಂಗ್‌ ಬಿಟ್ಟು ವಿರುದ್ಧ ಸ್ಪೀಕಲ್‌ ಓಂ ಬಿರ್ಲಾ ಕೆಂಡಾಮಂಡಲರಾದ ಘಟನೆ ನಡೆಯಿತು. ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ವಾಪಸ್‌ ಪಡೆದ ಕುರಿತು ಸಿಂಗ್‌ ಪ್ರಸ್ತಾಪಿಸಿದಾಗ, ಅವರನ್ನು ಅರ್ಧಕ್ಕೆ ತಡೆದ ಸ್ಪೀಕರ್‌, ಶೂನ್ಯ ಅವಧಿಯಲ್ಲಿ ದೀರ್ಘ‌ಕಾಲ ಮಾತನಾಡುವಂತಿಲ್ಲ ಎಂದು ಸೂಚಿಸಿದರು. ಇದರಿಂದ ಕೋಪಗೊಂಡ ಸಿಂಗ್‌, ‘ನೀವೂ ಅವರ (ಬಿಜೆಪಿ) ಜೊತೆ ಶಾಮೀಲಾಗಿದ್ದೀರಿ’ ಎಂದು ಆರೋಪಿಸಿದರು. ಆಗ ಕ್ರುದ್ಧರಾದ ಸ್ಪೀಕರ್‌ ಬಿರ್ಲಾ, ‘ಸ್ಪೀಕರ್‌ ಹುದ್ದೆ ಬಗ್ಗೆ ಹೀಗೆಲ್ಲ ಹಗುರವಾಗಿ ಮಾತನಾಡಬೇಡಿ’ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ 862 ವಕ್ಫ್ ಆಸ್ತಿ ಒತ್ತುವರಿ
ದೇಶಾದ್ಯಂತ ವಕ್ಫ್ ಬೋರ್ಡ್‌ನ ಸುಮಾರು 17 ಸಾವಿರ ಆಸ್ತಿಗಳನ್ನು ಒತ್ತುವರಿ ಮಾಡಲಾಗಿದೆ. ಈ ಪೈಕಿ ಅತಿ ಹೆಚ್ಚು ಆಸ್ತಿ ಕಬಳಿಕೆ ಆಗಿರುವುದು ಪಂಜಾಬ್‌ನಲ್ಲಿ (5,610) ಎಂದು ಸಚಿವ ಮುಖ್ತಾರ್‌ ಅಬ್ಟಾಸ್‌ ನಖ್ವೀ ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 862, ಮಧ್ಯಪ್ರದೇಶದಲ್ಲಿ 3240, ಪ.ಬಂಗಾಲದಲ್ಲಿ 3082, ತ.ನಾಡಿನಲ್ಲಿ 1335 ವಕ್ಫ್ ಆಸ್ತಿ ಒತ್ತುವರಿ ನಡೆದಿದೆ ಎಂದೂ ಅವರು ಹೇಳಿದ್ದಾರೆ. ಈ ರೀತಿಯ ಕಬಳಿಕೆಗೆ ನಿಯಂತ್ರಣ ಹೇರಿ, ವಕ್ಫ್ ಆಸ್ತಿ ರಕ್ಷಿಸುವ ಸಲುವಾಗಿ ಆನ್‌ಲೈನ್‌ ಪೋರ್ಟಲ್‌ (ವಕ್ಫ್ ಅಸೆಟ್ಸ್‌ ಮ್ಯಾನೇಜ್‌ಮೆಂಟ್‌ ಸಿಸ್ಟಂ ಆಫ್ ಇಂಡಿಯಾ) ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಚುನಾವಣಾ ಬಾಂಡ್‌ಗಳನ್ನು ವಿರೋಧಿಸುತ್ತಿರುವ ಎಲ್ಲರೂ ಕಪ್ಪು ಹಣದ ಮೂಲಕ ಚುನಾವಣೆ ಎದುರಿಸಿದವರು. ಭ್ರಷ್ಟರಿಗೆ ಸ್ವತ್ಛ, ತೆರಿಗೆ ಪಾವತಿಸಿದ ಪಾರದರ್ಶಕ ಹಣ ಬೇಕಾಗಿಲ್ಲ.
– ಪಿಯೂಷ್‌ ಗೋಯಲ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.