ಮತ್ತೆ 4 ಸಾವಿರ ದಾಟಿದ ಸಾವಿನ ಸಂಖ್ಯೆ: 24 ಗಂಟೆ ಅವಧಿಯಲ್ಲಿ 3,62,727 ಸೋಂಕು ಪ್ರಕರಣಗಳು
Team Udayavani, May 13, 2021, 9:36 AM IST
ಹೊಸದಿಲ್ಲಿ: ದೇಶದಲ್ಲಿ ಕೆಲವು ದಿನಗಳಿಂದ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸಾವಿನ ಸಂಖ್ಯೆ ಮಾತ್ರ ಏರುತ್ತಿದೆ. ಇಂದು ಮತ್ತೆ ಸಾವಿನ ಸಂಖ್ಯೆ ನಾಲ್ಕು ಸಾವಿರ ದಾಟಿದ್ದು, 24 ಗಂಟೆ ಅವಧಿಯಲ್ಲಿ 4120 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಅವಧಿಯಲ್ಲಿ 3,62,727 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ. 3,52,181 ಮಂದಿ ಸೋಂಕಿತರು ಈ ಅವಧಿಯಲ್ಲಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಇದುವರೆಗೆ 2 ,37,03,665 ಮಂದಿಗೆ ಸೋಂಕು ದೃಢವಾಗಿದ್ದು, ಅವರಲ್ಲಿ ಇದುವರೆಗೆ 1,97,34,823 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 2,58,317 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 37,10,525 ಸಕ್ರಿಯ ಸೋಂಕು ಪ್ರಕರಣಗಳಿವೆ.
ಇದನ್ನೂ ಓದಿ:ಕೋವಿಡ್ ಸಂಕಷ್ಟ : ಸಿಎಂ ಪರಿಹಾರ ನಿಧಿಗೆ ಒಂದು ಕೋಟಿ ಹಣ ದೇಣಿಗೆ ನೀಡಿದ ನಟ ಸೂರ್ಯ
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 20 ಸಾವಿರ ಗಡಿದಾಟಿದ್ದು, ಸತತ 2ನೇ ದಿನವೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಸೋಂಕಿತರ ಸಾವಾಗಿದೆ. ಬುಧವಾರ 39,998 ಮಂದಿಗೆ ಸೋಂಕು ತಗುಲಿದ್ದು, 517 ಸೋಂಕಿತರ ಸಾವಾಗಿದೆ. 34752 ಸೋಂಕಿತರು ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿಯೇ 16286 ಮಂದಿಗೆ ಸೋಂಕು ತಗುಲಿದ್ದು, 275 ಸಾವಾಗಿವೆ. ಸೋಂಕಿನ ಪಾಸಿಟಿವಿಟಿ ದರ ಶೇ.30ರ ಆಸುಪಾಸಿನಲ್ಲಿ ಮತ್ತು ಸೋಂಕಿತರ ಮರಣ ದರ ಶೇ.1.3 ರಷ್ಟು ದಾಖಲಾಗಿದೆ. ಮಂಗಳವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆ ಗಳು 20 ಸಾವಿರದಷ್ಟು ಹೆಚ್ಚಳವಾಗಿವೆ. ಹೊಸ ಪ್ರಕರಣಗಳು 488, ಸೋಂಕಿತರ ಸಾವು 37 ಹೆಚ್ಚಳವಾಗಿದೆ.
ಇದನ್ನೂ ಓದಿ: ನಿಮ್ಮ ಈ ವ್ಯವಸ್ಥೆ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಕೇಂದ್ರದ ವಿರುದ್ಧ ಕುಮಾರಸ್ವಾಮಿ ಕಿಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ