ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿ, ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಸಬ್ ಇನ್ಸ್ಪೆಕ್ಟರ್
Team Udayavani, Nov 18, 2020, 9:41 AM IST
ಗುಜರಾತ್: ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ ಸಬ್ಸ್ಪೆಕ್ಟರ್ ಶ್ರೇಣಿಯ ಅಧಿಕಾರಿಯೊಬ್ಬರು, ಸ್ಪೈಸ್ಜೆಟ್ ವಿಮಾನಯಾನ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ನವೆಂಬರ್ 17 (ಮಂಗಳವಾರ) ರಂದು ಗುಜರಾತ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿದ್ದರು. ಇದಕ್ಕೂ ಮೊದಲು ದೆಹಲಿಗೆ ಹೊರಡಲಿದ್ದ ಸ್ಪೈಸ್ ಜೆಟ್ ಎಸ್ಜಿ-8194ರಲ್ಲಿ ಟಿಕೆಟ್ ಕಾಯ್ದಿರಿಸಿದ್ದರು. ಆದರೆ ಅವರು ತಡವಾಗಿ ನಿಲ್ದಾಣಕ್ಕೆ ಆಗಮಿಸಿದ್ದರಿಂದ, ಬೋರ್ಡಿಂಗ್ ಪಾಸ್ಗಳ ಬಗ್ಗೆ ಟಿಕೆಟ್ ಕೌಂಟರ್ನಲ್ಲಿ ವಿಮಾನಯಾನ ಸಿಬ್ಬಂದಿಯೊಂದಿಗೆ ವಾದಿಸಲು ಪ್ರಾರಂಭಿಸಿದ್ದಾರೆ. ಆದರೇ ವಿಳಂಬದಿಂದಾಗಿ ಬೋರ್ಡಿಂಗ್ ಪಾಸ್ ನೀಡುವುದನ್ನು ವಿಮಾನಯಾನ ಸಿಬ್ಬಂದಿ ನಿರಾಕರಿಸಿದ್ದಾರೆ.
ಇದರಿಂದ ರೊಚ್ಚಿಗೆದ್ದ ಸಬ್ ಇನ್ಸ್ಪೆಕ್ಟರ್, ವಿಮಾನಯಾನ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಯಕ್ಷಗಾನ ಕಲಾವಿದ, ಮಂದಾರ್ತಿ ಮೇಳದ ಜನಪ್ರಿಯ ಸ್ತ್ರೀ ವೇಷಧಾರಿ ಕೆರೆಗೆ ಬಿದ್ದು ಸಾವು
ಈ ಘಟನೆ ಕೆಲಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಎಡೆಮಾಡಿತ್ತು. ಕೂಡಲೇ ಪರಿಸ್ಥಿತಿಯನ್ನು ನಿಯಂತ್ರಿಸಲು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಸಿಐಎಸ್ಎಫ್ ಸ್ಥಳಕ್ಕೆ ಧಾವಿಸಿದ್ದಾರೆ. ಮಾತ್ರವಲ್ಲದೆ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ವರದಿಗಳ ಪ್ರಕಾರ ವಿಮಾನಯಾನ ಸಿಬ್ಬಂದಿಗಳು ಪೊಲೀಸ್ ಠಾಣೆಯಲ್ಲಿ ನೀಡಿದ ದೂರನ್ನು ಹಿಂಪಡೆದಿದ್ದಾರೆ. ಅದಾಗ್ಯೂ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರಿಗೆ ವಿಮಾನ ಹತ್ತಲು ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಅತ್ಯಾಚಾರ ಆರೋಪಿಗಳ ಸಂಬಂಧಿಕರಿಂದ ಕಿರುಕುಳ: ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಸಂತ್ರಸ್ತೆ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ