ನೂರು ಕೋಟಿ ಭಾರತೀಯರ ರಕ್ತದಲ್ಲಿ ಭ್ರಷ್ಟಾಚಾರ: ಉ.ಪ್ರ.ಸಚಿವ ವಿವಾದ
Team Udayavani, May 19, 2018, 3:19 PM IST
ಲಕ್ನೋ : “ನೂರು ಕೋಟಿ ಭಾರತೀಯರ ರಕ್ತದ ಆಳದಲ್ಲಿ ಭ್ರಷ್ಟಾಚಾರ ಹರಿಯುತ್ತಿದೆ’ ಎಂದು ಉತ್ತರ ಪ್ರದೇಶ ಕ್ಯಾಬಿನೆಟ್ ಸಚಿವ ಓಂ ಪ್ರಕಾಶ್ ರಾಜಭಾರ್ ಹೇಳಿರುವುದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಇರಿಸುಮುರಿಸು ಉಂಟುಮಾಡಿದೆ.
ಹಮೀರ್ಪುರ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಚಿವ ರಾಜಭಾರ್ ಅವರು, “ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಅಷ್ಟು ಸುಲಭವಲ್ಲ; ಏಕೆಂದರೆ ಇದು ದೇಶಾದ್ಯಂತ ಅತಿಯಾಗಿ ಹರಡಿಕೊಂಡಿರುವ ಪಿಡುಗಾಗಿದೆ’ ಎಂದು ಹೇಳಿದರು. ಭ್ರಷ್ಟಾಚಾರ ಎನ್ನುವುದು ಎಷ್ಟು ಆಳವಾಗಿದೆ ಎಂದರೆ ಅದು ನೂರು ಕೋಟಿ ಭಾರತೀಯರ ರಕ್ತದಾಳದಲ್ಲಿ ಹರಿಯುತ್ತಿದೆ ಎಂದವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಈಚೆಗೆ ಫ್ಲೈ ಓವರ್ ಕುಸಿದು ಹಲವು ಡಜನ್ ಜೀವಗಳು ಬಲಿಯಾದುದನ್ನು ಉಲ್ಲೇಖೀಸಿ ಮಾತನಾಡಿದ ರಾಜಭಾರ್, ಸಮಾಜದಿಂದ ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾಕಷ್ಟು ಸಮಯ ತಗಲುತ್ತದೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಭ್ರಷ್ಟಾಚಾರದ ವಿರುದ್ದ ಖುದ್ದಾಗಿ ಏಕಾಂಗಿ ಹೋರಾಟ ನಡೆಸುತ್ತಿದ್ದಾರೆ ಎಂದು ರಾಜಭಾರ್ ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಅವರು ಎಸ್ಸಿ/ಎಸ್ಟಿ ಸಮುದಾಯದ ಕಾನೂನುಸಮ್ಮತ ಬೇಡಿಕೆಗಳತ್ತ ಯಾವುದೇ ಧ್ಯಾನ ನೀಡುತ್ತಿಲ್ಲ ಎಂದು ರಾಜಭಾರ್ ಆರೋಪಿಸಿದರು.
ಇದೇ ಸಚಿವರು ಈ ಹಿಂದೆ ಸಿಎಂ ಯೋಗಿ ಆದಿತ್ಯನಾಥ್ ಸರಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಹೇಳಿದ್ದರು.
ರಾಜಭಾರ್ ಅವರ ಈ ಮಾತುಗಳು ಅಗ್ಗದ ಪ್ರಚಾರ ಪಡೆಯುವ ಉದ್ದೇಶದ್ದಾಗಿದೆ ಎಂದು ಬಿಜೆಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು