ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ‘ಎಣ್ಣೆ’
Team Udayavani, Sep 3, 2021, 5:46 PM IST
ಚೆನ್ನೈ: ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸರ್ಕಾರಿ ಮಳಿಗೆಯಲ್ಲಿ ಮದ್ಯ ಖರೀದಿಗೆ ಅನುಮತಿ ಎಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಲಸಿಕೆ ಕುರಿತು ಸರ್ಕಾರ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೂ ಕೆಲವೊಂದಿಷ್ಟು ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ನೀಲಗಿರಿ ಜಿಲ್ಲೆಯಲ್ಲಂತೂ ಜಿಲ್ಲಾಡಳಿತ ಎಷ್ಟೇ ಕಸರತ್ತು ನಡೆಸಿದರು ಕೂಡ ಒಂದಿಷ್ಟು ಜನರು ಲಸಿಕೆ ಪಡೆಯದಿರಲು ಕುಂಟು ನೆಪ ಹೇಳುತ್ತಿದ್ದಾರಂತೆ. ಅದರಲ್ಲೂ ಕುಡುಕರು ನಾನು ಮದ್ಯ ಪಾನ ಮಾಡಿದ್ದೇನೆ (ಮಾಡುತ್ತೇನೆ) ಸದ್ಯಕ್ಕೆ ನಂಗೆ ಲಸಿಕೆ ಬೇಡ ಎಂದು ಹೇಳುತ್ತಿದ್ದಾರಂತೆ. ಮದ್ಯ ಪ್ರಿಯರ ಈ ಮಾತು ಜಿಲ್ಲಾಧಿಕಾರಿಗಳ ಕಿವಿಗಳಿಗೂ ಬಿದ್ದಿದೆ. ಪರಿಣಾಮ ಅವರು ಜಿಲ್ಲಾದ್ಯಂತ ಹೊಸ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಮಳಿಗೆಗಲ್ಲಿ ಮದ್ಯ ಖರೀದಿಸಬೇಕಾದರೆ ಕೋವಿಡ್ ಎರಡೂ ಡೋಸ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ತೋರಿಸುವುದು ಕಡ್ಡಾಯ. ಸರ್ಟಿಫಿಕೇಟ್ ತೋರಿಸಿದವರಿಗೆ ಮಾತ್ರ ಸರಾಯಿ ನೀಡುವಂತೆ ಜಿಲ್ಲಾಧಿಕಾರಿ ದಿವ್ಯಾ ಅವರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಇನ್ನು ತಮ್ಮ ಆದೇಶದ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಈಗಾಗಲೇ ಹಲವು ಲಸಿಕಾ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಶೇಕಡಾ 97% ಜನರು ಲಸಿಕೆ ಪಡೆಯಲು ಮುಂದೆ ಬಂದಿದ್ದಾರೆ. ಕೆಲವೊಂದಿಷ್ಟು ಜನರು (ಮದ್ಯ ಪ್ರಿಯರು) ಕುಂಟು ನೆಪ ಹೇಳಿಕೊಂಡು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ನಾವು ಈ ಆದೇಶ ಹೊರಡಿಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ