ಶೀಘ್ರದಲ್ಲೇ ರಷ್ಯಾದಿಂದ ಭಾರತಕ್ಕೆ ಬರಲಿದೆ 10 ಕೋಟಿ ಡೋಸ್ ಕೋವಿಡ್ 19 ಲಸಿಕೆ


Team Udayavani, Sep 16, 2020, 5:29 PM IST

ಶೀಘ್ರದಲ್ಲೇ ರಷ್ಯಾದಿಂದ ಭಾರತಕ್ಕೆ ಬರಲಿದೆ 10 ಕೋಟಿ ಡೋಸ್ ಕೋವಿಡ್ 19 ಲಸಿಕೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ಸೋಂಕಿಗೆ ಲಸಿಕೆ ಕಂಡುಹಿಡಿಯುವ ಪ್ರಯೋಗದಲ್ಲಿ ಮಹತ್ವದ ಯಶಸ್ಸನ್ನು ಸಾಧಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ರಷ್ಯಾ ತನ್ನ ಈ ಲಸಿಕೆಯ 10 ಕೋಟಿ ಡೋಸ್ ಗಳನ್ನು (100 ಮಿಲಿಯನ್) ಭಾರತಕ್ಕೆ ನೀಡಲಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ರಷ್ಯನ್ ಡೈರೆಕ್ಟ್ ಇನ್ ವೆಸ್ಟ್ ಮೆಂಟ್ ಫಂಡ್ (RDIF) ಅಧಿಕೃತ ಘೋಷಣೆಯನ್ನು ಹೊರಡಿಸಿದೆ.

ಇದರನ್ವಯ RDIF ನೂತನ ಕೋವಿಡ್ 19 ಲಸಿಕೆ ಸ್ಪುಟ್ನಿಕ್-V ಅನ್ನು ಭಾರತದೊಂದಿಗೆ ಹಂಚಿಕೊಳ್ಳಲು ಡಾ.ರೆಡ್ಡೀಸ್ ಲ್ಯಾಬೊರೇಟರಿಯೊಂದಿಗೆ ಒಪ್ಪಂದವನ್ನೂ ಸಹ ಮಾಡಿಕೊಂಡಿದೆ.

ರಷ್ಯಾದ ರಾಷ್ಟ್ರೀಯ ಸಂಪತ್ತು ನಿಧಿಯಾಗಿರುವ RDIF ನೀಡಿರುವ ಹೇಳಿಕೆಯ ಪ್ರಕಾರ ಅದು ತನ್ನ ದೇಶದಲ್ಲಿ ಅಭಿವೃದ್ಧಪಡಿಸಲಾಗಿರುವ ಕೋವಿಡ್ 19 ಲಸಿಕೆ ಸ್ಪುಟ್ನಿಕ್-Vನ್ನು ಭಾರತದಲ್ಲಿ ಚಿಕಿತ್ಸಕ ಪ್ರಯೋಗಕ್ಕೊಳಪಡಿಸಲು ಮತ್ತು ಆ ಬಳಿಕ ಇಲ್ಲಿ ಆ ಲಸಿಕೆಯ ವಿತರಣೆಗಾಗಿ ಡಾ, ರೆಡ್ಡೀಸ್ ಲ್ಯಾಬೊರೇಟರಿಗೆ ಸಹಕಾರ ನೀಡಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಬದಲಾದ SBI ATM ನಿಯಮ; 10 ಸಾವಿರಕ್ಕಿಂತ ಮೇಲ್ಪಟ್ಟ ವ್ಯವಹಾರಕ್ಕೆ ಮೊಬೈಲ್‌ OTP ಕಡ್ಡಾಯ

ಮತ್ತು ಶಾಸನಾತ್ಮಕ ಒಪ್ಪಿಗೆ ದೊರೆತ ತಕ್ಷಣವೇ ಈ ಚಟುವಟಿಕೆ ಕಾರ್ಯರೂಪಕ್ಕೆ ಬರಲಿದೆ ಎಂದೂ ಸಹ RDIF ತಿಳಿಸಿದೆ.

‘ಭಾರತದಿಂದ ಶಾಸನಾತ್ಮಕ ಒಪ್ಪಿಗೆಯೆಲ್ಲಾ ದೊರೆತ ಬಳಿಕ RDIF 100 ಮಿಲಿಯನ್ ಡೋಸ್ ಲಸಿಕೆಯನ್ನು ಡಾ. ರೆಡ್ಡೀಸ್ ಗೆ ಪೂರೈಕೆ ಮಾಡಲಿದೆ. ಸುರಕ್ಷತಾ ಒಪ್ಪಿಗೆಯನ್ನು ಪಡೆದುಕೊಂಡಿರುವ ಸ್ಪುಟ್ನಿಕ್-V ಮನುಷ್ಯ ದೇಹದ ರೋಗನಿರೋಧಕ ಶಕ್ತಿಯ ಕೋಶಗಳ ಮೇಲೆ ಸೂಕ್ತ ಹಾಗೂ ಸುರಕ್ಷಿತ ರೀತಿಯಲ್ಲಿ ಅಧ್ಯಯನಕ್ಕೊಳಪಟ್ಟಿದ್ದು, ಕೋವಿಡ್ 19 ಮಹಾಮಾರಿಗೆ ಲಸಿಕೆ ರೂಪದಲ್ಲಿ ಚಿಕಿತ್ಸಕ ಪ್ರಯೋಗಕ್ಕೊಳಪಡುತ್ತಿದೆ’ ಎಂದು RDIF ತನ್ನ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವುದಾಗಿ ಇಂಡಿಯಾ ಟುಡೇ ವೆಬ್ ಸೈಟ್ ವರದಿ ಮಾಡಿದೆ.

ಕೋವಿಡ್ 19 ಸೋಂಕಿನಿಂದ ತೀವ್ರವಾಗಿ ಬಾಧಿತವಾಗಿರುವ ದೇಶಗಳಲ್ಲಿ ಭಾರತವೂ ಒಂದಾಗಿರುವುದರಿಂದ ಡಾ. ರೆಡ್ಡೀಸ್ ನೊಂದಿಗೆ ಸಹಭಾಗಿತ್ವವನ್ನು ಹೊಂದಲು ನಮಗೆ ಸಂತೋಷವಾಗುತ್ತಿದೆ ಮತ್ತು ಈ ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ನಾವು ಉತ್ತಮವಾದ ಸಂಶೋಧನೆಯನ್ನೇ ಭಾರತದೊಂದಿಗೆ ಹಂಚಿಕೊಳ್ಳಲಿದ್ದೇವೆ ಎಂದು ರಷ್ಯಾದ ನೇರ ಹೂಡಿಕೆ ನಿಧಿಯ ಸಿಇಒ ಕಿರಿಲ್ ಡಿಮಿಟ್ರಿವ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿ ದೇವರ ದರ್ಶನ ಪಡೆದ ರಾಜಮೌಳಿ ದಂಪತಿ

‘ಸ್ಪುಟ್ನಿಕ್-V ಲಸಿಕೆಯ ಪ್ರಥಮ ಮತ್ತು ದ್ವಿತೀಯ ಹಂತದ ಪ್ರಯೋಗ ಯಶಸ್ವಿಯಾಗಿ ಭರವಸೆ ಮೂಡಿಸಿರುವುದರಿಂದ RDIF ಸಹಯೋಗದೊಂದಿಗೆ ಈ ಲಸಿಕೆಯನ್ನು ಭಾರತಕ್ಕೆ ಪರಿಚಯಿಸಲು ನಮಗೆ ಹರ್ಷವಾಗುತ್ತಿದೆ ಮತ್ತು ಇಲ್ಲಿ ನಾವು ಇಲ್ಲಿನ ನಿಯಮಗಳಿಗೆ ಅನುಸಾರವಾಗಿ ಮೂರನೇ ಹಂತದ ಪ್ರಯೋಗವನ್ನು ಪ್ರಾರಂಭಿಸಲಿದ್ದೇವೆ’ ಎಂದು ಡಾ. ರೆಡ್ಡೀಸ್ ಲ್ಯಾಬೊರೇಟರಿಯ ಸಹ-ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಜಿ ವಿ ಪ್ರಸಾದ್ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.