ರಫೇಲ್ ತೀರ್ಪು ಕುರಿತ ತಪ್ಪು ಹೇಳಿಕೆ: ಎ.22ರೊಳಗೆ ಉತ್ತರಿಸಿ, ರಾಹುಲ್ ಗೆ ಸುಪ್ರಿಂ ಆದೇಶ
Team Udayavani, Apr 15, 2019, 12:44 PM IST
ಹೊಸದಲ್ಲಿ : ರಫೇಲ್ ಕೇಸ್ ತೀರ್ಪಿನಲ್ಲಿ ತಾನು ಹೇಳಿರದ ವಿಚಾರಗಳನ್ನು ತಪ್ಪಾಗಿ ಉಲ್ಲೇಖೀಸಿ ಹೇಳಿಕೆ ನೀಡಿರುವ ಕಾಂಗ್ರೆಸ್ ರಾಹುಲ್ ಗಾಂಧಿ ಅವರು ಎ.22ರ ಒಳಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ರಫೇಲ್ ಕುರಿತಾದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿರದ ವಿಚಾರಗಳನ್ನು ಉಲ್ಲೇಖೀಸಿ ಹೇಳಿಕೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೋರ್ಟ್ ನಿಂದನೆಯ ಕ್ರಮವನ್ನು ಆಗ್ರಹಿಸಿರುವ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ಅವರ ಅರ್ಜಿಯನ್ನು ತಾನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
”ರಾಹುಲ್ ಗಾಂಧಿ ಮಾಡಿದ್ದಾರೆ ಎನ್ನಲಾಗಿರುವ ಭಾಷಣದಲ್ಲಿ , ಮಾಧ್ಯಮಕ್ಕೆ ಮತ್ತು ಸಾರ್ವಜನಿಕರಿಗೆ ನೀಡಿರುವ ಹೇಳಿಕೆಗಳಲ್ಲಿ ರಫೇಲ್ ತೀರ್ಪಿನ ಬಗ್ಗೆ ಆಡಿರುವ ಮಾತುಗಳನ್ನು ಸುಪ್ರಿಂ ಕೋರ್ಟಿಗೆ ತಪ್ಪಾಗಿ ಆರೋಪಿಸಲಾಗಿದೆ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ; ಅಟಾರ್ನಿ ಜನರಲ್ ಅವರು ಆಕ್ಷೇಪಿಸಿರುವ ಕೆಲವು ದಾಖಲೆ ಪತ್ರಗಳು ಕಾನೂನು ಸಮ್ಮತವೆಂದು ಪರಿಗಣಿಸುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿರುವ ರೀತಿಯ ಅಭಿಪ್ರಾಯ ವ್ಯಕ್ತಪಡಿಸುವ ಅವಕಾಶ ಕೋರ್ಟಿಗೆ ಇರಲಿಲ್ಲ ಎಂದು ಕೂಡ ನಾವು ಸ್ಪಷ್ಟಪಡಿಸಬಯಸುತ್ತೇವೆ” ಎಂದು ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ