Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್
ಐಷಾರಾಮಿ ಜೀವನಶೈಲಿಯ ಭರವಸೆ...
Team Udayavani, May 31, 2023, 10:39 PM IST
ಪಣಜಿ: ಐಷಾರಾಮಿ ಜೀವನಶೈಲಿಯ ಭರವಸೆಯ ಮೇರೆಗೆ ಆಮಿಷ ಒಡ್ಡಿ ಅಪಹರಣಕ್ಕೆ ಒಳಗಾಗಿದ್ದ ಕರ್ನಾಟಕದ ಮೂಲದ ಇಬ್ಬರು ಬಾಲಕಿಯರನ್ನು ಪೊಲೀಸರು ಬುಧವಾರ ರಕ್ಷಿಸಿದ್ದಾರೆ.
ಹುಬ್ಬಳ್ಳಿಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 12 ಮತ್ತು 15 ವರ್ಷದ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳವಿ, ಉತ್ತರ ಗೋವಾದ ಎರಡು ಗ್ರಾಮಗಳಿಂದ ಪ್ರತ್ಯೇಕವಾಗಿ ಹುಡುಗಿಯರನ್ನು ಅಪಹರಿಸಲಾಗಿದೆ ಮತ್ತು ನಾಪತ್ತೆಯಾದವರ ವರದಿಯನ್ನು ಮೇ 29 ರಂದು ದಾಖಲಿಸಲಾಗಿತ್ತು. ಕೊಲ್ವಾಲೆಯ ಪೊಲೀಸ್ ತಂಡವು ಹುಬ್ಬಳ್ಳಿಯ ತಮ್ಮ ಸಹವರ್ತಿಗಳ ಸಹಾಯದಿಂದ ಉತ್ತರ ಗೋವಾದಲ್ಲಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದೆ.
“ಮೇ 29 ರಂದು, ಒಬ್ಬ ಬಾಲಕಿಯ ತಂದೆ ತನ್ನ ಅಪ್ರಾಪ್ತ 12 ವರ್ಷದ ಮಗಳನ್ನು ಯಾರೋ ಅಪಹರಿಸಿದ್ದಾರೆ ಎಂದು ತಿಳಿಸಲು ಪೊಲೀಸರನ್ನು ಸಂಪರ್ಕಿಸಿದರು. ಅದೇ ದಿನ ಜಿಲ್ಲೆಯ ಮತ್ತೋರ್ವ ಮಹಿಳೆ ತನ್ನ 15 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಇದೇ ರೀತಿಯ ದೂರು ದಾಖಲಿಸಿದ್ದಾರೆ,” ಎಂದು ಹೇಳಿದರು.
ಈ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ”ತನಿಖೆಯ ವೇಳೆ ಬಾಲಕಿಯರನ್ನು ಕರ್ನಾಟಕದ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ