ಕಾಪ್ಟರ್‌ ಪತನ: ಐವರ ಸಾವು


Team Udayavani, Jan 14, 2018, 12:06 PM IST

1-2-13011-pti1_13_2018_000133b.jpg

ಮುಂಬಯಿ: ಒಎನ್‌ಜಿಸಿ ಅಧಿಕಾರಿಗಳನ್ನು ಹೊತ್ತೂಯ್ಯುತ್ತಿದ್ದ ಪವನ್‌ ಹನ್ಸ್‌ ಹೆಲಿಕಾಪ್ಟರ್‌ವೊಂದು ಶನಿವಾರ ಮುಂಬಯಿ ಕರಾವಳಿಯಾಚೆ ಪತನ ಗೊಂಡಿದೆ. ಕಾಪ್ಟರ್‌ನಲ್ಲಿದ್ದ ಐವರು ಅಧಿಕಾರಿಗಳು ಹಾಗೂ ಇಬ್ಬರು ಪೈಲಟ್‌ಗಳೂ ಮೃತಪಟ್ಟಿರುವ ಸಾಧ್ಯತೆ ಯಿದ್ದು, ಐವರ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಮಟ್ಟದ ಮೂವರು ಅಧಿಕಾರಿಗಳು ಸೇರಿದಂತೆ ಐವರು ಅಧಿಕಾರಿಗಳು ಮತ್ತು ಇಬ್ಬರು ಪೈಲಟ್‌ಗಳಿದ್ದ ಹೆಲಿಕಾಪ್ಟರ್‌ ಬೆಳಗ್ಗೆ 10.40ರ ವೇಳೆಗೆ ಮುಂಬಯಿನ ಜುಹು ಹೆಲಿಬೇಸ್‌ನಿಂದ ಟೇಕ್‌ ಆಫ್ ಆಗಿತ್ತು. ಮುಂಬಯಿ ಕರಾವಳಿಯಾಚೆ ಒಎನ್‌ಜಿಸಿಗೆ ಸೇರಿದ ಪ್ರಮುಖ ತೈಲ ಕ್ಷೇತ್ರಗಳಿದ್ದು, ಪವನ್‌ ಹನ್ಸ್‌ ಕಾಪ್ಟರ್‌ ಮೂಲಕವೇ ಪ್ರತಿ ಬಾರಿಯೂ ಕಂಪೆನಿಯ ನೌಕರರು ಮತ್ತು ಅಧಿಕಾರಿಗಳು ಅಲ್ಲಿಗೆ ತೆರಳುತ್ತಿದ್ದರು. ಕರಾವಳಿ ಪ್ರದೇಶದಿಂದ 160 ಕಿ.ಮೀ. ದೂರದಲ್ಲಿರುವ ತೈಲಕ್ಷೇತ್ರದಲ್ಲಿ ಯಾವುದೇ ಕೆಲಸವಿದ್ದರೂ ಕಾಪ್ಟರ್‌ ಮೂಲಕವೇ ತೆರಳಬೇಕು. ಅದರಂತೆ, ಶನಿವಾರ ಬೆಳಗ್ಗೆಯೂ ಕಾಪ್ಟರ್‌ನಲ್ಲಿ ಅಧಿಕಾರಿಗಳು ಹೊರಟಿದ್ದರು. 11 ಗಂಟೆ ವೇಳೆಗೆ ತೈಲಕ್ಷೇತ್ರವನ್ನು ಇವರು ತಲುಪಬೇಕಿತ್ತು. ಆದರೆ, ಕಾಪ್ಟರ್‌ ಟೇಕ್‌ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದು ಸಂಪರ್ಕ ಕಡಿದುಕೊಂಡಿದ್ದು, ಪತನಗೊಂಡಿತು. 

ವಿಷಯ ಗೊತ್ತಾಗುತ್ತಿದ್ದಂತೆ, ನೌಕಾಪಡೆಯ ಐಎನ್‌ಎಸ್‌ ತೇಜ್‌, ನಿಗಾ ವಿಮಾ ಪಿ8ಐ ಹಾಗೂ ಕರಾವಳಿ ರಕ್ಷಣಾ ಪಡೆಯ ನೌಕೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಶನಿವಾರ ಸಂಜೆಯ ವೇಳೆಗೆ ಐವರ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರು ಬದುಕಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಇದೇ ವೇಳೆ, ವಿಮಾನ ಅಪಘಾತ ತನಿಖಾ ಸಂಸ್ಥೆಯಾದ ಎಎಐಬಿ ಈ ಘಟನೆಯ ಕುರಿತು ತನಿಖೆ ನಡೆಸಲಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಸಹಾಯಕ ಸಚಿವ ಜಯಂತ್‌ ಸಿನ್ಹಾ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ನಡೆದಿತ್ತು: ಹೆಲಿಕಾಪ್ಟರ್‌ ದುರಂತವು ಒಎನ್‌ಜಿಸಿಗೆ ಹೊಸತಲ್ಲ. 2003ರ ಆಗಸ್ಟ್‌ನಲ್ಲಿ ಎಂಐ-172 ಕಾಪ್ಟರ್‌ ಮುಂಬಯಿ ಕರಾವಳಿಯಾಚೆ ಪತನಗೊಂಡು, ಕಂಪೆನಿಯ 27 ಮಂದಿ ಹಾಗೂ ಪೈಲಟ್‌ ದುರಂತ ಅಂತ್ಯ ಕಂಡಿದ್ದರು. 

ದೋಣಿ ದುರಂತ: ಮೂವರು ಮಕ್ಕಳ ಸಾವು
ಮುಂಬಯಿ :
 ಮಹಾರಾಷ್ಟ್ರದ ಪಾಲ್‌ಘರ್‌ ಜಿಲ್ಲೆಯ ದಹನು ಕರಾವಳಿಯಲ್ಲಿ ದೋಣಿಯೊಂದು ಮುಳುಗಿ ಶಾಲೆ ಪ್ರವಾಸಕ್ಕೆಂದು ಬಂದಿದ್ದ ಮೂವರು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ. 6 ಮಕ್ಕಳು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇಲ್ಲಿಯ ಪಂಕಾರದ ಪೋಂಡಾ ಶಾಲೆಯ ಒಟ್ಟು 40 ಮಕ್ಕಳು ಖಾಸಗಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. 32 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ದೋಣಿ ದಹಾಣು ಕರಾವಳಿ ತೀರದಿಂದ ನೀರಿನಲ್ಲಿ 20 ಮೈಲು ದೂರ ಚಲಿಸಿತ್ತು. ಒಂದೇ ದೋಣಿಯಲ್ಲಿ 40 ಮಕ್ಕಳಿದ್ದ ಕಾರಣ, ಅದು ವಾಲಿಕೊಂಡು ನೀರಲ್ಲಿ ಮುಳುಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. ಶನಿವಾರ ರಾಷ್ಟ್ರಪತಿ ಕೋವಿಂದ್‌ ಅವರು 2 ದಿನಗಳ ಮಹಾರಾಷ್ಟ್ರ ಭೇಟಿಗಾಗಿ ಮುಂಬಯಿಗೆ ಬಂದಿಳಿದಿದ್ದು, ಮೃತ ಮಕ್ಕಳ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.