ರೇಪ್ ಕೇಸ್ : ಬಿಜೆಪಿ ಶಾಸಕನಿಗೆ ಜಾಮೀನು ನೀಡಲು ನಿರಾಕರಿಸಿದ ಕೋರ್ಟ್
Team Udayavani, Apr 30, 2022, 9:17 PM IST
ಥಾಣೆ: ಅತ್ಯಾಚಾರ ಮತ್ತು ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಗಣೇಶ್ ನಾಯ್ಕ್ಗೆ ಬಂಧನ ಪೂರ್ವ ಜಾಮೀನು ನೀಡಲು ಥಾಣೆ ಜಿಲ್ಲಾ ನ್ಯಾಯಾಲಯ ಶನಿವಾರ ನಿರಾಕರಿಸಿದೆ.
ಜಿಲ್ಲಾ ಮತ್ತು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎನ್ ಕೆ ಬ್ರಹ್ಮೆ ಆದೇಶ ಹೊರಡಿಸಿದ್ದು, ಜಾಮೀನು ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಮಹಾರಾಷ್ಟ್ರದ ಮಾಜಿ ಸಚಿವ ಗಣೇಶ್ ನಾಯ್ಕ್ ವಿರುದ್ಧ ಈ ತಿಂಗಳ ಆರಂಭದಲ್ಲಿ ಅತ್ಯಾಚಾರ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳಿಗಾಗಿ ನವಿ ಮುಂಬೈನಲ್ಲಿ ಎರಡು ಎಫ್ಐಆರ್ ದಾಖಲಿಸಲಾಗಿತ್ತು.
42 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ಗಳಲ್ಲಿ ಗಣೇಶ್ ನಾಯ್ಕ್ ಅವರೊಂದಿಗೆ ಹಲವಾರು ವರ್ಷಗಳಿಂದ ಲಿವ್-ಇನ್ ಸಂಬಂಧವನ್ನು ಹೊಂದಿದ್ದು, ಅವರಿಂದ ಒಬ್ಬ ಮಗನನ್ನು ಹೊಂದಿದ್ದರು ಎಂದು ಆರೋಪಿಸಲಾಗಿತ್ತು, ಆದರೆ ಅವರು ನಾಲ್ಕು ವರ್ಷಗಳ ಹಿಂದೆ ಸಂಬಂಧವನ್ನು ಮುರಿದುಕೊಂಡಿದ್ದರು ಎಂದು ದಾಖಲಾಗಿದೆ.
ಪ್ರಸ್ತುತ ನವಿ ಮುಂಬೈನ ಐರೋಲಿಯ ಶಾಸಕ ಗಣೇಶ್ ನಾಯ್ಕ್ ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಆಕೆ ಹೇಳಿದ್ದಾರೆ.
ಪ್ರಕರಣಗಳು ದಾಖಲಾದ ನಂತರ, ಬಿಜೆಪಿ ನಾಯಕ ಥಾಣೆ ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿ, ಎರಡು ನಿರೀಕ್ಷಣಾ ಅಥವಾ ಬಂಧನ ಪೂರ್ವ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು. ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ಅವರ ವಕೀಲರು ವಿಚಾರಣೆ ವೇಳೆ ತಿಳಿಸಿದ್ದಾರೆ.ಆದರೆ ಆಕೆ ಪೊಲೀಸರಿಗೆ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ನೀಡಿದ ಮೂಲ ದೂರಿನಲ್ಲಿ ಅತ್ಯಾಚಾರದ ಬಗ್ಗೆ ಉಲ್ಲೇಖಿಸಿಲ್ಲ ಮತ್ತು ವಿವಾದವು ಮುಖ್ಯವಾಗಿ ಮಗುವಿನ ಪಿತೃತ್ವದ ಬಗ್ಗೆ ಎಂದು ವಕೀಲರು ಹೇಳಿದ್ದಾರೆ.
ಮತ್ತೊಂದೆಡೆ, ಅಭಿಯೋಜಕ ವಿನಿತ್ ಕುಲಕರ್ಣಿ ಅವರು ಅರ್ಜಿಗಳನ್ನು ತೀವ್ರವಾಗಿ ವಿರೋಧಿಸಿದ್ದು, ತನಿಖೆ ಇನ್ನೂ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ