ಮತಾಂತರ ಗಂಭೀರ ವಿಷಯ, ಅದಕ್ಕೆ ರಾಜಕೀಯ ಬಣ್ಣ ನೀಡಬಾರದು: ಸುಪ್ರೀಂ
Team Udayavani, Jan 9, 2023, 8:02 PM IST
ನವದೆಹಲಿ: ಧಾರ್ಮಿಕ ಮತಾಂತರವು ಗಂಭೀರ ವಿಷಯವಾಗಿದ್ದು ಅದಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ ಮನವಿಯ ಮೇಲೆ ಸೋಮವಾರ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ನೆರವು ಕೋರಿ, ಆಮಿಷದಿಂದ ಏನಾದರೂ ಸಂಭವಿಸುತ್ತಿದ್ದರೆ ಏನು ಮಾಡಬೇಕು? ತೆಗೆದುಕೊಳ್ಳಬಹುದಾದ ಕ್ರಮಗಳು ಯಾವುವು ಎಂದು ಪೀಠ ಕೇಳಿದೆ.
“ಬೆದರಿಕೆ, ಉಡುಗೊರೆಗಳು ಮತ್ತು ವಿತ್ತೀಯ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡುವ ಮೂಲಕ ಧಾರ್ಮಿಕ ಮತಾಂತರಗಳನ್ನು ಪರಿಶೀಲಿಸುವಂತೆ ಅರ್ಜಿದಾರರು ಕೋರಿದ ಪ್ರಕರಣದಲ್ಲಿ ವೆಂಕಟರಮಣಿಗೆ ಹಾಜರಾಗುವಂತೆ ನ್ಯಾಯಮೂರ್ತಿಗಳಾದ ಎಂ. ಆರ್. ಶಾ ಮತ್ತು ಸಿ.ಟಿ. ರವಿಕುಮಾರ್ ಅವರ ಪೀಠವು ಕೇಳಿದೆ.
ಮೇಲ್ನೋಟಕ್ಕೆ ಧಾರ್ಮಿಕ ಮತಾಂತರಗಳು ನಿಜವಾಗಿ ನಡೆಯುತ್ತಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಮತ್ತು ಮತಾಂತರದ ಹಕ್ಕಿನ ನಡುವೆ ವ್ಯತ್ಯಾಸವಿದೆ ಎಂದು ಅದು ಹೇಳಿದೆ.
ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲ ಪಿ. ವಿಲ್ಸನ್, ಅರ್ಜಿಯನ್ನು ರಾಜಕೀಯ ಪ್ರೇರಿತ ಪಿಐಎಲ್ ಎಂದು ಕರೆದಿದ್ದು , ರಾಜ್ಯದಲ್ಲಿ ಇಂತಹ ಮತಾಂತರಗಳ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಇಂತಹ ಮತಾಂತರಗಳನ್ನು ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ವಿಷಯವೆಂದು ಬಣ್ಣಿಸಿ, ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದರು.
ದಾನದ ಉದ್ದೇಶವು ಮತಾಂತರವಾಗಬಾರದು ಎಂದು ಪ್ರತಿಪಾದಿಸಿದ ಉನ್ನತ ನ್ಯಾಯಾಲಯವು ಬಲವಂತದ ಧಾರ್ಮಿಕ ಮತಾಂತರವು ಗಂಭೀರ ವಿಷಯ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಈ ಹಿಂದೆ ಹೇಳಿರುವುದನ್ನು ಪುನರುಚ್ಚರಿಸಿತು.
ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ