ಸೌಂದರ್ಯ ಸ್ಪರ್ಧೆಯಲ್ಲಿ ಪೊಲೀಸರ ರಾಂಪ್ ವಾಕ್; ವರ್ಗಾವಣೆ ಶಿಕ್ಷೆ
Team Udayavani, Aug 5, 2022, 10:39 AM IST
ಮೈಲಾಡುತುರೈ: ಸೌಂದರ್ಯ ಸ್ಪರ್ಧೆಯೊಂದರಲ್ಲಿ ರಾಂಪ್ ವಾಕ್ ಮಾಡಿದ ವಿಶೇಷ ಸಹಾಯಕ ಪೊಲೀಸ್ ನಿರೀಕ್ಷಕ ಸೇರಿ ಐದು ಮಂದಿ ಪೊಲೀಸರನ್ನು ವರ್ಗಾವಣೆ ಮಾಡಿದ ಘಟನೆ ತಮಿಳುನಾಡು ರಾಜ್ಯದಲ್ಲಿ ನಡೆದಿದೆ.
ಸೌಂದರ್ಯ ಸ್ಪರ್ಧೆಯಲ್ಲಿ ಸಿಬ್ಬಂದಿ ರಾಂಪ್ ವಾಕ್ ಮಾಡಿದ ನಂತರ ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ ಆದೇಶ ಹೊರಡಿಸಿದ್ದಾರೆ.
ಪ್ರಾಥಮಿಕ ವರದಿಯ ಪ್ರಕಾರ, ಈ ಸೌಂದರ್ಯ ಸ್ಪರ್ಧೆಯನ್ನು ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್ ನಲ್ಲಿ ಕಳೆದ ರವಿವಾರ ಖಾಸಗಿ ಸಂಸ್ಥೆಯೊಂದು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ನಟಿ ಯಶಿಕಾ ಆನಂದ್ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು.
ಇದನ್ನೂ ಓದಿ:ಸುಪ್ರೀಂ ಕೋರ್ಟ್ನಲ್ಲಿ ದಶಕದಿಂದ 10,000 ಪ್ರಕರಣ ಪೆಂಡಿಂಗ್!
ಈ ಕಾರ್ಯಕ್ರಮದಲ್ಲಿ ಪ್ರಸ್ತುತ ಸೆಂಬನಾರ್ಕೋವಿಲ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಸಹಾಯಕ ಇನ್ಸ್ಪೆಕ್ಟರ್ ಸುಬ್ರಮಣಿಯನ್ ಸೇರಿದಂತೆ ರೇಣುಕಾ, ಅಶ್ವಿನಿ, ನಿತ್ಯಶೀಲಾ ಮತ್ತು ಶಿವನೇಸನ್ ರು ರ್ಯಾಂಪ್ ನಲ್ಲಿ ಹೆಜ್ಜೆ ಹಾಕಿದ್ದರು. ಈ ವಿಡಿಯೋ ವೈರಲ್ ಆಗಿತ್ತು.
ಘಟನೆಯ ಬಗ್ಗೆ ಮಾಹಿತಿ ಪಡೆದ ನಾಗಪಟ್ಟಣಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜವಗರ್ ಅವರು ಈ ಐವರು ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್