ನ್ಯಾಯಾಂಗ ನಿಂದನೆ ಪ್ರಕರಣ: ಇಂದು ಮಲ್ಯ ಶಿಕ್ಷೆ ಪ್ರಮಾಣ ನಿಗದಿ
Team Udayavani, Sep 5, 2022, 7:45 AM IST
ನವದೆಹಲಿ: ಬ್ಯಾಂಕುಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಅವಧಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ಪ್ರಕಟಿಸುವ ಸಾಧ್ಯತೆಯಿದೆ.
ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾ. ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠವು ಮಾ.10ರಂದೇ ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.
ಬ್ಯಾಂಕುಗಳಿಗೆ 9 ಸಾವಿರ ಕೋಟಿ ರೂ. ವಂಚಿಸಿದ್ದಲ್ಲದೆ, ಕೋರ್ಟ್ ಆದೇಶದ ಹೊರತಾಗಿಯೂ ಮಲ್ಯ ಅವರು ತಮ್ಮ ಹೆಸರಲ್ಲಿದ್ದ ಆಸ್ತಿಯನ್ನು ತಮ್ಮ ಮಕ್ಕಳ ಹೆಸರಿಗೆ ವರ್ಗಾಯಿಸಿದ್ದರು. ಈ ಮೂಲಕ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಆರೋಪಿಸಿತ್ತು.