ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ನಕಲಿ ಚಿನ್ನಾಭರಣ ಕೊಟ್ಟು ವಂಚನೆ: ಇಬ್ಬರ ಬಂಧನ
Team Udayavani, Aug 16, 2022, 5:39 PM IST
ಪಣಜಿ: ಹಳೆ ಚಿನ್ನವನ್ನು ಬದಲಾಯಿಸುವ ನೆಪದಲ್ಲಿ ಪಣಜಿಯಲ್ಲಿ ಆಭರಣ ವ್ಯಾಪಾರಿಯೊಬ್ಬರಿಗೆ ವಂಚಿಸಿದ್ದ ಗುಜರಾತ್ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಿಗ್ಗೆ 11.30 ರ ಸುಮಾರಿಗೆ ಪಣಜಿಯ ಎಂ.ಜಿ ರಸ್ತೆಯಲ್ಲಿರುವ ತನ್ನ ಅಂಗಡಿಗೆ ಅಪರಿಚಿತ ಮಹಿಳೆ ಮತ್ತು ಇಬ್ಬರು ಪುರುಷರು ಪ್ರವೇಶಿಸಿದ್ದಾರೆ. ಗ್ರಾಹಕರಂತೆ ಬಿಂಬಿಸಿಕೊಂಡ ಮೂವರು ಸೇಲ್ಸ್ ಎಕ್ಸಿಕ್ಯೂಟಿವ್ಗೆ ತಮ್ಮ ಹಳೆಯ ಚಿನ್ನವನ್ನು ಮಾರಾಟ ಮಾಡಲು ಬಯಸುವುದಾಗಿ ಹೇಳಿ 12 ಲಕ್ಷ ರೂಪಾಯಿ ಮೌಲ್ಯದ ಹೊಸ ಚಿನ್ನಾಭರಣಗಳೊಂದಿಗೆ ಅಂಗಡಿಯಿಂದ ಹೊರ ಹೋದರು. ಬಳಿಕ ಹಳೆ ಚಿನ್ನಾಭರಣ ಕರಗಿಸಿ ಚಿನ್ನಾಭರಣ ವ್ಯಾಪಾರಿಗಳು ಪರಿಶೀಲನೆ ನಡೆಸಿದಾಗ ನಕಲಿ ಚಿನ್ನಾಭರಣ ಎಂಬುದು ಪತ್ತೆಯಾಗಿದೆ. ತಾನು ಮೋಸ ಹೋಗಿರುವುದಾಗಿ ಜ್ಯುವೆಲರ್ ನಿಕುಂಜ್ ಗುಪ್ತಾ ಪಣಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಮಾಹಿತಿ ಕಲೆಹಾಕಿದ್ದು, ಆರೋಪಿಗಳಾದ ಕೇಶುಭಾಯಿ ಪರ್ಮಾರ್ (32), ಮುಕೇಶ್ಭಾಯ್ ಪರ್ಮಾರ್ (26) ಗುಜರಾತ್ನ ಪೋರ್ ಬಂದರ್ ಮೂಲದವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಣಜಿ ಪೊಲೀಸ್ ಇನ್ಸ್ಪೆಕ್ಟರ್ ನಿಖಿಲ್ ಪಾಲೇಕರ್ ನೇತೃತ್ವದ ತಂಡ ಸುದೇಶ್ ನಾಯ್ಕ್, ರವರ ನೇತೃತ್ವದಲ್ಲಿ ಈ ಪ್ರಕರಣವನ್ನು ಬೇಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..