ಘಟಬಂಧನದಿಂದ ಮಹಾಭ್ರಷ್ಟಾಚಾರ

ಉತ್ತರ ಪ್ರದೇಶದಲ್ಲಿ ಮೈತ್ರಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಪ್ರಧಾನಿ ಮೋದಿ

Team Udayavani, May 5, 2019, 7:42 AM IST

Modi 4

ತಾಪ್‌ಗ್ಢ: ಮಹಾಘಟಬಂಧನದಿಂದ ಮಹಾ ಭ್ರಷ್ಟಾಚಾರ ಹೆಚ್ಚುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ಚುನಾವಣ ರ್ಯಾಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ನ ಅಧಃಪತನ ಶುರುವಾಗಿದೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ತನ್ನ ಅಹಂಕಾರದಿಂದಲೇ ಕುಸಿಯು ತ್ತಾರೆ ಎಂದಿದ್ದಾರೆ. ಒಂದೆಡೆ ಸಮಾಜವಾದಿ ಪಕ್ಷದ ಮುಖಂಡರು ಕಾಂಗ್ರೆಸ್‌ ಜತೆಗೆ ವೇದಿಕೆ ಹಂಚಿಕೊಳ್ಳುತ್ತಾರೆ. ಆದರೆ ಅದೇ ಸಮಾಜವಾದಿ ಪಕ್ಷದ ಜತೆ ಮಹಾ ಘಟಬಂಧನ ಮೈತ್ರಿ ಮಾಡಿಕೊಂಡಿರುವ ಬಿಎಸ್‌ಪಿ, ಕಾಂಗ್ರೆಸ್‌ಗೆ ವಿರುದ್ಧ ಟೀಕಾಪ್ರಹಾರ ನಡೆಸುತ್ತಿದೆ ಎಂದು ಮೋದಿ ಹೇಳಿದ್ದಾರೆ. ಒಂದು ಕಾಲದಲ್ಲಿ ಪರಿಶುದ್ಧ ಪ್ರಧಾನಿ ಎಂದು ಕರೆಸಿ ಕೊಂಡಿದ್ದ ರಾಜೀವ್‌ ಗಾಂಧಿ ಕೊನೆಗೆ ನಂಬರ್‌ ಒನ್‌ ಭ್ರಷ್ಟರಾದರು. ಕಾಂಗ್ರೆಸ್‌ ಹಲವು ಬಾರಿ ಬೆಂಬಲ ವಾಪಸ್‌ ಪಡೆದು ರಾಜಕೀಯ ಅಸ್ಥಿರತೆಗೆ ಕಾರಣವಾಗಿದೆ. ಬಿಜೆಪಿ ಮಾತ್ರವೇ ದೇಶಕ್ಕೆ ಸ್ಥಿರ ಸರಕಾರ ನೀಡಬಲ್ಲದು ಎಂದು ಮೋದಿ ಹೇಳಿದ್ದಾರೆ.

ಅಮೇಠಿಯಲ್ಲಿ ಶಾ ರೋಡ್‌ಶೋ
ರಾಹುಲ್ ಗಾಂಧಿ ಲೋಕಸಭೆ ಕ್ಷೇತ್ರ ಅಮೇಠಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಶನಿವಾರ ರೋಡ್‌ಶೋ ನಡೆಸಿದ್ದಾರೆ. ಜನರಿಗೆ ಕುಟುಂಬ ರಾಜಕಾರಣ ಹಾಗೂ ಅಭಿವೃದ್ಧಿಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದು ಎಂದಿ ದ್ದಾರೆ. ಬಿಜೆಪಿ ಅಭ್ಯರ್ಥಿ ಸ್ಮತಿ ಇರಾನಿ ಯೊಂದಿಗೆ ಶಾ ರೋಡ್‌ಶೋ ನಡೆಸಿದ್ದು, ಉತ್ತರ ಪ್ರದೇಶದಲ್ಲಿ ಹಿಂದಿ ಗಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದಿದ್ದಾರೆ.

ಬಿಜೆಪಿಯಿಂದ ಹಣದ ಆಮಿಷ: ಪ್ರಿಯಾಂಕಾ
ಪ್ರತಿ ಗ್ರಾಮದ ಮುಖಸ್ಥರಿಗೆ ಬಿಜೆಪಿ 20 ಸಾವಿರ ರೂ. ಹಣದ ಆಮಿಷ ಒಡ್ಡುತ್ತಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ. ಬಿಜೆಪಿ ಹಣ ವಿತರಿಸುತ್ತಿದೆ. ಆದರೆ ಕಾಂಗ್ರೆಸ್‌ ಪ್ರಣಾಳಿಕೆ ಯನ್ನು ವಿತರಿಸುತ್ತಿದೆ ಎಂದಿದ್ದಾರೆ. ಅಲ್ಲದೆ, ಬಿಜೆಪಿ ಅಭ್ಯರ್ಥಿ ಸ್ಮತಿ ಇರಾನಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ, ಕೇವಲ 16 ಬಾರಿ ಸ್ಮತಿ ಕ್ಷೇತ್ರಕ್ಕೆ ಬಂದಿದ್ದಾರೆ. ಆದರೆ ರಾಹುಲ್ ಇಲ್ಲಿಗೆ ಲೆಕ್ಕವಿಲ್ಲದಷ್ಟು ಬಾರಿ ಬಂದಿದ್ದಾರೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ಕೇಜ್ರಿವಾಲ್ಗೆ ಕಪಾಳಮೋಕ್ಷ
ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಚುನಾವಣ ರ್ಯಾಲಿಯಲ್ಲಿ ಭಾಗವಹಿಸಿದ್ದಾಗ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾರೆ. ಮೋತಿನಗರದಲ್ಲಿ ರೋಡ್‌ಶೋದಲ್ಲಿ ಭಾಗವಹಿಸಿದ್ದ ಕೇಜ್ರಿವಾಲ್, ಜನರಿಗೆ ಕೈಬೀಸುತ್ತಾ ಸಾಗಿದ್ದರು. ಈ ವೇಳೆ ವ್ಯಕ್ತಿ ಯೊಬ್ಬ ವಾಹನವನ್ನೇರಿ ಕೇಜ್ರಿವಾಲ್ಗೆ ಹೊಡೆದಿದ್ದಾರೆ. ಇದು ವಿಪಕ್ಷದ ಕುತಂತ್ರ ಎಂದು ಎಎಪಿ ಆರೋಪಿಸಿದೆ. ಅಲ್ಲದೆ ಮುಖ್ಯ ಮಂತ್ರಿ ಭದ್ರತೆಯಲ್ಲಿ ಗಂಭೀರ ಲೋಪವಾಗಿದೆ ಎಂದೂ ಆರೋಪಿ ಸಲಾಗಿದೆ. ಥಳಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲವು ಬಾರಿ ಎಎಪಿ ಮುಖಂಡ ಕೇಜ್ರಿವಾಲ್ ಥಳಿತಕ್ಕೊಳಗಾಗಿದ್ದಾರೆ.

ನಾಳೆ 5ನೇ ಹಂತದ ಮತದಾನ
ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನ ಸೋಮವಾರ ನಡೆಯಲಿದ್ದು, ಉತ್ತರ ಪ್ರದೇಶದ ಅಮೇಠಿ, ರಾಯ್‌ಬರೇಲಿ ಸೇರಿದಂತೆ ಕುತೂಹಲ ಹುಟ್ಟಿಸಿರುವ ಹಲವು ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಶನಿವಾರ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕೊನೆ ಕ್ಷಣದಲ್ಲಿ ಜನರನ್ನು ಮನವೊಲಿಸಲು ಎಲ್ಲ ಪಕ್ಷಗಳು ಯತ್ನಿಸಿದ್ದವು. ಅಮೇಠಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಬೃಹತ್‌ ರ್ಯಾಲಿ ನಡೆಸಿದರೆ, ರಾಯ್‌ ಬರೇಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಇತರ ಪಕ್ಷಗಳೂ ಬಿರುಸಿನ ಪ್ರಚಾರ ನಡೆಸಿವೆ. ಒಟ್ಟು 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಪಶ್ಚಿಮ ಬಂಗಾಲ, ಬಿಹಾರ ಮತ್ತು ಜಾರ್ಖಂಡದ ಕೆಲವು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಮೋದಿಯನ್ನು ಟೀಕಿಸಿದ ಟಿಎಂಸಿ
ಪಶ್ಚಿಮ ಬಂಗಾಲದಲ್ಲಿ ಫೋನಿ ಚಂಡಮಾರುತದ ಪರಿಣಾಮಗಳನ್ನು ತಿಳಿಯಲು ಪ್ರಧಾನಿ ನರೇಂದ್ರ ಮೋದಿಯವರು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಕರೆ ಮಾಡದೇ ಪಶ್ಚಿಮ ಬಂಗಾಲದ ರಾಜ್ಯಪಾಲರಾದ ಕೇಸರಿನಾಥ್‌ ತ್ರಿಪಾಠಿಯವರಿಗೆ ಕರೆ ಮಾಡಿ ವಿವರ ಪಡೆದಿರುವುದು ವಿವಾದ ಕ್ಕೀಡಾಗಿದೆ. ಪ್ರಧಾನಿ ನಡೆಯನ್ನು ಟೀಕಿಸಿರುವ ತೃಣಮೂಲ ಕಾಂಗ್ರೆಸ್‌, ”ರಾಜ್ಯಪಾಲರಿಗೆ ಕರೆ ಮಾಡಿದ್ದಕ್ಕೆ ನಮ್ಮ ಅಭ್ಯಂತರವೇನಿಲ್ಲ. ಆದರೆ, ರಾಜ್ಯಪಾಲರಿಗಿಂತ ಖಚಿತ ಮಾಹಿತಿಯನ್ನು ಮುಖ್ಯಮಂತ್ರಿ ಅಥವಾ ರಾಜ್ಯದ ಇತರ ಅಧಿಕಾರಿಗಳು ನೀಡುತ್ತಿದ್ದರು. ಮತ್ತಷ್ಟು ನೈಜ ಚಿತ್ರಣ ನೀಡುತ್ತಿದ್ದರು. ಆದರೆ, ಪ್ರಧಾನಿಯವರು ಇಲ್ಲಿ ರಾಜಕೀಯ ಕಾರಣಗಳನ್ನು ಮುಂದಿಟ್ಟುಕೊಂಡು ಸಿಎಂ ಮಮತಾ ಬ್ಯಾನರ್ಜಿಯವರಿಗೆ ಕರೆ ಮಾಡಿಲ್ಲ” ಎಂದಿದೆ.

ಮೋದಿಗೆ ಮತ್ತೂಂದು ಕ್ಲೀನ್‌ಚಿಟ್
ಎಪ್ರಿಲ್ 21ರಂದು ಗುಜರಾತ್‌ನಲ್ಲಿ ಚುನಾವಣ ಪ್ರಚಾರದ ವೇಳೆ ವಿಂಗ್‌ ಕಮಾಂಡರ್‌ ಅಭಿನಂದನ್‌ ಮತ್ತು ಬಾಲಾಕೋಟ್ ದಾಳಿಯನ್ನು ಪ್ರಸ್ತಾವಿಸಿದ ಪ್ರಧಾನಿ ನರೇಂದ್ರ ಮೋದಿಗೆ ಚುನಾವಣ ಆಯೋಗ ಕ್ಲೀನ್‌ ಚಿಟ್ ನೀಡಿದೆ. ಅಭಿನಂದನ್‌ರನ್ನು ಪಾಕ್‌ ಬಿಡುಗಡೆ ಮಾಡುವಂತೆ ಒತ್ತಡ ತಂದಿದ್ದೆವು. ಬಿಡುಗಡೆ ಮಾಡದಿದ್ದರೆ ಪರಿಣಾಮ ಎದುರಿಸ ಬೇಕಾದೀತು ಎಂದು ಎಚ್ಚರಿಸಿದ್ದೆವು ಎಂದು ಮೋದಿ ಹೇಳಿಕೊಂಡಿದ್ದರು. ಈ ಬಗ್ಗೆ ಮೋದಿ ವಿರುದ್ಧ ಆಯೋಗಕ್ಕೆ ದೂರು ನೀಡಲಾಗಿತ್ತು. ದೂರು ಪರಿಶೀಲಿಸಿದ ಚುನಾವಣ ಆಯೋಗ ಇದರಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.