ಅಬುಧಾಬಿಯಿಂದ ಬಂದವರಿಗೆ ಕೋವಿಡ್ ; ಕೇರಳಕ್ಕೆ ವಾಪಸಾದವರಲ್ಲಿ ಸೋಂಕು

ಮುಂಬಯಿಗೆ ಬಂದವರು ಕ್ವಾರಂಟೈನ್‌ಗೆ

Team Udayavani, May 11, 2020, 11:54 PM IST

ಅಬುಧಾಬಿಯಿಂದ ಬಂದವರಿಗೆ ಕೋವಿಡ್ ; ಕೇರಳಕ್ಕೆ ವಾಪಸಾದವರಲ್ಲಿ ಸೋಂಕು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ/ಕೊಚ್ಚಿ/ಹೊಸದಿಲ್ಲಿ: ಏರ್‌ ಇಂಡಿಯಾದ ವಿಶೇಷ ವಿಮಾನಗಳಲ್ಲಿ ಗುರುವಾರ ಅಬುಧಾಬಿ ಮತ್ತು ದುಬಾಯಿಯಿಂದ ಕೇರಳಕ್ಕೆ ಮರಳಿದ್ದ 363 ಭಾರತೀಯರ ಪೈಕಿ ಮೂವರಿಗೆ ಸೋಂಕು ದೃಢಪಟ್ಟಿದೆ.

ಗುರುವಾರ ಕೇರಳಕ್ಕೆ ಬಂದಿಳಿದವರ ಪೈಕಿ ಇಬ್ಬರಿಗೆ ಶನಿವಾರ ಸೋಂಕು ದೃಢಪಟ್ಟಿತ್ತು. ರವಿವಾರ ಮತ್ತೆ ಮೂವರು ಸೋಂಕಿತರು ಪತ್ತೆಯಾಗಿರುವುದು ಈಗಾಗಲೇ ವೈರಸ್‌ ಹೊಡೆತಕ್ಕೆ ಸಿಲುಕಿ ನಲುಗಿರುವ ಕೇರಳ ರಾಜ್ಯ ಸರಕಾರದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಈ ನಡುವೆ ವಿವಿಧ ದೇಶಗಳಿಂದ ಮುಂಬೈಗೆ ಬಂದಿರುವ 572 ಭಾರತೀಯರನ್ನು ವಿಮಾನ ನಿಲ್ದಾಣ ಸಮೀಪದ ಹೋಟೆಲ್‌ಗ‌ಳಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ದುಬಾಯಿ ಮತ್ತು ಅಬುಧಾಬಿಯಿಂದ ಹೊರಡುವ ವಲಸಿಗರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸದೆಯೇ ಕಳುಹಿಸಿಕೊಡಲಾಗುತ್ತಿದೆ. ಇದು ತುಂಬಾ ಅಪಾಯಕಾರಿ ಬೆಳವಣಿಗೆ ಎಂದು ಕೇಂದ್ರ ಸರಕಾರ ಆತಂಕ ವ್ಯಕ್ತಪಡಿಸಿದೆ.

ಯು.ಕೆ.ಯಲ್ಲಿ ಇದ್ದ 239 ಭಾರತೀಯರನ್ನು ಹೊತ್ತುತಂದ ಏರ್‌ ಇಂಡಿಯಾ ವಿಮಾನ, ಸಿಂಗಾಪುರದಿಂದ 243 ಮತ್ತು ಫಿಲಿಪ್ಪೀನ್ಸ್‌ ರಾಜಧಾನಿ ಮನಿಲಾದಿಂದ 241 ಭಾರತೀಯರನ್ನು ಕರೆತಂದಿರುವ ಎರಡು ವಿಮಾನಗಳು ಸಹ ಮುಂಬಯಿಗೆ ಮರಳಿವೆ.

ಈ ನಡುವೆ ಅಮೆರಿಕದಲ್ಲಿರುವ ಭಾರತೀಯರನ್ನು ಹೊತ್ತ ಎರಡು ವಿಮಾನಗಳು ನ್ಯೂ ಜೆರ್ಸಿಯಿಂದ ಮುಂಬಯಿ ಮತ್ತು ಅಹ್ಮದಾಬಾದ್‌ಗೆ ಹೊರಟಿವೆ.

ಬೆಂಗಳೂರಿಗೆ ವಿಮಾನ: ಯುನೈಟೆಡ್‌ ಕಿಂಗ್‌ಡಂನಲ್ಲಿದ್ದ ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಭಾರತೀಯ ಪಾಸ್‌ಪೋರ್ಟ್‌ ಹೊಂದಿರುವ ಇತರರು ಸೇರಿ 323 ಭಾರತೀಯರನ್ನು ಒಳಗೊಂಡಿರುವ ಏರ್‌ ಇಂಡಿಯಾದ ಎರಡನೇ ವಿಮಾನ ಹೀಥ್ರೂ ವಿಮಾನ ನಿಲ್ದಾಣದಿಂದ  ಬೆಂಗಳೂರಿನತ್ತ ಹೊರಟಿದೆ. ಮಾ.13 ರಂದು ಆತ್ಮಹತ್ಯೆಗೆ ಶರಣಾಗಿದ್ದ 37 ವರ್ಷದ ಗದಿಗೆಪ್ಪಗೌಡ ಓಂಕಾರ ಗೌಡ ಪಾಟೀಲ್‌ ಎಂಬವರ ಶವವನ್ನು ಕೂಡ ವಿಮಾನದಲ್ಲಿ ಕಳುಹಿಸಿ ಕೊಡಲಾಗಿದೆ.

ಕೊಚ್ಚಿಗೆ ಬಂದ ಐಎನ್‌ಎಸ್‌ ಜಲಾಶ್ವ: ಮಾಲ್ಡೀವ್ಸ್‌ನಲ್ಲಿ ಸಿಲುಕಿದ್ದ 698 ಭಾರತೀಯರು ಐಎನ್‌ಎಸ್‌ ಜಲಾಶ್ವ ಯುದ್ಧನೌಕೆ ಮೂಲಕ ರವಿವಾರ ಬೆಳಗ್ಗೆ 9.30ಕ್ಕೆ ಕೊಚ್ಚಿ ತಲುಪಿದ್ದಾರೆ. ಹಡಗುಕಟ್ಟೆಗೆ ಇಳಿದ ಕೂಡಲೇ ಪ್ರಯಾಣಿಕ ರೊಬ್ಬರು ನಾವು ಸುರಕ್ಷಿತರಾಗಿದ್ದೇವೆ ಎಂದು ಉದ್ಗರಿಸಿದರು.

595 ಪುರುಷರು, 103 ಮಹಿಳೆಯರು ಸೇರಿ ಒಟ್ಟು 698 ಪ್ರಯಾಣಿಕರ ಪೈಕಿ 10 ವರ್ಷದೊಳಗಿನ 14 ಮಕ್ಕಳು, 19 ಗರ್ಭಿಣಿಯರಿದ್ದರು. ಇವರಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಕೇರಳ ಮತ್ತು ತಮಿಳು ನಾಡು ಮೂಲದವರು. ಉಳಿದಂತೆ ಇತರ 18 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಜನರೂ ಭಾರತ ತಲುಪಿದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.