- Saturday 14 Dec 2019
ಸಂಸತ್ನಲ್ಲಿ ಕೋಲಾಹಲ
Team Udayavani, Jul 10, 2019, 6:00 AM IST
ನವದೆಹಲಿ: ರಾಜ್ಯದಲ್ಲಿನ ರಾಜಕೀಯ ಹೈಡ್ರಾಮಾ ಸಂಸತ್ನಲ್ಲಿ ಪ್ರತಿಧ್ವನಿಸಿದ್ದೂ ಅಲ್ಲದೇ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರಕ್ಕೂ ಕಾರಣವಾಯಿತು.
ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರನಡೆದರೆ, ರಾಜ್ಯಸಭೆಯಲ್ಲಿ ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು. ಅಚ್ಚರಿಯೆಂದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ ಇತರೆ ಸದಸ್ಯರ ಜತೆಗೂಡಿ ಘೋಷಣೆಗಳನ್ನು ಕೂಗಿದ್ದು ಕಂಡುಬಂತು.
ಲೋಕಸಭೆಯ ಶೂನ್ಯ ವೇಳೆಯಲ್ಲಿ ಕರ್ನಾಟಕದ ಬಿಕ್ಕಟ್ಟು ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಕಾಂಗ್ರೆಸ್ ಕೇಳಿಕೊಂಡಿತಾದರೂ ಅದಕ್ಕೆ ಸ್ಪೀಕಲ್ ಓಂ ಬಿರ್ಲಾ ಅವಕಾಶ ಕಲ್ಪಿಸಲಿಲ್ಲ. ಸೋಮವಾರವೇ ಈ ವಿಚಾರದ ಚರ್ಚೆ ನಡೆದಿರುವ ಕಾರಣ, ಮತ್ತೂಮ್ಮೆ ಅವಕಾಶ ನೀಡಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ‘ಕರ್ನಾಟಕ ಸರ್ಕಾರವನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಶಾಸಕರ ಕುದುರೆ ವ್ಯಾಪಾರದಲ್ಲಿ ಬಿಜೆಪಿ ತೊಡಗಿದೆ’ ಎಂದು ಆರೋಪಿಸಿದರು.
ಅದಕ್ಕೆ ಉತ್ತರಿಸಿದ ಗೃಹ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಬಿಕ್ಕಟ್ಟು ಕಾಂಗ್ರೆಸ್ನ ಆಂತರಿಕ ಸಮಸ್ಯೆ. ತನ್ನ ಮನೆಯನ್ನು ಸರಿಯಾಗಿ ಇಟ್ಟುಕೊಳ್ಳಲು ಆಗದ ಕಾಂಗ್ರೆಸ್, ಈಗ ಲೋಕಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು.
ಈ ವಿಭಾಗದಿಂದ ಇನ್ನಷ್ಟು
-
ಹಾಮಿರ್ಪುರ: ಕಾರೊಂದು ಆಳವಾದ ಕಮರಿಗೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ ಹಾಮಿರ್ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೆ ಮೂವರು...
-
ದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕಾ ಪ್ರದೇಶದ ಮರದ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವುನೋವು...
-
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಎನ್ ಆರ್ಸಿ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು...
-
ಹೊಸದಿಲ್ಲಿ: ನೂತನವಾಗಿ ಜಾರಿಗೊಂಡಿರುವ ಪೌರತ್ವ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಶುರುವಾಗಿದ್ದ ಪ್ರತಿಭಟನೆಗಳು ಹಾಗೂ ಹಿಂಸಾಚಾರ, ರಾಷ್ಟ್ರ...
-
ಹೊಸದಿಲ್ಲಿ: ಬೆಂಗಳೂರಿನಲ್ಲಿ ಕಳೆದ ವರ್ಷ ಬೆಳಕಿಗೆ ಬಂದ ಆ್ಯಂಬಿಡೆಂಟ್ ಮಾರ್ಕೆಟಿಂಗ್ ಪ್ರೈ.ಲಿ.ನ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಶುಕ್ರವಾರ...
ಹೊಸ ಸೇರ್ಪಡೆ
-
ಹಾಮಿರ್ಪುರ: ಕಾರೊಂದು ಆಳವಾದ ಕಮರಿಗೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ ಹಾಮಿರ್ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೆ ಮೂವರು...
-
ದೆಹಲಿ: ಪಶ್ಚಿಮ ದೆಹಲಿಯ ಮುಂಡ್ಕಾ ಪ್ರದೇಶದ ಮರದ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಸಾವುನೋವು...
-
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಯಾವುದೇ ರೀತಿಯ ಎನ್ ಆರ್ಸಿ ಅಥವಾ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಕ್ಕೆ ತಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು...
-
ನಾನು 10ನೇ ತರಗತಿಯಲ್ಲಿದ್ದೆ. ಪ್ರತಿ ರಾತ್ರಿ 8 ಗಂಟೆ ನೈಟ್ ಶಿಫ್ಟ್ ಮಾಡಿ, ಬೆಳಗ್ಗೆ ಶಾಲೆಗೆ ಹೋಗುತ್ತಿದ್ದೆ. ಡಿಸ್ಲೆಕ್ಸಿಯಾದ ಸಮಸ್ಯೆಯಿತ್ತು, ಕೆಲಸದ ಒತ್ತಡದಿಂದ...
-
ಬೆಂಗಳೂರು: ವಿದ್ಯಾರ್ಥಿಗಳಿಗೆ ಸಂವಿಧಾನದ ಮೂಲ ಆಶಯ ತಿಳಿಸುವ ಮತ್ತು ಸಂವಿಧಾನವನ್ನು ಎಲ್ಲೆಡೆ ಪ್ರಚಾರ ಮಾಡುವ ಉದ್ದೇಶದಿಂದ ಶಾಲೆಗಳಲ್ಲಿರುವ ಮುಖ್ಯ ಶಿಕ್ಷಕರ...