ಮತಾಂತರಿಸಿ ಉಗ್ರರಿಗೆ ಮಾರಾಟ ? ಪಾರಾದ ಕೇರಳದ ಮಹಿಳೆ


Team Udayavani, Jan 12, 2018, 6:00 AM IST

marata.jpg

ಕೊಚ್ಚಿ/ತಿರುವನಂತಪುರ: ಯುವತಿಯೊಬ್ಬಳನ್ನು ಪ್ರೀತಿಸಿ, ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿ ವಿವಾಹವಾಗಿ ಬಳಿಕ ಐಸಿಸ್‌ ಉಗ್ರರಿಗೆ “ಸೆಕ್ಸ್‌ ಸ್ಲೇವ್‌’ ಆಗಿ ಮಾರಾಟ ಮಾಡಲು ಯತ್ನಿಸಿದ್ದ ಆಘಾತ ಕಾರಿ ಘಟನೆಯೊಂದು ಬಹಿರಂಗವಾಗಿದೆ. ಅದೃಷ್ಟವಶಾತ್‌ ಈ ಯುವತಿ ಬಚಾವ್‌ ಆಗಿದ್ದು, ಇಡೀ ಘಟನೆಯ ಬಗ್ಗೆ ಕೇರಳ ಹೈಕೋರ್ಟ್‌ಗೆ ದೂರನ್ನೂ ನೀಡಿದ್ದಾಳೆ. 

ಈ ಸಂಬಂಧ ಪೊಲೀಸರು ಬುಧವಾರ ಇಬ್ಬರನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎರ್ನಾಕುಳಂ ಗ್ರಾಮಾಂತರ ಎಸ್‌ಪಿ ಎ.ವಿ. ಜಾರ್ಜ್‌, “ಸೌದಿಯಲ್ಲಿ ಮಹಿಳೆಯನ್ನು ರಕ್ಷಿಸಲಾಗಿದೆ. ಬಂಧಿಸಲಾಗಿರುವ ಫ‌ವಾಜ್‌ ಜಮಾಲ್‌, ಮೊಹಮ್ಮದ್‌ ಸಯೀದ್‌ ವಿರುದ್ಧ ಕೇಸು ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಇನ್ನೂ ಎಂಟು ಮಂದಿಯ ಶೋಧ ನಡೆಸಲಾಗುತ್ತಿದೆ’ ಎಂದಿದ್ದಾರೆ ಎಂದು ಹಿಂದೂಸ್ಥಾನ್‌ ಟೈಮ್ಸ್‌ ವರದಿ ಮಾಡಿದೆ.

ಗುಜರಾತ್‌ನಲ್ಲಿ ಹುಟ್ಟಿ, ಬೆಳೆದು ಬೆಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಬಂದಿದ್ದ ಕೇರಳದ ಪತ್ತನಂತಿಟ್ಟ ಮೂಲದ ಅಕ್ಷರಾ ಬೋಸ್‌(24)ಗೆ 2015ರಲ್ಲಿ  ಮೊಹಮ್ಮದ್‌ ರಿಯಾಜ್‌(26) ಎಂಬವನ ಪರಿಚಯವಾಗಿತ್ತು. ಪರಿಚಯ ದೈಹಿಕ ಸಂಬಂಧದವರೆಗೂ ವಿಸ್ತರಿಸಿತ್ತು. ಈ ಸಂದರ್ಭ ಆತ ಆಕೆಗೆ ಅರಿವಿಲ್ಲದಂತೆ ವೀಡಿಯೋ ತೆಗೆದು ಈ ಮೂಲಕ ಬ್ಲ್ಯಾಕ್‌ವೆುàಲ್‌ ಶುರು ಮಾಡಿದ್ದ. ಅಲ್ಲದೆ ಈಕೆಯನ್ನು ಕೇರಳದಲ್ಲಿರುವ ಉತ್ತರ ಪರವೂರಿಗೆ ಕರೆದೊಯ್ದು ಬಲವಂತವಾಗಿ ಮದ್ರಸಾವೊಂದಕ್ಕೆ ಸೇರಿಸಿ ಕುರಾನ್‌ ಕಲಿಯುವಂತೆ ಮಾಡಿದ್ದ. ಇಲ್ಲಿ ರಿಯಾಜ್‌ ಆಣತಿಯಂತೆ ಆಕೆಗೆ ಇಬ್ಬರು ಚಿತ್ರಹಿಂಸೆ ನೀಡಿ ಬಲವಂತವಾಗಿ ಮತಾಂತರ ಮಾಡಿಕೊಂಡಿದ್ದಾರೆ. ಇದಾದ ಮೇಲೆ 2016ರ ಮೇನಲ್ಲಿ ಇವರಿಬ್ಬರು ಮೌಲ್ವಿಯೊಬ್ಬರ ಸಮ್ಮುಖದಲ್ಲಿ ವಿವಾಹವಾಗಿದ್ದರು.

ಆದರೆ ಕೆಲವು ದಿನಗಳಲ್ಲೇ ಆಕೆ ತನ್ನ ಗಂಡನ ಕೈಯಿಂದ ತಪ್ಪಿಸಿಕೊಂಡು ಪೋಷಕರ ಮನೆಗೆ ಮರಳಿದ್ದಳು. ಈ ಸಂದರ್ಭ ಆತ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಹಾಕಿ, ಆಕೆಯ ಪೋಷಕರು ಅಕ್ರಮ ಬಂಧನದಲ್ಲಿರಿಸಿದ್ದಾರೆ ಎಂದು ಹೇಳಿದ್ದ. ಅನಂತರ ಆಕೆಗೆ ಬೆದರಿಕೆಯೊಡ್ಡಿ ಅನಿವಾರ್ಯವಾಗಿ ಆತನ ಜತೆಗೆ ಹೋಗುವಂತೆ ಮಾಡಿಕೊಂಡಿದ್ದ. 2017ರ ಆಗಸ್ಟ್‌ನಲ್ಲಿ ಸೌದಿ ಅರೇಬಿಯಾಗೆ ಕರೆದೊಯ್ದಿದ್ದ. ಅಲ್ಲಿ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಹಿಂಸೆ ನೀಡಲು ಶುರು ಮಾಡಿದ್ದ. ಈಗಲೂ ಆಕೆ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಳು.

ಈ ಎಲ್ಲ ಘಟನೆಗಳಾದ ಮೇಲೆ ಐಸಿಸ್‌ ಉಗ್ರರಿಗೆ ತನ್ನನ್ನು ಮಾರಾಟ ಮಾಡಲು ಪತಿ, ಇತರರೊಂದಿಗೆ ಸೇರಿ ಮಾತುಕತೆ ನಡೆಸುತ್ತಿದ್ದ ವಿಚಾರವೂ ಗೊತ್ತಾಯಿತು. ಇದೆಲ್ಲ ಗೊತ್ತಾದ ಬಳಿಕ ಅಕ್ಷರಾ ಬೋಸ್‌ ಕೇರಳ ಹೈಕೋರ್ಟ್‌ನಲ್ಲಿ ಎನ್‌ಐಎ ತನಿಖೆ, ಮದುವೆಯ ರದ್ದತಿಗಾಗಿ ಅರ್ಜಿ ಸಲ್ಲಿಸಿದ್ದಾಳೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.