ಡೆಡ್ಲಿ ಕೋವಿಡ್ 19: ಕೇವಲ 2 ದಿನಗಳಲ್ಲಿಯೇ 4ರಿಂದ 5 ಲಕ್ಷಕ್ಕೆ ಏರಿಕೆ ಕಂಡ ಕೋವಿಡ್ ಸೋಂಕು
ಮಾರ್ಚ್ 26ರ ರಾತ್ರಿ 11.45ರವರೆಗೆ ಜಾಗತಿಕವಾಗಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 22,993
Team Udayavani, Mar 27, 2020, 10:19 AM IST
Representative Image
ನವದೆಹಲಿ: ಮಾರಣಾಂತಿಕ ಕೋವಿಡ್ 19 ವೈರಸ್ ವಿರುದ್ಧ ಜಾಗತಿಕವಾಗಿ ಕಠಿಣ ಕ್ರಮಗಳನ್ನು ಅನುಸರಿಸುತ್ತಿರುವ ನಡುವೆಯೇ ಕೋವಿಡ್ 19 ಸೋಂಕಿಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಹಾಗೂ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿರುವುದು ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ವರದಿ ತಿಳಿಸಿದೆ.
ಅಮೆರಿಕದ ಜಾನ್ಸ್ ಹಾಪ್ ಕಿನ್ಸ್ ಯೂನಿರ್ವಸಿಟಿಯ ಅಂಕಿ ಅಂಶದ ಪ್ರಕಾರ, ಮಾರ್ಚ್ 26ರ ರಾತ್ರಿ 11.45ರವರೆಗೆ ಜಾಗತಿಕವಾಗಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದವರ ಸಂಖ್ಯೆ 22,993ಕ್ಕೆ ಏರಿದ್ದು, ಸೋಂಕು ದೃಢಪಟ್ಟವರ ಸಂಖ್ಯೆ 5,10,108. ಇದೀಗ ವಿಶ್ವಾದ್ಯಂತ ಕೋವಿಡ್ 19 ಸೋಂಕು ದೃಢಪಟ್ಟವರ ಸಂಖ್ಯೆ 5,31,860ಕ್ಕೆ ಏರಿಕೆಯಾಗಿದೆ. ಸಾವನ್ನಪ್ಪಿದವರ ಸಂಖ್ಯೆ 24,057(ಮಾ.27 ಬೆಳಗ್ಗೆ 8.40ರವರೆಗೆ) ಎಂದು ವಿವರಿಸಿದೆ.
ಕೇವಲ ಎರಡು ದಿನಗಳಲ್ಲಿ ನಾಲ್ಕು ಲಕ್ಷ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 5ಲಕ್ಷಕ್ಕೂ ಮೀರಿ ಹೋಗಿದೆ. ಮಿತಿ ಮೀರುತ್ತಿರುವ ಕೋವಿಡ್ 19 ನಿಂದಾಗಿ ವೈದ್ಯ ಜಗತ್ತು ಬೆಚ್ಚಿಬಿದ್ದಿದೆ. ಚೀನಾದ ವುಹಾನ್ ನಲ್ಲಿ 2019ರ ಡಿಸೆಂಬರ್ 31ರಂದು ಕಾಣಿಸಿಕೊಂಡ ಕೋವಿಡ್ 19 ವೈರಸ್ ಒಂದು ಲಕ್ಷ ಮಂದಿ ಸೋಂಕು ಪೀಡಿತರನ್ನು ಪತ್ತೆಹಚ್ಚಲು 67 ದಿನಗಳು ಬೇಕಾಗಿತ್ತು.
ಆ ನಂತರದ ಒಂದು ಲಕ್ಷ 11 ದಿನಗಳಲ್ಲಿ ಪತ್ತೆಯಾಗಿತ್ತು. ಬಳಿಕ ನಾಲ್ಕು ದಿನಗಳಲ್ಲಿ ಮೂರು ಲಕ್ಷ ಪತ್ತೆಯಾಗಿತ್ತು. ನಂತರದ ಮೂರು ದಿನಗಳಲ್ಲಿ 3ರಿಂದ 4 ಲಕ್ಷಕ್ಕೆ ಏರಿತ್ತು. ತದನಂತರ ಎರಡು ದಿನಗಳಲ್ಲಿ ಒಂದು ಲಕ್ಷ ಮಂದಿ ಸೋಂಕು ಪೀಡಿತರು ಪತ್ತೆಯಾಗಿದ್ದರು ಎಂದು ವರದಿ ವಿವರಿಸಿದೆ.
ಎರಡು ದಿನಗಳಲ್ಲಿ ವಿಶ್ವಾದ್ಯಂತ 4ರಿಂದ 5 ಲಕ್ಷಕ್ಕೆ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗಿದೆ. ಸುಮಾರು 170 ದೇಶಗಳಲ್ಲಿ ಈವರೆಗೆ ಕೋವಿಡ್ 19 ಪ್ರಕರಣ ಪತ್ತೆಯಾಗಿದೆ ಎಂದು ಸಿಎಸ್ ಎಸ್ ಇ ತಿಳಿಸಿದೆ.
ಚೀನಾ ಹೊರತುಪಡಿಸಿ ಇಟಲಿ, ಅಮೆರಿಕ, ಸ್ಪೇನ್, ಜರ್ಮನಿ, ಇರಾನ್, ಫ್ರಾನ್ಸ್ ಮತ್ತು ಸ್ವಿಟ್ಜರ್ ಲ್ಯಾಂಡ್ ನಲ್ಲಿ ಹತ್ತು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಇಟಲಿಯಲ್ಲಿ ಅತ್ಯಧಿಕ ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8,215ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ