
ಕೋವಿಡ್ ಪ್ರಕರಣ ತೀವ್ರ ಹೆಚ್ಚಳ; ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದ ಭಾರತ
ಹಲವು ರಾಜ್ಯಗಳಲ್ಲಿ ವಾರಾಂತ್ಯದ ಲಾಕ್ ಡೌನ್ ಮತ್ತು ರಾತ್ರಿ ಕರ್ಫ್ಯೂ ಜಾರಿಗೊಳಿಸಿವೆ.
Team Udayavani, Apr 12, 2021, 6:12 PM IST

ನವದೆಹಲಿ:ಕಳೆದ 24ಗಂಟೆಯೊಳಗೆ ದೇಶದಲ್ಲಿ 1,68, 912 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶ ತಿಳಿಸಿದ್ದು, ಇದರೊಂದಿಗೆ ಭಾರತ ಬ್ರೆಜಿಲ್ ಅನ್ನು ಹಿಂದಿಕ್ಕಿ, ಜಗತ್ತಿನಲ್ಲಿಯೇ ಅತೀ ಹೆಚ್ಚು ಕೋವಿಡ್ ಪ್ರಕರಣ ಹೊಂದಿರುವ ಎರಡನೇ ದೇಶವಾಗಿದೆ.
ಇದನ್ನೂ ಓದಿ:ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಸಹೋದರನ ಕಾರು ಹರಿದು ಇಬ್ಬರ ಸಾವು!
ಭಾರತದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 13.53ಕ್ಕೆ ಏರಿಕೆಯಾಗಿದೆ. ಬ್ರೆಜಿಲ್ ನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 13.45 ಮಿಲಿಯನ್ ಎಂದು ರಾಯಿಟರ್ಸ್ ವರದಿ ಮಾಡಿದೆ. ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 170,179ಕ್ಕೆ ಏರಿಕೆಯಾಗಿದೆ ಎಂದು ಅಂಕಿ ಅಂಶ ತಿಳಿಸಿದೆ.
ಅಮೆರಿಕ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ(31.2ಮಿಲಿಯನ್) ಮೊದಲ ಸ್ಥಾನದಲ್ಲಿದೆ. ಕೋವಿಡ್ 19 ಸೋಂಕು ಪ್ರಕರಣ ದಿನೇ, ದಿನೇ ಹೆಚ್ಚಳವಾಗುತ್ತಿರುವ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ವಾರಾಂತ್ಯದ ಲಾಕ್ ಡೌನ್ ಮತ್ತು ರಾತ್ರಿ ಕರ್ಫ್ಯೂ ಜಾರಿಗೊಳಿಸಿವೆ.
ಮಹಾರಾಷ್ಟ್ರದಲ್ಲಿ ತೀವ್ರಗತಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಳಿವು ನೀಡಿದ್ದಾರೆ. ಈ ನಿಟ್ಟಿನಲ್ಲಿ ಶನಿವಾರ ಸರ್ವಪಕ್ಷ ಸಭೆ ನಡೆಸಿದ್ದರು. ಏಪ್ರಿಲ್ 14ರಂದು ಲಾಕ್ ಡೌನ್ ಜಾರಿ ಬಗ್ಗೆ ಠಾಕ್ರೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Congress ತೊರೆದು ಹೊಸ ಪಕ್ಷ ಕಟ್ಟುವತ್ತ ಸಚಿನ್ ಪೈಲಟ್ ಚಿತ್ತ? ಏನಿದು ಹೊಸ ಬೆಳವಣಿಗೆ?

ಮತ್ತೊಂದು ಘಟನೆ: ಪ್ರೇಯಸಿಯನ್ನು ಕೊಂದು ಮನೆಯ ಟ್ಯಾಂಕ್ ನಲ್ಲಿ 14 ದಿನ ಬಚ್ಚಿಟ್ಟ ವ್ಯಕ್ತಿ!

Amarnath Yatra; ದೋಸೆಗಿಲ್ಲ ಅವಕಾಶ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

Partygate case: ಸಂಸತ್ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Movie Review: ದರ್ಬಾರ್ ಒಳಗೊಂದು ನಗೆಹಬ್ಬ