ಜ.26ರ ರೈತರ ಟ್ರ್ಯಾಕ್ಟರ್ Rally ಅನುಮತಿ ಬಗ್ಗೆ ದೆಹಲಿ ಪೊಲೀಸರು ನಿರ್ಧರಿಸಲಿ: ಸುಪ್ರೀಂ
ಪೊಲೀಸರ ಅಧಿಕಾರಗಳೇನು, ಅವರು ಹೇಗೆ ಕಾರ್ಯನಿರ್ವಹಿಸುತ್ತಾರೆ? ನಾವು ಇದನ್ನೆಲ್ಲಾ ಹೇಳಲು ಸಾಧ್ಯವಿಲ್ಲ
Team Udayavani, Jan 18, 2021, 1:11 PM IST
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ರದ್ದುಗೊಳಿಸಬೇಕೆಂದು ಆಗ್ರಹಿಸಿ ರೈತರು ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರಾಲಿಗೆ ಅವಕಾಶ ನೀಡುವ ಕುರಿತು ದೆಹಲಿ ಪೊಲೀಸರು ನಿರ್ಧಾರ ತೆಗೆದುಕೊಳ್ಳಬೇಕು, ಇದೊಂದು ಕಾನೂನು ಸುವ್ಯವಸ್ಥೆಯ ವಿಚಾರವಾಗಿದೆ ಎಂದು ಸುಪ್ರೀಂಕೋರ್ಟ್ ಸೋಮವಾರ(ಜನವರಿ 18, 2021) ಆದೇಶ ನೀಡಿದೆ.
ಗಣರಾಜ್ಯೋತ್ಸವ(ಜನವರಿ 26)ದಂದು ರೈತರು ನಡೆಸಲು ತೀರ್ಮಾನಿಸಿದ್ದ ಟ್ರ್ಯಾಕ್ಟರ್ ರಾಲಿ ನಡೆಸದಂತೆ ಆದೇಶ ನೀಡಬೇಕೆಂದು ಕೋರಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು.
“ರೈತರ ಟ್ರ್ಯಾಕ್ಟರ್ ರಾಲಿಗೆ ಸಂಬಂಧಿಸಿದಂತೆ” ತೀರ್ಮಾನ ಕೈಗೊಳ್ಳಲು ದೆಹಲಿ ಪೊಲೀಸರಿಗೆ ಎಲ್ಲಾ ರೀತಿಯ ಅಧಿಕಾರವಿದೆ. ಯಾರಿಗೆ ಒಳಪ್ರವೇಶಿಸಲು ಅನುಮತಿ ನೀಡಬೇಕು, ಎಷ್ಟು ಮಂದಿ ಇದ್ದಾರೆ ಹೀಗೆ ಇವೆಲ್ಲವೂ ಕಾನೂನು ಸುವ್ಯವಸ್ಥೆಯ ವಿಚಾರವಾಗಿದ್ದು, ಈ ಬಗ್ಗೆ ಪೊಲೀಸರೇ ನಿರ್ಧರಿಸಬೇಕು. ನಾವು ಈ ಬಗ್ಗೆ ಮೊದಲು ಅಧಿಕಾರ ಚಲಾಯಿಸಲು ಸಾಧ್ಯವಿಲ್ಲ ಎಂದು ಸಿಜೆಐ ಎಸ್ ಎ ಬೋಬ್ಡೆ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಆದೇಶ ನೀಡಿದೆ.
“ಇದೊಂದು ಅಪರೂಪದ ಸನ್ನಿವೇಶವಾಗಿದೆ. ಅಲ್ಲದೇ ಈ ನಿಟ್ಟಿನಲ್ಲಿ ನ್ಯಾಯಾಲಯ ಆದೇಶ ಹೊರಡಿಸಬಹುದು” ಎಂದು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಇದನ್ನೂ ಓದಿ:ಪಾಕಿಸ್ತಾನ ಸಿಂಧ್ ಪ್ರಾಂತ್ಯ; ಸ್ವಾತಂತ್ರ್ಯ ಪರ ರಾಲಿಯಲ್ಲಿ ಪ್ರಧಾನಿ ಮೋದಿ ಪೋಸ್ಟರ್!
ಪೊಲೀಸರ ಅಧಿಕಾರಗಳೇನು, ಅವರು ಹೇಗೆ ಕಾರ್ಯನಿರ್ವಹಿಸುತ್ತಾರೆ? ನಾವು ಇದನ್ನೆಲ್ಲಾ ಹೇಳಲು ಸಾಧ್ಯವಿಲ್ಲ ಎಂದು ಸಿಜೆಐ ಹಾಗೂ ಜಸ್ಟೀಸ್ ಗಳಾದ ಎಲ್ ಎನ್ ರಾವ್ ಮತ್ತು ವಿನೀತ್ ಸರನ್ ನೇತೃತ್ವದ ಪೀಠ ತಿಳಿಸಿದೆ.
ರೈತರ ಟ್ರ್ಯಾಕ್ಟರ್ ರಾಲಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿ, ವಾದ ಆಲಿಸಿದ ಸುಪ್ರೀಂಕೋರ್ಟ್ ಜನವರಿ 20ಕ್ಕೆ ಅರ್ಜಿ ವಿಚಾರಣೆ ಮುಂದೂಡಿರುವುದಾಗಿ ತಿಳಿಸಿದೆ.
ಇದನ್ನೂ ಓದಿ:ಹೊಸ ಜೋಶ್ನಲ್ಲಿ ಚಿತ್ರರಂಗ ಸಾಲು ಸಾಲು ಸಿನಿಮಾಗಳಿಗೆ ಪೂಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸೋಮವಾರದಿಂದ ಬಜೆಟ್ ಅಧಿವೇಶನದ 2ನೇ ಹಂತ ಕಲಾಪ ಆರಂಭ
ರೇಷನ್ ಕಾರ್ಡ್ ಇರುವ ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ : ಸ್ಟಾಲಿನ್
ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ
ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು