ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ: ಕಾಂಗ್ರೆಸ್ ಆರೋಪ
Team Udayavani, Aug 18, 2019, 8:05 PM IST
ಹೊಸದಿಲ್ಲಿ: ದೇಶದಲ್ಲಿ ಆರ್ಥಿಕತೆ ತೀವ್ರ ಕುಸಿತಗೊಂಡಿದ್ದು, ತುರ್ತು ಪರಿಸ್ಥಿತಿ ಉದ್ಭವವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಅವರು, ಆರ್ಥಿಕತೆ ಅಧಃಪತನವಾಗುತ್ತಿರುವುದರಿಂದ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಸರಕಾರ ನಾಟಕವಾಡುತ್ತಿದೆ ಎಂದು ಟೀಕಿಸಿದರು.
ಅವರು ವಿಶೇಷವಾಗಿ ದೇಶದ ಆಟೋಮೊಬೈಲ್ ವಲಯ ತೀವ್ರವಾಗಿ ಕುಸಿತಗೊಂಡಿದ್ದನ್ನು ಪ್ರಸ್ತಾವಿಸಿದರು. 2018 ಜುಲೈನಿಂದ ಮಾರುಕಟ್ಟೆ ತೀವ್ರ ಕುಸಿತ ಕಂಡಿದೆ. ಶೇ.31ರಷ್ಟು ಮಾರಾಟ ಕಡಿಮೆಯಾಗಿದ್ದು, ಕಳೆದ 9 ತಿಂಗಳಿಂದ ಮಾರಾಟ ತೀವ್ರ ಇಳಿಕೆ ಕಂಡಿದೆ ಎಂದು ಹೇಳಿದರು. ಇದರೊಂದಿಗೆ ಅವರು ಷೇರು ಮಾರುಕಟ್ಟೆ ಕುಸಿತ, ಜಿಡಿಪಿ ಕುಸಿತ, ರಿಯಲ್ ಎಸ್ಟೇಟ್, ರೂಪಾಯಿ ಕುಸಿತ, ವಿದೇಶಿ ನೇರ ಬಂಡವಾಳ ಹೂಡಿಕೆ ಕುಸಿತವಾಗಿರುವುದನ್ನು ಬೊಟ್ಟು ಮಾಡಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿಯವರ 1ನೇ ಅವಧಿಯಿಂದ 2ನೇ ಅವಧಿಗೆ ಆರ್ಥಿಕ ಕುಸಿತ ಹೆಚ್ಚು ಪ್ರಗತಿಯಲ್ಲಿದೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು