ಉದ್ಧವ್ ಠಾಕ್ರೆಗೆ ಮತ್ತೊಂದು ಸವಾಲೆಸೆದ ನವನೀತ್ ಕೌರ್
ತಾಕತ್ತಿದ್ದರೆ ಚುನಾವಣೆಯಲ್ಲಿ ನನ್ನೆದುರು ನಿಂತು ಗೆದ್ದು ತೋರಿಸಿ ಎಂದ ಸಂಸದೆ
Team Udayavani, May 8, 2022, 8:28 PM IST
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಮನೆ ಮುಂದೆ ಹನುಮಾನ್ ಚಾಲೀಸ ಪಠಿಸುವುದಾಗಿ ಸವಾಲೆಸೆದು, ಬಂಧಿತರಾಗಿ, ಈಗ ಜೈಲಿನಿಂದ ಹೊರಬಂದಿರುವ ಸಂಸದೆ ನವನೀತ್ ಕೌರ್ ಸಿಎಂಗೆ ಮತ್ತೊಂದು ಸವಾಲೆಸೆದಿದ್ದಾರೆ.
“ತಾಕತ್ತಿದ್ದರೆ ಚುನಾವಣೆಯಲ್ಲಿ ನನ್ನೆದುರು ನಿಂತು ಗೆದ್ದು ತೋರಿಸಿ’ ಎಂದು ಸವಾಲು ಹಾಕಿದ್ದಾರೆ.
“ಉದ್ಧವ್ ಅವರು ಯಾವುದಾದರೂ ಕ್ಷೇತ್ರದಲ್ಲಿ ನಿಲ್ಲಲಿ. ನಾನೂ ಅದೇ ಕ್ಷೇತ್ರದಲ್ಲಿ ನಿಲ್ಲುತ್ತೇನೆ. ಶ್ರಮ ಮತ್ತು ಪ್ರಾಮಾಣಿಕವಾಗಿ ದುಡಿದು ಗೆಲ್ಲುತ್ತೇನೆ. ಮುಂಬೈನ ಜನರು ಮತ್ತು ಪ್ರಭು ಶ್ರೀರಾಮನೇ ಶಿವಸೇನೆಗೆ ಪಾಠ ಕಲಿಸಲಿದ್ದಾರೆ’ ಎಂದು ನವನೀತ್ ಹೇಳಿದ್ದಾರೆ.
ನವನೀತ್ ಕೌರ್ ಮತ್ತು ಅವರ ಪತಿ ರವಿ ರಾಣಾ ಅವರಿಗೆ ಜಾಮೀನು ನೀಡುವ ವೇಳೆ, ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಬಾರದು ಎಂದು ನ್ಯಾಯಾಲಯ ಹೇಳಿದ್ದರೂ ನವನೀತ್ ಮಾಧ್ಯಮದೆದುರು ಮಾತನಾಡಿರುವ ಹಿನ್ನೆಲೆ ಶಿವಸೇನೆಯು ಅವರು ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ