Trust Vote: ಫೆ.5 ರಂದು ನಡೆಯುವ ವಿಶ್ವಾಸ ಮತದಲ್ಲಿ ಭಾಗಿಯಾಗಲು ಹೇಮಂತ್ ಸೊರೆನ್ಗೆ ಅವಕಾಶ
Team Udayavani, Feb 3, 2024, 4:21 PM IST
ರಾಂಚಿ : ಭೂ ಹಗರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ, ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ಗೆ ಫೆಬ್ರವರಿ 5ರಂದು ನಡೆಯಲಿರುವ ವಿಶ್ವಾಸಮತದಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬುಧವಾರ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಸೊರೆನ್ ಅವರು ಚಂಪೈ ಸೊರೆನ್ ಅವರ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿಯನ್ನು ನೀಡಿದೆ.
ಶುಕ್ರವಾರ ಹೇಮಂತ್ ಸೋರೆನ್ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿದೆ.
ಜನವರಿ 31 ರಂದು ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸುವ ಕೆಲವೇ ಗಂಟೆಗಳ ಮೊದಲು ಚಂಪೈ ಸೊರೆನ್ ಅವರನ್ನು ತಮ್ಮ ಉತ್ತರಾಧಿಕಾರಿ ಎಂದು ಹೇಮಂತ್ ಸೊರೆನ್ ಹೆಸರಿಸಿದ್ದರು. ಅದರಂತೆ ಚಂಪೈ ಸೊರೆನ್ ಅವರು ಫೆಬ್ರವರಿ 2 ರಂದು ಜಾರ್ಖಂಡ್ ನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರ ಪ್ರಮಾಣ ವಚನದ ನಂತರ, ಅಸೆಂಬ್ಲಿಯಲ್ಲಿ ಬಹುಮತ ಸಾಬೀತುಪಡಿಸಲು ಸೊರೆನ್ ಅವರಿಗೆ 10 ದಿನಗಳ ಕಾಲಾವಕಾಶ ನೀಡಲಾಯಿತು. ಅದರಂತೆ ಸೋಮವಾರ ವಿಶ್ವಾಸ ಮತಯಾಚನೆಗೆ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: Punjab Governor: ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ ಬನ್ವಾರಿಲಾಲ್ ಪುರೋಹಿತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್