ಕೋವಿಡ್ ಸೋಂಕಿನ ನಾಗಾಲೋಟ ತಡೆಯಿರಿ; ಕರ್ನಾಟಕ ಸಹಿತ 3 ರಾಜ್ಯಗಳಿಗೆ ಕೇಂದ್ರ ಸೂಚನೆ
Team Udayavani, Sep 6, 2020, 6:05 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕರ್ನಾಟಕ ಸಹಿತ ಮೂರು ರಾಜ್ಯಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಕೇಂದ್ರ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಂಕನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಕರ್ನಾಟಕಕ್ಕೆ ಈ ಕುರಿತು ನಿರ್ದೇಶನ ನೀಡಿರುವ ಕೇಂದ್ರವು, ಸೋಂಕು ವ್ಯಾಪಿಸು ವಿಕೆಯ ಸರಪಳಿಯನ್ನು ಮುರಿಯಲು ಮತ್ತು ಮರಣ ಪ್ರಮಾಣ ಶೇ. 1ಕ್ಕಿಂತ ಕೆಳಗಿರುವಂತೆ ನೋಡಿಕೊಳ್ಳಲು ಕಠಿನ ಕ್ರಮಗಳನ್ನು ಜಾರಿ ಮಾಡುವಂತೆ ಸೂಚಿಸಿದೆ. ಶುಕ್ರವಾರದಿಂದ ಶನಿವಾರದ ನಡುವಣ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ಪತ್ತೆಯಾಗಿರುವ ಸೋಂಕುಪೀಡಿತರ ಪೈಕಿ ಶೇ. 46ರಷ್ಟು ಮಂದಿ ಈ ಮೂರು ರಾಜ್ಯಗಳಿಗೆ ಸೇರಿದ್ದು, ಶೇ. 52ರಷ್ಟು ಸಾವುಗಳು ಕೂಡ ಈ ರಾಜ್ಯಗಳಲ್ಲೇ ಸಂಭವಿಸಿವೆ.
ಏನೇನು ಕ್ರಮ?
ಪರೀಕ್ಷೆ ಹೆಚ್ಚಳ, ಮರಣ ತಗ್ಗಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ವೈದ್ಯಕೀಯ ನಿರ್ವಹಣೆ, ಸೋಂಕುಪೀಡಿತರ ಮೇಲೆ ನಿಗಾ, ಸೂಕ್ತ ಚಿಕಿತ್ಸೆ, ಸೋಂಕುಪೀಡಿತರ ಪತ್ತೆ ಮುಂತಾದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಕೆಲವು ಜಿಲ್ಲೆಗಳು ಕೊರೊನಾ ಹಾಟ್ಸ್ಪಾಟ್ಗಳಾಗಿ ಬದಲಾಗಿರುವ ಕಾರಣ ಅಲ್ಲಿ ಹೆಚ್ಚಿನ ಗಮನ ವಹಿಸುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…