Goa ಶೀಘ್ರದಲ್ಲಿಯೇ ಕನ್ನಡ ಭವನ ನಿರ್ಮಾಣ ಕಾರ್ಯ ಪೂರ್ಣ: ಸಚಿವ ಶಿವರಾಜ್ ತಂಗಡಗಿ
Team Udayavani, Dec 16, 2023, 7:59 PM IST
ಪಣಜಿ: ಗೋವಾ ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಕನ್ನಡಿಗರು ಸ್ಥಾಯಿಕರಾಗಿದ್ದಾರೆ. ಇಡೀ ಗೋವಾದ ಜನಸಂಖ್ಯೆ 15 ಲಕ್ಷ ಕರ್ನಾಟಕದಿಂದ ಗೋವಾದಲ್ಲಿ ಉದ್ಯೋಗಕ್ಕಾಗಿ ಬಂದು ಹೋಗುವವರ ಸಂಖ್ಯೆ ಕೂಡ ಇದಕ್ಕಿಂತ ಹೆಚ್ಚಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಕನ್ನಡಿಗರಿರುವ ಗೋವಾದಲ್ಲಿ ಶೀಘ್ರದಲ್ಲಿಯೇ ಕನ್ನಡ ಭವನ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಗೋವಾ ಕನ್ನಡಿಗರಿಗೆ ಭರವಸೆ ನೀಡಿದರು.
ಗೋವಾದ ವಾಸ್ಕೊ ಜುವಾರಿನಗರದಲ್ಲಿರುವ ಶ್ರೀ ಯಲ್ಲಾಲಿಂಗೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ಗೋವಾದ ವಿವಿಧ ಸರ್ಕಾರಿ ಇಲಾಖೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರಸಕ್ತ ಬಾರಿ ಗೋವಾದಲ್ಲಿ ಕನ್ನಡ ಭವನಕ್ಕೆ ಕನಿಷ್ಠ ಒಂದು ಎಕರೆ ಅಥವಾ ಅರ್ಧ ಎಕರೆಯನ್ನಾದರೂ ಭೂಮಿಯನ್ನೂ ಖರೀದಿಸುತ್ತೇವೆ. ಇಷ್ಟು ಹೊತ್ತಿಗಾಗಲೇ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕತ್ತು, ಬೇರೆ ರಾಜ್ಯಗಳಲ್ಲಿ ಕನ್ನಡ ಭವನ ನಿರ್ಮಾಣವಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕೂಡ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡೋಣ ಎಂದಿದ್ದಾರೆ. ಇದೀಗ ಗೋವಾದಲ್ಲಿ ಎರಡು ಕಡೆಗಳಲ್ಲಿ ಜಾಗ ವೀಕ್ಷಣೆ ಮಾಡಿದ್ದೇವೆ ಎಂದು ಸಚಿವ ಶಿವರಾಜ ತಂಗಡಗಿ ನುಡಿದರು.
ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ಮಾತನಾಡಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ನಮ್ಮ ಬಹು ವರ್ಷಗಳ ಕನಸಾಗಿದೆ. ಈ ಹಿನ್ನೆಲೆಯಲ್ಲಿ ನಾವು ಕನ್ನಡ ಭವನಕ್ಕಾಗಿ ಸತತ ಪ್ರಯತ್ನ ನಡೆಸುತ್ತಾ ಬಂದಿದ್ದೇವೆ. ಆದರೆ ಪ್ರಸಕ್ತ ಬಾರಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣವಾಗಲಿದೆ ಎಂಬ ವಿಶ್ವಾಸ ನಮಗಿದೆ ಎಂದರು. ಈ ಸಂದರ್ಭದಲ್ಲಿ ಗೋವಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಚಿವ ಶಿವರಾಜ್ ತಂಗಡಗಿ ರವರಿಗೆ ಕನ್ನಡ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಡಾ.ಸಿದ್ಧಣ್ಣ ಮೇಟಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಪಂ ಮಾಜಿ ಅಧ್ಯಕ್ಷ ನೀಲಮ್ಮ ಮೇಟಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಸಾಪ ಗೋವಾ ರಾಜ್ಯ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್,ಕಸಾಪ ಗೋವಾ ರಾಜ್ಯ ಘಟಕದ ಮಹಿಳಾ ಪ್ರತಿನಿಧಿ ವಿದ್ಯಾ ದಿನ್ನಿ, ಶ್ರೀ ಯಲ್ಲಾಲಿಂಗೇಶ್ವರ ಮಠದ ಅರ್ಚಕ ಕಂಬಳ್ಳ ಮಹಾರಾಜರು, ಕಸಾಪ ಗೋವಾ ರಾಜ್ಯ ಘಟಕದ ಗೌ.ಕೋಶಾಧ್ಯಕ್ಷ ಪುಟ್ಟಸ್ವಾಮಿ ಗುಡಿಗಾರ, ಸಂಘ ಸಂಸ್ಥೆಗಳ ಪ್ರತಿನಿಧಿ ಪಡದಯ್ಯಾ ಹಿರೇಮಠ, ಕಸಾಪ ದಕ್ಷಿಣ ಗೋವಾ ಜಿಲ್ಲಾಧ್ಯಕ್ಷ ಪರಶುರಾಮ ಕಲಿವಾಳ, ಸಾಲಸೇಟ್ ತಾಲೂಕಾಧ್ಯಕ್ಷ ಬಸವರಾಜ್ ಬನ್ನಿಕೊಪ್ಪ, ಕಸಾಪ ಪಣಜಿ ತಾಲೂಕಾಧ್ಯಕ್ಷ ಹನುಮಂತ ಗೊರವರ್, ಉತ್ತರ ಗೋವಾ ಜಿಲ್ಲಾಧ್ಯಕ್ಷ ಮಡಿವಾಳಯ್ಯ ಗಣಾಚಾರಿ, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಕರವೇ ಗೋವಾ ರಾಜ್ಯಾಧ್ಯಕ್ಷ ಮಂಜು ನಾಟೀಕರ್, ಶ್ರೀ ದಾಮೋದರ ಸೇವಾ ಸಮೀತಿಯ ಅಧ್ಯಕ್ಷ ಸಂಗಮೇಶ್ ಹಗರಿ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದಸರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ