ಸಂವಿಧಾನ ಪಾಠ ಕಡ್ಡಾಯ?
Team Udayavani, Dec 1, 2017, 11:03 AM IST
ಹೊಸದಿಲ್ಲಿ: ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಮಾನವೀಯತೆ, ನಿರ್ವಹಣೆ ಮತ್ತು ಸಮಾಜ ವಿಜ್ಞಾನ, ಪರಿಸರ ವಿಜ್ಞಾನ, ಭಾರತೀಯ ಸಂವಿಧಾನ ಹಾಗೂ ಭಾರತೀಯ ಸಾಂಪ್ರದಾಯಿಕ ವಿಚಾರಗಳ ಮೂಲತತ್ವ ಕುರಿತಾಗಿಯೂ ಶಿಕ್ಷಣ ಪಡೆಯಲಿದ್ದಾರೆ. ಅಷ್ಟೇ ಅಲ್ಲ ಇದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಐಐಟಿ ಹಾಗೂ ಎನ್ಐಟಿ ವಿದ್ಯಾರ್ಥಿಗಳಿಗೆ ಮಾತ್ರ ಈ ಶಿಕ್ಷಣಗಳಿಂದ ವಿನಾಯಿತಿ ನೀಡಲಾಗಿದೆ!
ಅಚ್ಚರಿಯಾದರೂ ಇದು ಸತ್ಯ. ಮಾದರಿ ಪಠ್ಯಕ್ರಮದ ಭಾಗವಾಗಿರುವುದರಿಂದ ಪಾಠ ಮಾಡಲೇಬೇಕೆಂದು ಹೇಳಲಾಗಿದೆ. ಅಖೀಲ ಭಾರತ ತಾಂತ್ರಿಕ ಶಿಕ್ಷಣ ಸಂಸ್ಥೆ (ಎಐಸಿಟಿಇ) ಹಾಗೂ ತಾಂತ್ರಿಕ ಶಿಕ್ಷಣ ನಿರ್ವಹಣ ಮಂಡಳಿ ಈ ಸಂಬಂಧ ಸೂಚನೆ ನೀಡಿದೆ ಎಂದು ಹೇಳಲಾಗಿದೆ. ಅಲ್ಲದೆ, ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾ ಲಯ ಇದಕ್ಕೆ ಒಪ್ಪಿಗೆ ನೀಡಿದೆ. ಇದರ ಪ್ರಕಾರ ದೇಶದ 3,000ಕ್ಕೂ ಹೆಚ್ಚು ಎಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳು ಇದನ್ನು ಅಳವಡಿಸಿಕೊಳ್ಳ ಬೇಕಾ ಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಖರಗ್ಪುರ್ ಐಐಟಿ ಪ್ರಾಧ್ಯಾಪಕಿ ಇಂದ್ರಾನಿಲ್ ಮನ್ನಾ, “”ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಏನನ್ನಾದರೂ ಬದಲಾವಣೆ ಬಯಸಬೇ ಕೆಂದರೆ ಈ ಶಿಕ್ಷಣದ ಆವಶ್ಯಕತೆ ಇದೆ. ಅಲ್ಲದೆ, ಇದು ವಿದ್ಯಾರ್ಥಿಗಳಿಗೂ ಪ್ರಯೋಜನಕಾರಿ ಯಾಗಿದೆ. ಮಾನವೀಯತೆ, ನಿರ್ವಹಣೆ ಮತ್ತು ಸಮಾಜ ವಿಜ್ಞಾನ, ಪರಿಸರ ವಿಜ್ಞಾನ, ಭಾರತೀಯ ಸಂವಿಧಾನ ಶಿಕ್ಷಣಗಳು ಎಂಜಿನಿ ಯರಿಂಗ್ ವಿದ್ಯಾರ್ಥಿಗಳಿಗೆ ಕಲಿಸದೇ ಇದ್ದಲ್ಲಿ ಅವರಿಗೆ ಪೂರ್ಣ ಶಿಕ್ಷಣ ಸಿಕ್ಕಿದಂತಾಗುವುದಿಲ್ಲ. ಈ ನಿಟ್ಟಿನಲ್ಲಿ ಈ ಶಿಕ್ಷಣ ಪಾಠಗಳ ಅಗತ್ಯತೆ ಇದ್ದೇ ಇದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ