ಕೋವಿಡ್ 19 ಮಣಿಸಲು ಸಾಮಾಜಿಕ ಅಂತರ & ಲಾಕ್ ಡೌನ್ ಅತೀ ದೊಡ್ಡ ಲಸಿಕೆ: ಸಚಿವ ಹರ್ಷವರ್ಧನ್
ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಜತೆ, ಜತೆಗೆ ಕಾರ್ಯೋನ್ಮುಖವಾಗುತ್ತಿದೆ.
Team Udayavani, Apr 9, 2020, 8:48 PM IST
Minister Harsh vardhan
ನವದೆಹಲಿ:ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ 19 ವೈರಸ್ ಮಣಿಸಲು ಲಸಿಕೆ, ಔಷಧ ಅಥವಾ ಥೆರಪಿಗಿಂತ ಸಾಮಾಜಿಕ ಅಂತರ ಹಾಗೂ ಲಾಕ್ ಡೌನ್ ಸಮರ್ಥ ಲಸಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಜನರು ಸರ್ಕಾರ ಸೂಚಿಸಿರುವ ಐಸೋಲೇಶನ್ ಕ್ರಮ ಮತ್ತು ನಿಯಮಾವಳಿಯನ್ನು ಕರಾರುವಕ್ಕಾಗಿ ಅನುಸರಿಸಬೇಕಾಗಿದೆ. ಕೋವಿಡ್ 19 ಅಂಕಿಅಂಶಕ್ಕೆ ಸಂಬಂಧಿಸಿದಂತೆ ಬೇರೆ ಎಲ್ಲಾ ದೇಶಗಳಿಗೆ ಹೋಲಿಸಿದರೆ ಭಾರತ ಹೆಚ್ಚು ಸುರಕ್ಷತೆ ಸ್ಥಿತಿಯಲ್ಲಿದೆ ಎಂಬ ವಿಶ್ವಾಸ ನನ್ನದಾಗಿದೆ ಎಂದು ಬೆನ್ನೆಟ್ ಯೂನಿರ್ವಸಿಟಿ ಆಯೋಜಿಸಿದ್ದ ಕೋವಿಡ್ 19 ಗ್ಲೋಬಲ್ ಆನ್ ಲೈನ್ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡುತ್ತ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣ 4/5 ದಿನಗಳಿಗೊಮ್ಮೆ ಹೆಚ್ಚಳವಾಗುತ್ತಿದೆ. ಆದರೂ ಬಹುತೇಕ ಜಿಲ್ಲೆಗಳಿಗೆ ವೈರಸ್ ಹೆಚ್ಚು ಸೋಂಕಿಲ್ಲ. ದೇಶದ 133 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಗುರುತಿಸಿದೆ ಎಂದು ತಿಳಿಸಿದರು.
ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಜತೆ, ಜತೆಗೆ ಕಾರ್ಯೋನ್ಮುಖವಾಗುತ್ತಿದೆ. ಅಷ್ಟೇ ಅಲ್ಲ ದೇಶದಲ್ಲಿನ ಆರೋಗ್ಯ ಸಿಬ್ಬಂದಿಗಳು ತಮ್ಮನ್ನು ಲೆಕ್ಕಿಸದೇ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನರ್ಸ್, ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆಯಂತಹ ಘಟನೆ ನಡೆಯುತ್ತಿದೆ. ಆದರೂ ಧೈರ್ಯಗೆಡದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ