ದೇಶವೀಗ ಸುರಕ್ಷತೆಯ ಸವಾಲು ಎದುರಿಸುತ್ತಿದೆ
Team Udayavani, Jan 2, 2019, 3:56 AM IST
ಹೊಸದಿಲ್ಲಿ: ದೇಶವು ಪ್ರಸ್ತುತ ಅತ್ಯಂತ ಭಿನ್ನ ರೀತಿಯಲ್ಲಿ ಭದ್ರತೆಯ ಸವಾಲು ಎದುರಿಸುತ್ತಿದೆ. ಗಡಿಯಲ್ಲಿನ ಪರಿಸ್ಥಿತಿಯಿಂದಾಗಿ ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಆಂತರಿಕ ಭದ್ರತೆಗೆ ಸವಾಲು ಎದುರಾಗಿದೆ ಎಂದು ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ.
ಭೂಸೇನೆಯ ಯೋಧರಿಗೆ, ಅಧಿಕಾರಿಗಳಿಗೆ ಕಳುಹಿಸಿರುವ ಹೊಸ ವರ್ಷದ ಸಂದೇಶದಲ್ಲಿ ಅವರು ಈ ಅಂಶ ಪ್ರಸ್ತಾಪ ಮಾಡಿದ್ದಾರೆ. ಇದುವರೆಗೆ ಉಂಟಾದ ಸವಾಲುಗಳನ್ನು ಧೈರ್ಯದಿಂದ ಸೈನಿಕರು ಎದುರಿಸಿರುವುದು ಶ್ಲಾಘನೀಯ ಎಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿರುವ ಗಡಿ ನಿಯಂತ್ರಣ ರೇಖೆ ಮತ್ತು ಚೀನದೊಂದಿಗೆ ಹೊಂದಿರುವ 4 ಸಾವಿರ ಕಿ.ಮೀ. ಗಡಿಯ ಬಗ್ಗೆ ಭೂಸೇನಾ ಮುಖ್ಯಸ್ಥರು ಯಾವುದೇ ಪ್ರಸ್ತಾಪ ಮಾಡಿಲ್ಲ. ಸೈನಿಕರ ತ್ಯಾಗ, ಎಲ್ಲರೂ ಒಗ್ಗೂಡಿ ಕಾರ್ಯ ನಿರ್ವಹಿಸಿದ್ದರಿಂದ ದೇಶದ ಪ್ರಾದೇ ಶಿಕ ಸಮಗ್ರತೆಯನ್ನು ಕಾಯ್ದುಕೊಳ್ಳಲು ನೆರವಾಗಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಚೀನ ಗಡಿ ಗುಂಟ ಭೂಸೇನೆ ಗಸ್ತು ತಿರುಗುವುದನ್ನು ಮತ್ತಷ್ಟು ಚುರುಕುಗೊಳಿಸಿದೆ ಎಂದಿದ್ದಾರೆ ಜ|ರಾವತ್. 12 ಲಕ್ಷ ಸೈನಿಕರು ಇನ್ನೂ ಹೆಚ್ಚಿನ ಸ್ಫೂರ್ತಿಯಿಂದ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ