
Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್
ಐಷಾರಾಮಿ ಜೀವನಶೈಲಿಯ ಭರವಸೆ...
Team Udayavani, May 31, 2023, 10:39 PM IST

ಪಣಜಿ: ಐಷಾರಾಮಿ ಜೀವನಶೈಲಿಯ ಭರವಸೆಯ ಮೇರೆಗೆ ಆಮಿಷ ಒಡ್ಡಿ ಅಪಹರಣಕ್ಕೆ ಒಳಗಾಗಿದ್ದ ಕರ್ನಾಟಕದ ಮೂಲದ ಇಬ್ಬರು ಬಾಲಕಿಯರನ್ನು ಪೊಲೀಸರು ಬುಧವಾರ ರಕ್ಷಿಸಿದ್ದಾರೆ.
ಹುಬ್ಬಳ್ಳಿಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 12 ಮತ್ತು 15 ವರ್ಷದ ಬಾಲಕಿಯರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳವಿ, ಉತ್ತರ ಗೋವಾದ ಎರಡು ಗ್ರಾಮಗಳಿಂದ ಪ್ರತ್ಯೇಕವಾಗಿ ಹುಡುಗಿಯರನ್ನು ಅಪಹರಿಸಲಾಗಿದೆ ಮತ್ತು ನಾಪತ್ತೆಯಾದವರ ವರದಿಯನ್ನು ಮೇ 29 ರಂದು ದಾಖಲಿಸಲಾಗಿತ್ತು. ಕೊಲ್ವಾಲೆಯ ಪೊಲೀಸ್ ತಂಡವು ಹುಬ್ಬಳ್ಳಿಯ ತಮ್ಮ ಸಹವರ್ತಿಗಳ ಸಹಾಯದಿಂದ ಉತ್ತರ ಗೋವಾದಲ್ಲಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದೆ.
“ಮೇ 29 ರಂದು, ಒಬ್ಬ ಬಾಲಕಿಯ ತಂದೆ ತನ್ನ ಅಪ್ರಾಪ್ತ 12 ವರ್ಷದ ಮಗಳನ್ನು ಯಾರೋ ಅಪಹರಿಸಿದ್ದಾರೆ ಎಂದು ತಿಳಿಸಲು ಪೊಲೀಸರನ್ನು ಸಂಪರ್ಕಿಸಿದರು. ಅದೇ ದಿನ ಜಿಲ್ಲೆಯ ಮತ್ತೋರ್ವ ಮಹಿಳೆ ತನ್ನ 15 ವರ್ಷದ ಮಗಳು ನಾಪತ್ತೆಯಾಗಿರುವ ಬಗ್ಗೆ ಇದೇ ರೀತಿಯ ದೂರು ದಾಖಲಿಸಿದ್ದಾರೆ,” ಎಂದು ಹೇಳಿದರು.
ಈ ಸಂಬಂಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 363 (ಅಪಹರಣ) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ”ತನಿಖೆಯ ವೇಳೆ ಬಾಲಕಿಯರನ್ನು ಕರ್ನಾಟಕದ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ
MUST WATCH
ಹೊಸ ಸೇರ್ಪಡೆ

Belagavi: ಶೆಫರ್ಡ ಇಂಡಿಯಾ ಇಂಟರ್ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ

Pakistan: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ; 34 ಮಂದಿ ಮೃತ್ಯು, 100ಕ್ಕೂ ಹೆಚ್ಚು ಗಾಯ

Cauvery issue; ಕೆಆರ್ ಎಸ್ ಮುತ್ತಿಗೆಗೆ ವಾಟಾಳ್ ನಾಗರಾಜ್ ಕರೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ ಜಿಲ್ಲೆಗೆ ಯೆಲ್ಲೊ ಅಲರ್ಟ್; ಭಾರಿ ಮಳೆ ಸಾಧ್ಯತೆ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ