ದೇಶಕ್ಕೆ ಕೊರೊನಾ ಭೀತಿ: ವಿಮಾನನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ

ವುಹಾನ್‌ನಿಂದ ಭಾರತೀಯ ವಿದ್ಯಾರ್ಥಿಗಳ ಕರೆ ತರಲು ನಿರ್ಧಾರ

Team Udayavani, Jan 27, 2020, 10:14 PM IST

corona

ಬೆಂಗಳೂರು/ನವದೆಹಲಿ/ಬೀಜಿಂಗ್‌: ಚೀನಾದಲ್ಲಿ ಅಲ್ಲೋಲಕಲ್ಲೋಕ್ಕೆ ಕಾರಣವಾಗಿರುವ ಕೊರೊನಾ ವೈರಸ್‌ ಭಾರತದಲ್ಲಿಯೂ ಆತಂಕ ಸೃಷ್ಟಿಸಿದೆ. ಬೆಂಗಳೂರು, ಕೋಲ್ಕತಾ, ಚೆನ್ನೈ, ಮುಂಬೈ, ತಿರುವನಂತಪುರ ವಿಮಾನನಿಲ್ದಾಣಗಳಲ್ಲಿ ಚೀನಾದಿಂದ ಬರುವ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ಸೋಮವಾರ ನವದೆಹಲಿಯಲ್ಲಿ ನಡೆಯಿತು.

ಮಾರಕ ವೈರಸ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪಶ್ಚಿಮ ಬಂಗಾಳದ ಪಿನಾಕಿನಿ, ಉತ್ತರಾ ಖಂಡದ ಝೂಲಾಘಾಟ್‌ ಮತ್ತು ಪಿತ್ರೋಘಡದ ಜೌಲ್ಜಿಬಿ ಎಂಬಲ್ಲಿಗೆ ತಜ್ಞರ ತಂಡಗಳನ್ನು ಕಳುಹಿಸಿಕೊಡಲಾಗಿದೆ. ನೇಪಾಳದ ಜತೆಗೆ ಅಂತಾರಾಷ್ಟ್ರೀಯ ಗಡಿ ಹೊಂದಿರುವ ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಪಶ್ಚಿಮ ಬಂಗಾಳ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್‌ ಮಹಾನಿರ್ದೇಶಕರ ಜತೆಗೆ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್‌ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದರು. ಭಾನುವಾರದವರೆಗೆ ದೇಶಕ್ಕೆ 137 ವಿಮಾನಗಳ ಮೂಲಕ 29, 707 ಪ್ರಯಾಣಿಕರು ಆಗಮಿಸಿದ್ದಾರೆ.

ಕೇರಳವೊಂದರಲ್ಲಿಯೇ 100 ಮಂದಿಯನ್ನು ನಿಗಾ ಸ್ಥಿತಿಯಲ್ಲಿ ಇರಿಸಲಾಗಿದೆ. ಆರೋಗ್ಯ ಇಲಾಖೆ ಕಾರ್ಯದರ್ಶಿ ನೀಡಿದ ಮಾಹಿತಿ ಪ್ರಕಾರ ನೇಪಾಳದಲ್ಲಿ ಒಬ್ಬರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಕುಮಾರ್‌ ಭಲ್ಲಾ ಕೂಡ ವಿವಿಧ ರಾಜ್ಯಗಳ ಡಿಜಿಪಿಗಳ ಜತೆಗೆ ಚರ್ಚೆ ನಡೆಸಿದ್ದಾರೆ. ಇದರ ಜತೆಗೆ ಹಡಗು ಯಾನ ಸಚಿವಾಲಯ ಕೂಡ ಎಲ್ಲಾ ಬಂದರು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆದೇಶಿಸಿದೆ.

ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇದರ ದೇಶದ ವಿವಿಧ ಏರ್‌ಪೋರ್ಟ್‌ಗಳಲ್ಲಿ ವೈರಸ್‌ ತಪಾಸಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.

ಚೀನಾದಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲು ನಿರ್ಧರಿಸಲಾಗಿದೆ. ಇದರ ಜತೆಗೆ ನೇಪಾಳ ಜತೆಗೆ ಇರುವ ಗಡಿ ಮತ್ತು ಏಕೀಕೃತ ತಪಾಸಣಾ ಕೇಂದ್ರದ ಮೂಲಕ ಬರುವ ಪ್ರಯಾಣಿಕರ ಮೇಲೆ ಕೂಡ ನಿಗಾ ಇರಿಸಲಾಗಿದೆ.

ಭಾರತದ ನಾಗರಿಕರನ್ನು ವುಹಾನ್‌ನಿಂದ ತೆರವುಗೊಳಿಸುವ ಬಗ್ಗೆ ವಿದೇಶಾಂಗ ಸಚಿವಾಲಯ ಚೀನಾ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಿದೆ.

ವುಹಾನ್‌ನಲ್ಲಿ 250 ರಿಂದ 300 ಮಂದಿ ಭಾರತೀಯ ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ನಾಗರಿಕ ವಿಮಾನ ಸಚಿವಾಲಯ ವಿದ್ಯಾರ್ಥಿಗಳನ್ನು ಕರೆ ತರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಿರ್ದೇಶನ ನೀಡಬೇಕು ಎಂದು ಗೌಬಾ ಹೇಳಿದ್ದಾರೆ.

ದೇಶದ ವಿವಿಧ ಏರ್‌ಪೋರ್ಟ್‌ಗಳಲ್ಲಿ ಇದುವರೆಗೆ 137 ವಿಮಾನಗಳ ಮೂಲಕ ಆಗಮಿಸಿದ 29, 707 ಮಂದಿ ಪ್ರಯಾಣಿಕರನ್ನು ಪರೀಕ್ಷೆ ಮತ್ತು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ.

ಅಂತಾರಾಷ್ಟ್ರೀಯ ಗಡಿ ಹೊಂದಿರುವ ರಾಜ್ಯಗಳಲ್ಲಿ ವಲಸೆ ವಿಭಾಗದ ಪರಿಶೀಲನೆ ಕೈಗೊಳ್ಳುವ ಸಶಸ್ತ್ರ ಸೀಮಾ ಬಲ, ಬಿಎಸ್‌ಎಫ್ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನೀಡುವ ನಿಟ್ಟಿನಲ್ಲಿ ಸಿಬ್ಬಂದಿ ಒದಗಿಸಲು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗಿದೆ.

ಆಸ್ಪತ್ರೆಗೆ ಚೀನಾ ಮಹಿಳೆ: ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಚೀನಾದಿಂದ ಆಗಮಿಸಿದ ಮಹಿಳೆ ಜ್ವರ ಇದೆ ಎಂದು ತಪಾಸಣೆಗೆ ಬಂದಿದ್ದ ವೇಳೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಬೈ ಏರ್‌ಪೋರ್ಟ್‌ನಲ್ಲಿ ಜ.18ರಿಂದ ಒಂಭತ್ತು ದಿನಗಳ ಅವಧಿಯಲ್ಲಿ 3, 756 ಮಂದಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ ಐವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರ ಕಫ‌ವನ್ನು ಪುಣೆಯ ಇನ್ಸ್ಟಿಟ್ಯೂಟ್‌ ಆಫ್ ವೈರಾಲಜಿಗೆ ಕಳುಹಿಸಲಾಗಿದೆ.

ಮೊದಲ ಸಾವು: ಚೀನಾ ರಾಜಧಾನಿ ಬೀಜಿಂಗ್‌ನಲ್ಲಿ ಮಾರಕ ವೈರಸ್‌ಗೆ ಮೊದಲ ಸಾವು ಸಂಭವಿಸಿದೆ ಎಂದು ಸರ್ಕಾರ ಖಚಿತಪಡಿಸಿದೆ. 50 ವರ್ಷ ವಯೋಮಿತಿಯ ಆತ ವುಹಾನ್‌ಗೆ ತೆರಳಿದ್ದ. ಅಲ್ಲಿ ಆತನಿಗೆ ಸೋಂಕು ತಗುಲಿತ್ತು. ಇದೇ ವೇಳೆ ಚೀನಾ ಪ್ರಧಾನಿ ಲಿ ಕೆಕಿಯಾಂಗ್‌ ವುಹಾನ್‌ಗೆ ತೆರಳಿ ಅಲ್ಲಿನ ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅದೇ ವೇಳೆ, ಸೋಂಕಿನಿಂದ ಇದುವರೆಗೆ ಅಸುನೀಗಿದವರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಸುಮಾರು 2,700 ಅಧಿಕ ಮಂದಿಗೆ ಸೋಂಕು ತಗುಲಿದೆ.

ಇತರ ದೇಶಗಳಲ್ಲಿ: ಥೈಲ್ಯಾಂಡ್‌ 7, ಜಪಾನ್‌ 3, ದಕ್ಷಿಣ ಕೊರಿಯಾ 3, ಅಮೆರಿಕ 3, ವಿಯೆಟ್ನಾಂ 2, ಸಿಂಗಾಪುರ 4, ಮಲೇಷ್ಯಾ 3, ನೇಪಾಳ 1, ಫ್ರಾನ್ಸ್‌ 3, ಆಸ್ಟ್ರೇಲಿಯಾಗಳಲ್ಲಿ 4 ಪ್ರಕರಣಗಳು ವರದಿಯಾಗಿವೆ.
ಭಾನುವಾರ ವರೆಗೆ ವುಹಾನ್‌ನಿಂದ 50 ಲಕ್ಷ ಮಂದಿ ಬೇರೆ ನಗರಗಳಿಗೆ ವಲಸೆ ಹೋಗಿದ್ದಾರೆ ಎಂದು ಅಲ್ಲಿನ ಮೇಯರ್‌ ತಿಳಿಸಿದ್ದಾರೆ.

436 ಮಂದಿಯ ಪರೀಕ್ಷೆ: ಚೀನಾದಿಂದ ಕೇರಳಕ್ಕೆ ಇದುವರೆಗೆ ಆಗಮಿಸಿರುವ 436 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಐವರನ್ನು ತೀರಾ ನಿಗಾ ಸ್ಥಿತಿಯಲ್ಲಿ ಇರಿಸಲಾಗಿದೆ. ಎರ್ನಾಕುಳಂನಲ್ಲಿ ಮೂವರು, ತಿರುವನಂತಪುರ ಮತ್ತು ತ್ರಿಶ್ಶೂರ್‌ನಲ್ಲಿ ತಲಾ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಲ್ಲಿ ನಿಗಾಕ್ಕೆ ನಿರ್ಧಾರ
ಕರ್ನಾಟಕದಲ್ಲಿ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಾ ಭಾಗದಿಂದ ಬಂದ 2,572 ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ ಮೂವರಿಗೆ ಸೋಂಕು ತಗುಲಿದೆ ಎಂಬ ಶಂಕೆಯಿಂದ ರಕ್ತ ಮಾದರಿ ಪರೀಕ್ಷೆ ನಡೆಸಲಾಗಿದೆ. ಅವರು ಮಾತ್ರವಲ್ಲದೆ, ವುಹಾನ್‌ನಿಂದ ಆಗಮಿಸಿರುವ ಆರು ಮಂದಿಯ ಮೇಲೆ ಮುಂದಿನ 28 ದಿನಗಳ ಕಾಲ ನಿಗಾ ವಹಿಸಲು ತೀರ್ಮಾನಿಸಲಾಗಿದೆ.

ಪರೀಕ್ಷಿಸಿಕೊಳ್ಳಿ: ಕೊರೊನಾ ವೈರಸ್‌ ನ್ಯುಮೋನಿಯಾ ಲಕ್ಷಣ ಹೊಂದಿದೆ. ಜನದಟ್ಟಣೆ ಪ್ರದೇಶಗಳಲ್ಲಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಹೀಗಾಗಿ, ತೀವ್ರ ಜ್ವರ, ತಲೆನೋವು, ಮೈಕೈ ನೋವು, ಮೂಗು ಸೋರುವಿಕೆ, ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡು ಬರುತ್ತವೆ. ಮಹಾನಗರಗಳಲ್ಲಿ ನ್ಯೂಮೋನಿಯಾ ಲಕ್ಷಣಗಳು ಕಂಡುಬಂದವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ವೈರಸ್‌ಗೆ ಬಿದ್ದ ಷೇರು ಪೇಟೆ
ಮಾರಕ ವೈರಸ್‌ ಭೀತಿಗೆ ಸೋಮವಾರ ಬಾಂಬೆ ಷೇರು ಪೇಟೆ ಕುಸಿದಿದೆ. ದಿನದ ಅಂತ್ಯಕ್ಕೆ 458.07 ಪಾಯಿಂಟ್ಸ್‌ಗಳಷ್ಟು ಸೂಚ್ಯಂಕ ಪತನವಾಗಿದೆ. ಇದು ನಾಲ್ಕು ತಿಂಗಳ ಅವಧಿಯಲ್ಲಿ ಇದು ಎರಡನೇ ಅತಿದೊಡ್ಡ ಪತನವಾಗಿದೆ. ಬಿಎಸ್‌ಇನಲ್ಲಿ ಮಧ್ಯಂತರ ವಹಿವಾಟಿನಲ್ಲಿ 500 ಪಾಯಿಂಟ್ಸ್‌ಗಳಷ್ಟು ಕುಸಿದಿದೆ. ದಿನದ ಅಂತ್ಯಕ್ಕೆ 41, 155.12ರಲ್ಲಿ ವಹಿವಾಟು ಮುಕ್ತಾಯವಾಯಿತು. ನಿಫ್ಟಿ ಕೂಡ 129 ಪಾಯಿಂಟ್‌ಗಳಷ್ಟು ಅಂದರೆ 12, 119ರಲ್ಲಿ ಕೊನೆಗೊಂಡಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.