ಕೇರಳದಲ್ಲೊಂದು ಹೈಡ್ರಾಮಾ; ಸೋಂಕಿತ ವಶಕ್ಕೆ!


Team Udayavani, Mar 16, 2020, 8:09 AM IST

ಕೇರಳದಲ್ಲೊಂದು ಹೈಡ್ರಾಮಾ; ಸೋಂಕಿತ ವಶಕ್ಕೆ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೊರೊನಾ ವ್ಯಾಪಿಸದಂತೆ ಸರಕಾರಗಳು ಹರಸಾಹಸ ಪಡುತ್ತಿರುವಂತೆಯೇ ಕೇರಳದಲ್ಲೊಂದು ಹೈಡ್ರಾಮಾ ನಡೆದಿದೆ. 18 ಮಂದಿ ಪ್ರವಾಸಿಗರ ತಂಡದೊಂದಿಗೆ ಕೇರಳಕ್ಕೆ ಬಂದಿದ್ದ ಯು.ಕೆ. ನಾಗರಿಕರೊಬ್ಬರು ಮುನ್ನಾರ್‌ನ ರೆಸಾರ್ಟ್‌ನ ನಿಗಾ ಕೇಂದ್ರದಿಂದ ತಪ್ಪಿಸಿಕೊಂಡು, ದುಬಾೖಗೆ ಇನ್ನೇನು ಹಾರಬೇಕು ಎನ್ನುವಷ್ಟರಲ್ಲಿ ಸಿಕ್ಕಿಬಿದ್ದಿದ್ದಾರೆ.

ನಿಗಾ ಕೇಂದ್ರದಿಂದ ತಪ್ಪಿಸಿ ಡು ಆ ವ್ಯಕ್ತಿ ತನ್ನ ತಂಡದೊಂದಿಗೆ ಕೊಚ್ಚಿಯಿಂದ ದುಬಾೖಗೆ ತೆರಳುತ್ತಿದ್ದ ವಿಮಾನ ಹತ್ತಿದ್ದ. ಆ ವ್ಯಕ್ತಿಗೆ ಕೊರೊನಾ ಸೋಂಕಿರುವುದು ದೃಢವಾಗುತ್ತಿದ್ದಂತೆ, ಆತ ವಿಮಾನ ನಿಲ್ದಾಣ ತಲುಪಿರುವ ಮಾಹಿತಿ ಸಿಕ್ಕಿತು. ಅಷ್ಟರಲ್ಲಿ ಅವರೆಲ್ಲರೂ ವಿಮಾನ ಹತ್ತಿಯಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ವಿಮಾನದಲ್ಲಿದ್ದ ಎಲ್ಲ 290 ಪ್ರಯಾಣಿಕರನ್ನೂ ಕೆಳಗಿಳಿಸಿದರು.

ಅನಂತರ, ಸೋಂಕಿತ ವ್ಯಕ್ತಿ ಮತ್ತು ಆತನೊಂದಿಗಿದ್ದ 18 ಮಂದಿಯನ್ನು ವಶಕ್ಕೆ ಪಡೆದು, ಉಳಿದವರನ್ನು ವಿಮಾನ ಹತ್ತಿಸಿದರು. ಈಗ ಸೋಂಕಿತ ಮತ್ತು ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ 17 ಮಂದಿಯನ್ನು ನಿಗಾ ಕೇಂದ್ರಕ್ಕೆ ಕಳುಹಿ ಸಲಾಗಿದೆ ಎಂದು ಕೇರಳ ಸಚಿವ ಸುನೀಲ್‌ ಕುಮಾರ್‌ ತಿಳಿಸಿದ್ದಾರೆ.

ರೋಗಲಕ್ಷಣ ಇಲ್ಲದಿದ್ರೂ ಹರಡುತ್ತಿದೆ ಸೋಂಕು?
ರೋಗಲಕ್ಷಣ ಕಂಡುಬರದೇ ಇರುವಂಥ ಸೋಂಕಿತ ವ್ಯಕ್ತಿಗಳಿಂದಲೇ ಅತಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹಬ್ಬುತ್ತಿದೆ ಎಂಬ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಮೆಸಾಚ್ಯುಸೆಟ್ಸ್‌ ನಲ್ಲಿ ನಡೆಸಲಾದ ಅಧ್ಯಯನವೊಂದು ಈ ವಿಚಾರ ತಿಳಿಸಿದೆ.

ಇಲ್ಲಿ ಕನಿಷ್ಠ 82 ಪ್ರಕರಣಗಳು ರೋಗಲಕ್ಷಣ ಕಂಡುಬರದೇ ಇದ್ದಂಥ ವ್ಯಕ್ತಿಗಳಿಂದಲೇ ಹಬ್ಬಿರುವುದುಗೊತ್ತಾಗಿದೆ. 6ಕ್ಕೂ ಹೆಚ್ಚು ಅಧ್ಯಯನಗಳು ಇದೇ ವಾದ ಮಂಡಿಸಿದ್ದು, ಬಹುತೇಕ ಸೋಂಕಿನ ಪ್ರಕರಣಗಳಿಗೆ ಕೆಮ್ಮು, ನೆಗಡಿ, ಜ್ವರ ಕಂಡುಬರದೇ ಇರುವವರಿಂದಲೇ ಹರಡಿದೆ ಎಂದಿವೆ.

ವೈರಲ್‌ ಬೈಟ್ಸ್‌
– ವೈರಸ್‌ ಭೀತಿಯಿಂದ ಭಾರತ-ಬಾಂಗ್ಲಾದೇಶ ಪ್ರಯಾಣಿಕ ರೈಲು ಸೇವೆ ರದ್ದು
– ಪಾಕಿಸ್ಥಾನದ ಕರ್ತಾರ್ಪುರ ಸಾಹಿಬ್‌ ಗುರುದ್ವಾರ ಯಾತ್ರೆ ಸ್ಥಗಿತ
– ಸ್ಪೇನ್‌ನ ಪ್ರಧಾನಿ ಪೆಡ್ರೋ ಸ್ಯಾಂಚೆಝ್ ಅವರ ಪತ್ನಿ ಬೆಗೋನಾ ಗೋಮೆಜ್‌ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢ.
– ಬಕಿಂಗ್‌ಹ್ಯಾಂ ಅರಮನೆಯಿಂದ ವಿಂಡ್ಸರ್‌ ಕ್ಯಾಸಲ್‌ಗೆ ರಾಣಿ 2ನೇ ಎಲಿಜಬೆತ್‌ ಶಿಫ್ಟ್.
– ಸಾಮೂಹಿಕ ಪ್ರವಾಸ ಕೈಗೊಳ್ಳದಂತೆ ಟೂರ್‌ ಆಪರೇಟರ್‌ಗಳಿಗೆ ಮಹಾರಾಷ್ಟ್ರ ಪೊಲೀಸರ ಆದೇಶ; ನಿಷೇಧಾಜ್ಞೆ ಜಾರಿ.
– ಪಶ್ಚಿಮ ಬಂಗಾಲದ ರೆಡ್‌ ಲೈಟ್‌ ಏರಿಯಾ ಖಾಲಿ ಖಾಲಿ. ಗ್ರಾಹಕರಿಲ್ಲದೇ ಭಣಗುಡುತ್ತಿರುವ ಪ್ರದೇಶ. ಬದುಕು ಸಾಗಿಸಲು ಹೆಣಗಾಡುತ್ತಿರುವ ಲೈಂಗಿಕ ಕಾರ್ಯಕರ್ತೆಯರು
– ಮಾಸ್ಕ್ ತಯಾರಿಯಲ್ಲಿ ತೊಡಗಿರುವ ಮಧ್ಯಪ್ರದೇಶದ ಜೈಲಿನ ಕೈದಿಗಳು. ಆರೋಗ್ಯ ಇಲಾಖೆಗೆ 2 ಸಾವಿರ ಮಾಸ್ಕ್ ಪೂರೈಕೆ
– ಪಾಕಿಸ್ಥಾನದಲ್ಲಿ ಸೋಂಕಿತರ ಸಂಖ್ಯೆ 53ಕ್ಕೇರಿಕೆ
– ಆಂಧ್ರಪ್ರದೇಶದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆ
– ವಿದೇಶ ಪ್ರವಾಸದಿಂದ ಯುಎಇಗೆ ವಾಪಸಾದ ಭಾರತೀಯನಿಗೆ ಸೋಂಕು ದೃಢ
– ತಮಿಳುನಾಡಿನಲ್ಲೂ ಮಾ.31ರವರೆಗೆ ಕೆಜಿ, ಪ್ರಾಥಮಿಕ ಶಾಲೆಗಳಿಗೆ ರಜೆ, ಸಿನೆಮಾ ಮಂದಿರಗಳನ್ನು ಮುಚ್ಚಲು ಆದೇಶ
– ಅಮೆರಿಕ ಅಧ್ಯಕ್ಷ ಟ್ರಂಪ್‌ ರಕ್ತದ ಮಾದರಿ ಪರೀಕ್ಷೆ- ಕೊರೊನಾ ಇಲ್ಲ ಎಂದು ದೃಢ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.