ಶಾಂತ ಮನಸ್ಥಿತಿಯಲ್ಲಿ ಮತ ಚಲಾಯಿಸಿ : ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ
Team Udayavani, Mar 30, 2021, 2:45 PM IST
ನಂದಿಗ್ರಾಮ : ನಿಮ್ಮ ಶಾಂತಿಯನ್ನು ಕಾಯ್ದುಕೊಂಡು ತೃಣಮೂಲ ಕಾಂಗ್ರೆಸ್ ಗೆ ನಿಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಎಂದು ಮತದಾರರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ.
ನಂದಿಗ್ರಾಮದ ಸೋನಾಚುರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಮತಾ, ಮತದಾನದ ಸಂದರ್ಭದಲ್ಲಿ ಶಾಂತ ಮನಸ್ಥಿತಿಯಿಂದ ನಿಮ್ಮ ಮತವನ್ನು ಚಲಾಯಿಸಿ. ಗಮನದಲ್ಲಿಟ್ಟುಕೊಳ್ಳಿ, ‘ಕೂಲ್ ಕೂಲ್ ತೃಣಮೂಲ್, ಥಂಡಾ ಥಂಡಾ ಕೂಲ್ ಕೂಲ್, ವೋಟ್ ಪಬೆ ಜೋಡಾ ಫೂಲ್’ ನಿಮ್ಮ ಮನಸ್ಸನಲ್ಲಿ 48 ಗಂಟೆಗಳ ಕಾಲ ಶಾಂತಿಯನ್ನು ಕಾಯ್ದುಕೊಳ್ಳಿ ಎಂದು ಅವರು ಮತದಾರರಲ್ಲಿ ಕೇಳಿಕೊಂಡಿದ್ದಾರೆ.
ಓದಿ : ಸಿ.ಡಿ ಪ್ರಕರಣ: ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಯಡಿಯೂರಪ್ಪ
ಇನ್ನು, ಈ ಸಂದರ್ಭ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿ ಆಡಳಿತದ ರಾಜ್ಯಗಳಿಂದ ಪೊಲೀಸ್ ಪಡೆಗಳನ್ನು ನಂದಿಗ್ರಾಮ್ ವಿಧಾನಸಭಾ ಕ್ಷೇತ್ರಕ್ಕೆ ಕರೆತರಲಾಗಿದೆ. ಆ ಮೂಲಕ ಮತದಾರರಿಗೆ ಬೆದರಿಕೆ ಹಾಕುವ ಕಾರ್ಯ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಂದಿಗ್ರಾಮದಲ್ಲಿ ಬಹುಮತದಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತ ಪಡಿಸಿದ ಮಮತಾ ಬ್ಯಾನರ್ಜಿ, ಪಕ್ಷ ರಾಜ್ಯದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಬಗ್ಗೆ ಕೂಡ ಭರವಸೆಯ ಮಾತುಗಳನ್ನಾಡಿದರು.
#WATCH | During election cast your votes peacefully. Keep in mind, ‘cool cool Trinamool, thanda thanda cool cool, vote pabe joda phool’. Keep your mind cool for 48 hours: West Bengal CM Mamata Banerjee in in Sona Chura, Nandigram. pic.twitter.com/jfFa3ZIrgP
— ANI (@ANI) March 30, 2021
ಅವರು(ಪರ ರಾಜ್ಯದ ಪೊಲೀಸ್ ಪಡೆ) ಇಲ್ಲಿ ಕೆಲವು ದಿನಗಳ ತನಕ ಮಾತ್ರ ಇರಲಿದ್ದಾರೆ. ತಪ್ಪುಗಳನ್ನು ಮಾಡಬೇಡಿ. ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ದ್ರೋಹ ಮಾಡುವವರಿಗೆ ಸೂಕ್ತ ಉತ್ತರವನ್ನು ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.
ಓದಿ : ಕೋವಿಡ್ ಮುನ್ನೆಚ್ಚರಿಕೆ: ದ.ಕನ್ನಡ ಜಿಲ್ಲೆಯಲ್ಲಿ ಜಾತ್ರೆ, ಸಭೆ, ಹಬ್ಬ ಆಚರಣೆ ಮಾಡುವಂತಿಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ