ಮಾರ್ಚ್ 22 ರವಿವಾರದಂದು ದೇಶಾದ್ಯಂತ ‘ಜನತಾ ಕರ್ಫ್ಯೂ’; ‘ಸಂಕಲ್ಪ’ ಮತ್ತು ‘ಸಂಯಮ’ ನಮ್ಮದಾಗಲಿ

'ನಮ್ಮ ಸ್ವಾಸ್ಥ್ಯವೇ ಜಗತ್ತಿನ ಸ್ವಾಸ್ಥ್ಯ' ; ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ - ಪ್ರಮುಖ ಅಂಶಗಳು

Team Udayavani, Mar 19, 2020, 8:02 PM IST

Narendra-Modi-1-726

ನವದೆಹಲಿ: ದೇಶಾದ್ಯಂತ ಕೋವಿಡ್ 19 ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.

ಪ್ರಧಾನಿ ಅವರ ಭಾಷಣದ ಮುಖ್ಯಾಂಶಗಳು ಇಲ್ಲಿವೆ.

– ಪ್ರಥಮ ಹಾಗೂ ದ್ವಿತೀಯ ವಿಶ್ವಯುದ್ಧದ ಸಂದರ್ಭದಲ್ಲೂ ಸಹ ವಿಶ್ವದ ಎಲ್ಲಾ ರಾಷ್ಟ್ರಗಳೂ ಈ ರೀತಿಯ ಆತಂಕಕ್ಕೆ ಒಳಗಾಗಿರಲಿಲ್ಲ.

– ಕೋವಿಡ್ 19 ಮಹಾಮಾರಿಗೆ ಭಾರತದಲ್ಲಿಯೂ ಕಳವಳ ಹೆಚ್ಚಿದೆ.

– ನಾನು ದೇಶವಾಸಿಗಳಲ್ಲಿ ಏನಾದ್ರೂ ಕೇಳಿದಂತಹ ಸಂದರ್ಭದಲ್ಲಿ ನನಗೆ ನೀವು ಇಲ್ಲವೆಂದು ಹೇಳಿಲ್ಲ. ಇಂದೂ ಸಹ ನಾನು ನನ್ನ ದೇಶವಾಸಿಗಳಲ್ಲಿ ಒಂದನ್ನು ಕೇಳಲು ಬಂದಿದ್ದೇನೆ.

– ನನಗೆ ನಿಮ್ಮ ಸಮಯ ಬೇಕು, ಈ ಮಹಾಮಾರಿಯಿಂದ ಬಚಾವಾಗಲು ವಿಜ್ಞಾನದಲ್ಲಿ ಯಾವುದೇ ಪರಿಹಾರ ಸದ್ಯಕ್ಕೆ ಸಿಕ್ಕಿಲ್ಲ, ಈ ಮಹಾಮಾರಿಗೆ ಇದುವರೆಗೆ ನಿಶ್ಚಿತ ಔಷಧವೂ ಲಭ್ಯವಾಗಿಲ್ಲ.

– ಕೋವಿಡ್ 19 ಬೇರೆ ದೇಶಗಳಲ್ಲಿ ಹಬ್ಬಿರುವ ರೀತಿಯನ್ನು ನಾವು ನೋಡಿದಲ್ಲಿ ಅದು ಇದ್ದಕ್ಕಿದ್ದಂತೆ ಸಾಂಕ್ರಾಮಿಕವಾಗಿ ಹಬ್ಬಿದೆ.

– ತನ್ನ ನಾಗರಿಕರನ್ನು ಹೆಚ್ಚು ಪ್ರತ್ಯೇಕವಾಗಿರಿಸಿದ ರಾಷ್ಟ್ರಗಳು ಈ ಮಹಾಮಾರಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದರೆ ಇದಕ್ಕೆ ಭಾರತದಲ್ಲಿ ನಿಮ್ಮೆಲ್ಲರ ಭಾಗೀದಾರಿಕೆ ಅತ್ಯಗತ್ಯವಾಗಿದೆ.

– ನಮ್ಮಲ್ಲಿ ಈ ಮಹಾಮಾರಿಯನ್ನು ಎದುರಿಸುವಲ್ಲಿ ಎರಡು ವಿಷಯಗಳು ಪ್ರಮುಖವಾಗಿರುತ್ತದೆ ಒಂದು ‘ಸಂಕಲ್ಪ’ ಮತ್ತು ಇನ್ನೊಂದು ‘ಸಂಯಮ’. ‘ನಾವು ಸ್ವಾಸ್ಥ್ಯವಾಗಿದ್ದರೆ ಜಗತ್ತು ಸ್ವಾಸ್ಥ್ಯವಾಗಿರುತ್ತದೆ’ ಎಂಬುದು ನಮ್ಮ ಮೂಲಮಂತ್ರವಾಗಲಿ.

– ಈ ಕಠಿಣ ಸಂದರ್ಭದಲ್ಲಿ ನಾವು ಈ ಮಹಾಮಾರಿಯ ಸಂಪರ್ಕಕ್ಕೆ ಬರುವುದಿಲ್ಲ ಹಾಗೂ ಇನ್ನೊಬ್ಬರ ಸಂಪರ್ಕಕ್ಕೂ ನಾವು ಬರಗೊಡುವುದಿಲ್ಲ ಎಂಬ ಸಂಕಲ್ಪವನ್ನು ನಾವೆಲ್ಲರೂ ಕೈಗೊಳ್ಳಬೇಕಾಗಿದೆ.

– ಮುಂದಿನ ಕೆಲವು ದಿನಗಳವರೆಗೆ ನಾವು ನಮ್ಮನ್ನು ಪ್ರತ್ಯೇಕವಾಗಿರಿಸಿಕೊಳ್ಳೋಣ. ಮತ್ತು ನಮ್ಮ ಕೆಲಸಗಳನ್ನು ಮನೆಯಿಂದಲೇ ಮಾಡಿಕೊಳ್ಳಲು ಪ್ರಯತ್ನಿಸೋಣ.

– ‘ಜನತಾ ಕರ್ಫ್ಯೂ’ ಹಾಕಿಕೊಳ್ಳಬೇಕಾದ ಅಗತ್ಯವಿದೆ. ಇದೇ ರವಿವಾರ ಮಾರ್ಚ್ 22ರಂದು ದೇಶಾದ್ಯಂತ ‘ಜನತಾ ಕರ್ಫ್ಯೂ’ ಜಾರಿಯಲ್ಲಿರುತ್ತದೆ. ಇದು ಜನರೇ ಜನರಿಗೋಸ್ಕರ ಹಾಕಿಕೊಳ್ಳುವ ಸ್ವಯಂ ನಿರ್ಬಂಧ. ಈ ಜನತಾ ಕರ್ಫ್ಯೂ ಮಾರ್ಚ್ 22ರ ರವಿವಾರದಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 9 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

– ಇದು ನಮ್ಮ ಸ್ವಯಂ ನಿರ್ಬಂಧದ ಪ್ರತೀಕವಾಗಲಿ. ಇದು ಈ ಮಾರಕ ವೈರಸ್ ವಿರುದ್ಧ ಮುಂಬರುವ ದಿನಗಳಲ್ಲಿ ನಮ್ಮ ಹೋರಾಟಕ್ಕೆ ಮುನ್ನುಡಿಯಾಗಲಿ.

– ಈ ವಿಚಾರದಲ್ಲಿ ದೇಶವಾಸಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯಸರಕಾರಗಳು, ಸಾಮಾಜಿಕ ಸಂಘಟನೆಗಳು, ಸ್ಕೌಟ್ ಮತ್ತು ಗೈಡ್ ಸಂಘಟನೆಗಳು ಮುಂದಿನ ಎರಡು ದಿನಗಳಲ್ಲಿ ಕಾರ್ಯ ತತ್ಪರವಾಗಬೇಕು.

– ಜನತಾ ಕರ್ಫ್ಯೂ ದಿನವಾದ ರವಿವಾರ ಸಾಯಂಕಾಲ 5 ಗಂಟೆಗೆ ನಾವೆಲ್ಲರೂ ನಮ್ಮ ನಮ್ಮ ಮನೆಯ ಬಾಗಿಲ ಮುಂದೆ ನಿಂತು ಅಥವಾ ಬಾಲ್ಕನಿಯಲ್ಲಿ ನಿಂತು ಈ ಕೋವಿಡ್ 19 ವಿರುದ್ಧ ಹೋರಾಡುವಲ್ಲಿ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಆರೋಗ್ಯ ಪಾಲನಾ ಕಾರ್ಯಕರ್ತರು, ಪತ್ರಕರ್ತರು ಹಾಗೂ ಸಮಾಜದ ಇತರೇ ಸೇವಾವರ್ಗದ ವ್ಯಕ್ತಿಗಳಿಗೆ ಕೃತಜ್ಞತೆ ಸಲ್ಲಿಸಬೇಕೆಂದು ಪ್ರಧಾನಿ ಮೋದಿ ದೇಶದ ಜನರಲ್ಲಿ ವಿನಂತಿಸಿಕೊಂಡಿದ್ದಾರೆ.

– ಈ ಸಂದರ್ಭದಲ್ಲಿ ದೇಶದಲ್ಲಿರುವ ಆಸ್ಪತ್ರೆಗಳಲ್ಲಿ ಯಾವುದೇ ಒತ್ತಡ ಉಂಟಾಗದಂತೆ ನೋಡಿಕೊಳ್ಳಬೇಕು. ವೈದ್ಯಕೀಯ ನೆರವು ಅಗತ್ಯವಿರುವವರು ತಮ್ಮ ಕುಟುಂಬ ವೈದ್ಯರಲ್ಲಿ ದೂರವಾಣಿ ಮೂಲಕವೇ ಆರೋಗ್ಯ ಸಲಹೆಯನ್ನು ಪಡೆದುಕೊಳ್ಳಿ.

– ಕೇಂದ್ರ ಹಣಕಾಸು ಮಂತ್ರಿಗಳ ಮುಂದಾಳತ್ವದಲ್ಲಿ ‘ವಿಶೇಷ ಕಾರ್ಯಪಡೆ’ಯನ್ನು ರಚಿಸಲಾಗಿದ್ದು. ಈ ಕಾರ್ಯಪಡೆ ದೇಶದ ಆರ್ಥಿಕ ಸ್ಥಿತಿಯ ಅವಲೋಕನವನ್ನು ಕ್ಷಣ ಕ್ಷಣಕ್ಕೂ ಮಾಡುತ್ತಿರುತ್ತದೆ.

– ಈ ಸಂದರ್ಭದಲ್ಲಿ ವ್ಯಾಪಾರಿ ವರ್ಗ ಮತ್ತು ಕಾರ್ಮಿಕ ವರ್ಗದವರ ಜೊತೆಯಲ್ಲಿ ಮಾನವೀಯ ರೀತಿಯಲ್ಲಿ ವ್ಯವಹರಿಸುವುದು ಅಗತ್ಯವಿರುತ್ತದೆ.

– ದೇಶದಲ್ಲಿ ಅಗತ್ಯ ವಸ್ತುಗಳ ಪೂರೈಕೆಯನ್ನು ಯಾವುದೇ ರೀತಿಯಲ್ಲಿ ಕಡಿಮೆಗೊಳಿಸುವುದಿಲ್ಲ. ಈ ವಿಚಾರದಲ್ಲಿ ಜನರು ಗಾಬರಿಗೊಳ್ಳುವ ಅಗತ್ಯವಿಲ್ಲ.

– ದೇಶ ದೇಶಗಳು ಪರಸ್ಪರ ಸಹಾಯ ಮಾಡಿಕೊಳ್ಳಲಾಗದ ಸ್ಥಿತಿ ಉಂಟಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿಭಾಯಿಸಬೇಕಾಗಿರುವುದು ಇಂದಿನ ತುರ್ತು ಅಗತ್ಯವಾಗಿದೆ.

– ಈ ಮಹಾಮಾರಿಯ ವಿರುದ್ಧ ಮಾನವ ಜಾತಿ ವಿಜಯವಾಗಲಿ ; ಭಾರತ ವಿಜಯಿಯಾಗಲಿ – ಧನ್ಯವಾದಗಳು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.