ಕೋವಿಡ್ ಚೇತರಿಕೆ ಪ್ರಮಾಣ ಶೇ.81.25
Team Udayavani, Sep 24, 2020, 1:04 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಸೋಂಕಿತರು ಚೇತರಿಸಿಕೊಳ್ಳುತ್ತಿರುವ ಪ್ರಮಾಣ ಐದನೇ ದಿನವೂ ಹೆಚ್ಚಾಗಿದೆ. ಶೇಕಡಾವಾರು ಹೇಳುವುದಿದ್ದರೆ ಅದರ ಪ್ರಮಾಣ 81.25 ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.
ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ 89,746 ಮಂದಿ ಚೇತರಿಸಿಕೊಳ್ಳುವ ಮೂಲಕ ಒಟ್ಟು ಗುಣಮುಖರ ಸಂಖ್ಯೆ 45,87,613 ಆಗಿದೆ. ಮತ್ತೂಂದೆಡೆ ದೇಶದಲ್ಲಿ ಸೋಂಕಿ ತರ ಸಂಖ್ಯೆಗೆ ಹೊಸ ತಾಗಿ 90,020 ಸೇರ್ಪಡೆ ಯಾಗಿದ್ದರೆ, 1,085 ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿನಿಂದಾಗಿ ಅಸುನೀಗಿದವರ ಸಂಖ್ಯೆ 90 ಸಾವಿರ ದಾಟಿದೆ. ಉಸಿರಾಟದ ತೊಂದರೆ ಶೇ.100ರಷ್ಟು ಪರಿಹಾರ ನೀಡಲು ಯಾವುದೇ ಲಸಿಕೆಯಿಂದ ಸಾಧ್ಯವಿಲ್ಲ. ಶೇ.50 ರಿಂದ ಶೇ.100ರಷ್ಟು ಖಾತರಿ ಇರುವ ಲಸಿಕೆಯನ್ನು ಕೋವಿಡ್ ಸೋಂಕಿತರಿಗೆ ನೀಡಬಹುದು ಎಂದು ಐಸಿಎಂಆರ್ ನಿರ್ದೇಶಕ ಡಾ| ಬಲರಾಮ ಭಾರ್ಗವ ತಿಳಿಸಿದ್ದಾರೆ. ಸುರಕ್ಷತೆ, ರೋಗತಡೆ ಮತ್ತು ಪರಿಣಾಮಕಾರಿಯಾಗುತ್ತದೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ಸೂಚನೆಯನ್ವಯ ಲಸಿಕೆಗೆ ಅನುಮೋದನೆ ನೀಡಬೇಕಾಗುತ್ತದೆ ಎಂದರು.
ಇದೇ ವೇಳೆ ಹೈದರಾಬಾದ್ನ ಭಾರತ್ ಬಯೋಟೆಕ್ ವಾಷಿಂಗ್ಟನ್ ವಿವಿಯ ವೈದ್ಯಕೀಯ ವಿಭಾಗದ ಜತೆಗೆ ಲಸಿಕೆ ಸಂಶೋಧನೆ ನಿಟ್ಟಿನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ. ಅಮೆರಿಕ, ಜಪಾನ್ ಮತ್ತು ಐರೋಪ್ಯ ಒಕ್ಕೂಟ ಹೊರತುಪಡಿಸಿ ಉಳಿದೆಡೆ ಅದನ್ನು ಭಾರತ್ ಬಯೋಟೆಕ್ ಪೂರೈಸಲಿದೆ
ಸೌದಿಗೆ ಹಾರಲ್ಲ ವಿಮಾನ
ಭಾರತದಿಂದ ಸೌದಿ ಅರೇಬಿಯಾಕ್ಕೆ ಯಾವುದೇ ವಿಮಾನಗಳು ಹಾರಾಟ ನಡೆಸುವುದಿಲ್ಲ ಎಂದು ಸೌದಿ ಅರೇಬಿಯಾ ನಾಗರಿಕ ವಿಮಾನಯಾನ ಪ್ರಾಧಿಕಾರ (ಜಿಎಸಿಎ) ಈ ಆದೇಶ ಹೊರಡಿಸಿದೆ. ಜತೆಗೆ ಬ್ರೆಜಿಲ್, ಅರ್ಜೆಂಟೀನಾಕ್ಕೆ ಕೂಡ ವಿಮಾನ ಸಂಚಾರ ನಡೆಸದೇ ಇರಲು ನಿರ್ಧರಿಸಿದೆ. ಕಳೆದ ಶನಿ ವಾರ ದುಬೈನಿಂದ ವಿಮಾನಯಾನ ರದ್ದು ಗೊಳಿಸಲಾಗಿತ್ತು. ಸೌದಿ ಅರೇಬಿಯಾದಲ್ಲಿ ಭಾರ ತೀಯ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ