ಕಾಂಗ್ರೆಸ್ ಅಧ್ಯಕ್ಷ ಚುನಾವಣೆ : ಕೆ.ಎನ್.ತ್ರಿಪಾಠಿ ನಾಮಪತ್ರ ತಿರಸ್ಕಾರ
ಯಾರೇ ಅಧ್ಯಕ್ಷರಾದರೂ ಗಾಂಧಿ ಕುಟುಂಬಕ್ಕೆ "ವಿದಾಯ" ಹೇಳುವಷ್ಟು ಮೂರ್ಖರಲ್ಲ : ತರೂರ್
Team Udayavani, Oct 1, 2022, 4:11 PM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಒಟ್ಟು 20 ಫಾರ್ಮ್ ಗಳನ್ನು ಸಲ್ಲಿಸಲಾಗಿದ್ದು, ಅವುಗಳಲ್ಲಿ 4 ಫಾರ್ಮ್ ಗಳನ್ನು ಸಹಿ ಸಮಸ್ಯೆಯಿಂದಾಗಿ ಪರಿಶೀಲನಾ ಸಮಿತಿ ತಿರಸ್ಕರಿಸಿದೆ ಎಂದು ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಶನಿವಾರ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಯುಪಿಯಲ್ಲಿ ಹಿಜಾಬ್ ವಿಚಾರಕ್ಕೆ ದೌರ್ಜನ್ಯ: ಪ್ರಾಂಶುಪಾಲೆಯ ಆರೋಪ; ವಿಡಿಯೋ ವೈರಲ್
ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ರವರೆಗೆ ಸಮಯವಿದ್ದು, ಅದರ ನಂತರ ಚಿತ್ರವು ಸ್ಪಷ್ಟವಾಗುತ್ತದೆ. ಯಾರೂ ಹಿಂಪಡೆಯದಿದ್ದರೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಮಿಸ್ತ್ರಿ ಹೇಳಿದ್ದಾರೆ.
ಕೆ.ಎನ್.ತ್ರಿಪಾಠಿ ಅವರ ಫಾರ್ಮ್ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸದ ಕಾರಣ ತಿರಸ್ಕರಿಸಲಾಗಿದೆ, ಸಹಿ ಸಂಬಂಧಿತ ಸಮಸ್ಯೆಗಳಿದ್ದವು ಎಂದು ಮಿಸ್ತ್ರಿ ಸ್ಪಷ್ಟಪಡಿಸಿದರು.
ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.
ಮೂರ್ಖರಲ್ಲ : ಶಶಿ ತರೂರ್
ಪಕ್ಷದ ಅಧ್ಯಕ್ಷರ ಆಯ್ಕೆಯ ನಂತರ ಗಾಂಧಿ ಕುಟುಂಬದ ಪಾತ್ರದ ಬಗ್ಗೆ ಕೇಳಿದಾಗ, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಶಶಿ ತರೂರ್ ಪ್ರತಿಕ್ರಿಯಿಸಿ , “ಗಾಂಧಿ ಕುಟುಂಬ ಮತ್ತು ಕಾಂಗ್ರೆಸ್ನ ಡಿಎನ್ಎ ಒಂದೇ . ಯಾರೇ ಅಧ್ಯಕ್ಷರಾದರೂ ಗಾಂಧಿ ಕುಟುಂಬಕ್ಕೆ “ವಿದಾಯ” ಹೇಳುವಷ್ಟು ಮೂರ್ಖರಲ್ಲ. ಅವರು ನಮಗೆ ದೊಡ್ಡ ಆಸ್ತಿ” ಎಂದು ಪ್ರತಿಕ್ರಿಯಿಸಿದ್ದಾರೆ.
”ಇದು ಕದನವಲ್ಲ.ಪಕ್ಷದ ಕಾರ್ಯಕರ್ತರು ಆಯ್ಕೆ ಮಾಡಲಿ ಎಂಬುದು ನಮ್ಮ ಸಂದೇಶ. ಪಕ್ಷದ ಕೆಲಸದಿಂದ ನಿಮಗೆ ತೃಪ್ತಿ ಇದ್ದರೆ ಖರ್ಗೆ ಸಾಹೇಬರಿಗೆ ಮತ ನೀಡಿ ಎಂದು ನಾನು ಹೇಳುತ್ತಿದ್ದೇನೆ. ನೀವು ಬದಲಾವಣೆಯನ್ನು ಬಯಸಿದರೆ, ನಾನು ಅಲ್ಲಿದ್ದೇನೆ. ಆದರೆ ಸೈದ್ಧಾಂತಿಕ ಸಮಸ್ಯೆ ಇಲ್ಲ” ಎಂದು ತರೂರ್ ಹೇಳಿದರು.
”ನಾವು ತೋರುತ್ತಿರುವ ಆಂತರಿಕ ಪ್ರಜಾಪ್ರಭುತ್ವ ಬೇರೆ ಯಾವ ಪಕ್ಷದಲ್ಲೂ ಇಲ್ಲ. ಚುನಾವಣೆ ಘೋಷಣೆಯಾದಾಗ ನನಗೆ ಸ್ಪರ್ಧಿಸುವ ಇರಾದೆ ಇತ್ತು. ನಾನು ಒಂದು ಲೇಖನವನ್ನು ಬರೆದಿದ್ದೇನೆ, ಚುನಾವಣೆಯು ಪಕ್ಷಕ್ಕೆ ಒಳ್ಳೆಯದು ಎಂದು ಹೇಳುತ್ತದೆ ಮತ್ತು ಅದರ ಕಾರಣಗಳನ್ನು ಉಲ್ಲೇಖಿಸಿದ್ದೆ” ಎಂದು ಸಂಸದ ತರೂರ್ ಹೇಳಿದರು.
” ಹಲವಾರು ಜನರು, ಸಾಮಾನ್ಯ ಕಾರ್ಯಕರ್ತರು ನನಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೇಳಿದರು. ನಾನು ಯೋಚಿಸಲು ಮತ್ತು ಜನರೊಂದಿಗೆ ಮಾತನಾಡಲು ಪ್ರಾರಂಭಿಸಿದೆ . ನಾನು ಪಕ್ಷವನ್ನು ಬಲಪಡಿಸಲು ಬಯಸುತ್ತೇನೆ, ಪಕ್ಷದೊಳಗಿನ ಬದಲಾವಣೆಗಳ ಧ್ವನಿಯಾಗುತ್ತೇನೆ ಮತ್ತು ಅದರ ವಿಭಿನ್ನ ಮುಖವನ್ನು ಜನರಿಗೆ ತೋರಿಸುತ್ತೇನೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ