ಸಿಒಪಿ26 ಶೃಂಗ, ಏನು ಎತ್ತ?


Team Udayavani, Oct 25, 2021, 6:50 AM IST

ಸಿಒಪಿ26 ಶೃಂಗ, ಏನು ಎತ್ತ?

ಜಾಗತಿಕವಾಗಿ ತಾಪಮಾನ ಹೆಚ್ಚಳ, ಪ್ರಾಕೃತಿಕ ವಿಕೋಪಗಳ ಸಂಖ್ಯೆಯಲ್ಲೂ ಏರಿಕೆ, ಬಿಸಿಗಾಳಿಯ ಸಮಸ್ಯೆ, ಬರಗಾಲ, ಸಮುದ್ರ ಮಟ್ಟದಲ್ಲಿ ಏರಿಕೆ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿವೆ. ಇವುಗಳ ನಿವಾರಣೆಗಾಗಿ ಪ್ರತೀ ವರ್ಷವೂ ಭಾರತ, ಅಮೆರಿಕ, ಚೀನ ಒಳಗೊಂಡಂತೆ ಜಗತ್ತಿನ 190 ದೇಶಗಳು ಕಾನ್ಫರೆನ್ಸ್‌ ಆಫ್ ಪಾರ್ಟೀಸ್‌ ಶೃಂಗಸಭೆ ನಡೆಯುತ್ತದೆ. ಈ ಬಾರಿ ಸ್ಕಾಟ್‌ಲೆಂಡ್‌ನ‌ ಗ್ಲಾಸ್ಗೋದಲ್ಲಿ ಈ ಸಮ್ಮೇಳನ ನಡೆಯುತ್ತಿದೆ.

1.ಏನಿದು ಸಿಒಪಿ 26?
ಜಾಗತಿಕ ತಾಪಮಾನ ಬದಲಾವಣೆ ವಿಚಾರವಾಗಿ ಪ್ರತಿವರ್ಷವೂ ಸಭೆ ಸೇರಿ, ಇದನ್ನು ಕಡಿಮೆ ಮಾಡಿಕೊಳ್ಳಲು ಒಂದಷ್ಟು ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. ಇದಕ್ಕೆ ಕಾನ್ಫರೆನ್ಸ್‌ ಆಫ್ ಪಾರ್ಟೀಸ್‌ ಎಂದು ಹೆಸರಿಸಲಾಗಿದೆ. ಇದರಲ್ಲಿ 190 ಸದಸ್ಯ ರಾಷ್ಟ್ರಗಳಿವೆ.

2.ಮೊದಲ ಬಾರಿ ನಡೆದಿದ್ದು ಯಾವಾಗ?
1995ರಲ್ಲಿ ಜರ್ಮನಿಯ ಬರ್ಲಿನ್‌ನಲ್ಲಿ ಮೊದಲ ಸಭೆ ನಡೆಯಿತು. 1997ರಲ್ಲ ಜಪಾನ್‌ನ ಕ್ಯೂಟೋದಲ್ಲಿ ಮೂರನೇ ಸಿಒಪಿ ಶೃಂಗ ನಡೆದು, ಗ್ಯಾಸ್‌ ಎಮಿಶನ್‌ ಕಡಿಮೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಯಿತು.ಇದನ್ನು 2005ರಲ್ಲಿ ಕ್ಯೂಟೋ ಪ್ರೊಟೋಕಾಲ್‌ ಅನ್ನು ಜಾರಿ ಮಾಡಲು ನಿರ್ಧಾರ ತೆಗೆದುಕೊಳ್ಳಲಾಯಿತು.

3.ಪ್ಯಾರೀಸ್‌ ಶೃಂಗ ಏಕೆ ಪ್ರಾಮುಖ್ಯ?
2015ರಲ್ಲಿ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆದ ಸಿಒಪಿ 21ರಲ್ಲಿ ಬಹುಮುಖ್ಯವಾದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಯಿತು. ಜಾಗತಿಕ ತಾಪಮಾನವನ್ನು 2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಗೆ ಇಳಿಸಬೇಕು ಎಂಬ ನಿರ್ಧಾರ ತೆಗೆದುಕೊಳ್ಳಲಾಯಿತು. ಆದರೆ ಅಮೆರಿಕದ ಈ ಹಿಂದಿನ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಪ್ಯಾರಿಸ್‌ ಒಪ್ಪಂದ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಲ್ಲದೇ, ಜಾಗತಿಕ ತಾಪಮಾನ ಹೆಚ್ಚಲು ಭಾರತ ಮತ್ತು ಚೀನ ದೇಶಗಳೇ ಕಾರಣ ಎಂದು ಹೇಳಿದ್ದರು.

ಇದನ್ನೂ ಓದಿ:ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

4.ಭಾರತಕ್ಕೆ ಏಕೆ ಮುಖ್ಯ?
ಭಾರತದಲ್ಲಿ ಪ್ರತೀ ವರ್ಷವೂ ಅತಿವೃಷ್ಟಿ ಅಥವಾ ಅನಾವೃಷ್ಟಿಯಾಗುತ್ತಲೇ ಇದೆ. ಜತೆಗೆ ತಾಪಮಾನ ಕಡಿಮೆ ಮಾಡುವ ಒಪ್ಪಂದಕ್ಕೂ ಭಾರತ ಒಪ್ಪಿದೆ. ಆದರೆ, ಈ ನಿಟ್ಟಿನಲ್ಲಿ ಭಾರತ ತೆಗೆದುಕೊಳ್ಳಬಹುದಾದ ಕ್ರಮಗಳಿಗೆ ಅಮೆರಿಕದಂಥ ಮುಂದುವರಿದ ದೇಶಗಳು ಪರಿಹಾರ ನೀಡಬೇಕು ಎಂಬುದು ಭಾರತದ ಒತ್ತಾಯ. ಏಕೆಂದರೆ ಸೋಲಾರ್‌ ಎನರ್ಜಿ ಬಳಕೆ ಮಾಡಬೇಕು ಎಂದಾದರೆ ಇದಕ್ಕೆ ಬೇಕಾದ ಪರಿಕರಗಳನ್ನು ಮುಂದುವರಿದ ದೇಶಗಳು ಕಡಿಮೆ ಹಣದಲ್ಲಿ ನೀಡಬೇಕು ಎಂಬ ಆಗ್ರಹವಿದೆ. ಇದು ಇನ್ನೂ ಚರ್ಚೆಯ ಹಂತದಲ್ಲಿದೆ.

ಟಾಪ್ ನ್ಯೂಸ್

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.