ಮಹಾರಾಷ್ಟ್ರದ 10 ಜಿಲ್ಲೆಗಳಲ್ಲಿ ಕೊರೊನಾ ಕಟ್ಟೆಚ್ಚರ
Team Udayavani, Apr 24, 2023, 6:13 AM IST
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಇದರಿಂದ ಎಚ್ಚೆತ್ತಿರುವ ಅಲ್ಲಿನ ಆರೋಗ್ಯ ಸಚಿವ ತಾನಾಜಿ ಸಾವಂತ್ ಸಭೆಯೊಂದನ್ನು ನಡೆಸಿದ್ದಾರೆ. ಅಪಾಯದ ಪ್ರಮಾಣ ಗರಿಷ್ಠವಿರುವ ಪುಣೆ, ಮುಂಬೈ, ಥಾಣೆ ಸೇರಿ ಒಟ್ಟು 10 ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ತಾಕೀತು ಮಾಡಿದ್ದಾರೆ.
ಕೊರೊನಾ ಕಾರ್ಯಪಡೆಯನ್ನೂ ಪುನರ್ರಚನೆ ಮಾಡಿದ್ದಾರೆ. ಇದು ಆ ರಾಜ್ಯ ಪರಿಸ್ಥಿತಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದರ ಲಕ್ಷಣವಾಗಿದೆ. “ಪ್ರತಿನಿತ್ಯ ನಡೆಸುವ ಕೊರೊನಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು, ಕೊರೊನಾ ಪರೀಕ್ಷೆ ಸಂಬಂಧ ಇತ್ತೀಚೆಗೆ ನಡೆಸಿರುವ ಪರೀಕ್ಷಾರ್ಥ ಪ್ರದರ್ಶನದಲ್ಲಿ ಹಲವು ದೋಷಗಳು ಕಂಡುಬಂದಿವೆ. ಅವನ್ನೆಲ್ಲ ಸರಿಪಡಿಸಿಕೊಳ್ಳಬೇಕು. ಮೆಟ್ಮಾರ್ಫಿನ್ ಮಾತ್ರೆಗಳಿಂದ ಕೊರೊನಾ ರೋಗಿಗಳಿಗೆ ಲಾಭವಿದೆ. ಆದರೆ ಅದನ್ನು ಶಿಷ್ಟಾಚಾರ ಪಟ್ಟಿಯಲ್ಲಿ ಸೇರಿಸಿಲ್ಲ’ ಎಂದು ಡಾ.ಗಂಗಾ ಖೇಡ್ಕರ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ಗಮನ ಹರಿಸಿ ಎಂದು ಸಚಿವ ತಾನಾಜಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ