ಸಂವಿಧಾನದ ಮೇಲೆ ದಾಳಿ, ದೇಶದಲ್ಲಿ ಭಯದ ವಾತಾವರಣ: ರಾಹುಲ್ ಆಕ್ರೋಶ
Team Udayavani, May 17, 2018, 4:04 PM IST
ರಾಯ್ಪುರ : ದೇಶದ ಸಂವಿಧಾನವು ತೀವ್ರವಾದ ದಾಳಿಗೆ ಗುರಿಯಾಗಿದೆ; ದೇಶದಲ್ಲಿ ಭಯದ ವಾತಾವರಣ ಇದೆ. ಸರ್ವಾಧಿಕಾರಿ ಆಡಳಿತೆ ಇರುವ ಪಾಕಿಸ್ಥಾನ ಮತ್ತು ಕೆಲವು ಆಫ್ರಿಕನ್ದೇಶಗಳಲ್ಲಿ ಇರುವ ಭೀತಿಯ ವಾತಾವರಣ ಈಗ ನಮ್ಮ ದೇಶದಲ್ಲೂ ನೆಲೆಗೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದ ವಿದ್ಯಮಾನಗಳಿಂದ ಆಕ್ರೋಶಿತರಾಗಿ ಗುಡುಗಿನ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಕೃತ ಎರಡು ದಿನಗಳ ಛತ್ತೀಸ್ಗಢ ಭೇಟಿಯಲ್ಲಿರುವ ರಾಹುಲ್ ಗಾಂಧಿ ಅವರು ಇಂದು ಗುರುವಾರ ಇಲ್ಲಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ನೆರೆದ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿದ್ಯಮಾನವನ್ನು ಖಂಡಿಸಿ ಮಾತನಾಡುತ್ತಿದ್ದ ಅವರು, ದೇಶದ ನ್ಯಾಯಾಂಗ ಕೂಡ ಬೆದರಿಕೆ ಮತ್ತು ದಮನಕ್ಕೆ ಗುರಿಯಾಗುತ್ತಿದೆ ಎಂದು ಹುಯಿಲೆಬ್ಬಿಸಿದರು.
ಈ ವರ್ಷ ಜನವರಿಯಲ್ಲಿ ಸುಪ್ರೀಂ ಕೋರ್ಟಿನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ದೇಶದ ವರಿಷ್ಠ ನ್ಯಾಯಮೂರ್ತಿಗಳ ವಿರುದ್ದ ತಮಗಿರುವ ಅಹವಾಲುಗಳನ್ನು ಹೇಳಿಕೊಳ್ಳಲು ನಡೆಸಿದ ಅಭೂತಪೂರ್ವ ಪತ್ರಿಕಾ ಗೋಷ್ಠಿಯನ್ನು ರಾಹುಲ್ ಗಾಂಧಿ ಉಲ್ಲೇಖೀಸಿ “ದೇಶದ ಉನ್ನತ ನ್ಯಾಯಾಂಗ ಕೂಡ ಬೆದರಿಕೆ ಮತ್ತು ದಮನಕ್ಕೆ ಗುರಿಯಾಗಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ