ಜು.10ರ ವರೆಗೆ ಕಾರ್ತಿ ಚಿದಂಬರಂ ಬಂಧನ ಇಲ್ಲ: ದಿಲ್ಲಿ ಕೋರ್ಟ್
Team Udayavani, May 2, 2018, 11:58 AM IST
ಹೊಸದಿಲ್ಲಿ : 2ಜಿ ತರಂಗಾಂತರ ಕೇಸುಗಳಿಗೆ ಸಂಬಂಧಿಸಿದ ಏರ್ಸೆಲ್ ಮ್ಯಾಕ್ಸಿಸ್ ವಿಷಯದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಕೇಸುಗಳಲ್ಲಿ ಜುಲೈ 10ರ ತನಕ ಕಾರ್ತಿ ಚಿದಂಬರಂ ಅವರಿಗೆ ದಿಲ್ಲಿ ನ್ಯಾಯಾಲಯ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿತು.
ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿ ಬಗ್ಗೆ ವಾದಿಸಲು ತನಗೆ ಸ್ವಲ್ಪ ಸಮಯಾವಕಾಶ ಬೇಕೆಂದು ಜಾರಿ ನಿರ್ದೇಶನಾಲಯ ಹೇಳಿದುದನ್ನು ಅನುಸರಿಸಿ ವಿಶೇಷ ನ್ಯಾಯಾಧೀಶರಾದ ಒ ಪಿ ಸೈನಿ ಅವರು ಕಾರ್ತಿ ಚಿದಂಬರಂ ಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದರು.
ಜಾರಿ ನಿರ್ದೇಶನಾಲಯದ ಪರವಾಗಿ ಹಾಜರಿದ್ದ ವಕೀಲ ನಿತೇಶ್ ರಾಣಾ ಅವರು ಪ್ರಕರಣದ ವಿಚಾರಣೆಯ ಮುಂದೂಡಿಕೆಯನ್ನು ಕೋರುತ್ತಾ, ಈ ಕೇಸಿಗೆ ಸಂಬಂಧಿಸಿದ ಪ್ರಕರಣವೊಂದು ಸುಪ್ರೀಂ ಕೋರ್ಟ್ ಮುಂದೆ ವಿಚಾರಣಗೆ ಬಾಕಿ ಇರುವ ಕಾರಣ ಜುಲೈ 2ರಂದು ತಾನು ಈ ವಿಷಯವನ್ನು ಕೈಗೆೊRಳ್ಳುವುದಾಗಿ ಹೇಳಿದರು.
ಸಿಬಿಐ ವಕೀಲರು ಕೂಡ ಇಡಿ ವಕೀಲರ ಈ ವಾದವನ್ನು ಬೆಂಬಲಿಸಿ ಪ್ರಕರಣವನ್ನು ಮುಂದಿನ ದಿನಾಂಕಕ್ಕೆ ನಿಗದಿಸಲು ಕೋರಿದರು. ಅಂತೆಯೇ ಕೋರ್ಟ್ ಅದನ್ನು ಪುರಸ್ಕರಿಸಿ ಜು.10ರ ವರೆಗೆ ಕಾರ್ತಿ ಚಿದಂಬರಂ ಬಂಧನಕ್ಕೆ ತಾತ್ಕಾಲಿಕ ರಕ್ಷಣೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ