ಕೋವಿಡ್ 19 ತಲ್ಲಣ: ದೇಶವಾಸಿಗಳ ಸಂಕಷ್ಟಕ್ಕೆ ಕೇಂದ್ರದ ನೆರವು ; ಹೊಸ ಪಡಿತರ ಯೋಜನೆ ಘೋಷಣೆ
Team Udayavani, Mar 25, 2020, 3:37 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ 19 ವೈರಸ್ ಕಾಟದಿಂದ ಸಂಕಷ್ಟಕ್ಕೊಳಗಾಗಿ 21 ದಿನಗಳ ಕಾಲ ಲಾಕ್ ಡೌನ್ ಸ್ಥಿತಿಯಲ್ಲಿರಬೇಕಾದ ಅನಿವಾರ್ಯತೆಗೆ ಸಿಲುಕಿರುವ ದೇಶದ ಜನಸಾಮಾನ್ಯರ ನೆರವಿಗೆ ಇದೀಗ ಕೇಂದ್ರ ಸರಕಾರ ನೂತನ ಪಡಿತರ ಯೋಜನೆಯೊಂದನ್ನು ಜಾರಿಗೊಳಿಸಿದೆ.
ಈ ಯೋಜನೆಯ ಅನ್ವಯ 80 ಕೋಟಿ ಪಡಿತರದಾರರಿಗೆ ಪ್ರತೀ ಕೆ.ಜಿ.ಗೆ 2 ರೂ. ದರದಲ್ಲಿ ಗೋಧಿ ಹಾಗೂ ಪ್ರತೀ ಕೆ.ಜಿ.ಗೆ 3 ರೂ. ದರದಲ್ಲಿ ಅಕ್ಕಿಯನ್ನು ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ. ದೆಹಲಿಯಲ್ಲಿ ಸಚಿವ ಪ್ರಕಾಶ್ ಜಾಬ್ಡೇಕರ್ ಅವರು ಸುದ್ದಿಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದ್ದಾರೆ
ಮತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಊಟವನ್ನು ಪೂರೈಸುವ ನಿರ್ಧಾರಕ್ಕೂ ಕೇಂದ್ರ ಬಂದಿದೆ. ಇನ್ನು ಕೋವಿಡ್ 19 ಸಂಬಂಧಿತ ಜಿಲ್ಲಾವಾರು ಹೆಲ್ಪ್ ಲೈನ್ ತೆರೆಯಲೂ ಸಹ ನಿರ್ಧರಿಸಲಾಗಿದೆ.
ಆದರೆ ಜನರಿಗೆ ಪಡಿತರವನ್ನು ಸಿಗುವಂತೆ ಮಾಡುವ ಮತ್ತು ಇನ್ನಿತರ ಸವಲತ್ತುಗಳನ್ನು ಜನರಿಗೆ ತಲುಪಿಸುವುದಕ್ಕೆ ಸಂಬಂಧಿಸಿ ಮಾರ್ಗದರ್ಶಿ ಸೂತ್ರಗಳನ್ನು ದಿನದ ಅಂತ್ಯದೊಳಗೆ ಸರಕಾರ ಬಿಡುಗಡೆಗೊಳಿಸುವ ನಿರೀಕ್ಷೆ ಇದೆ.
ಸಚಿವ ಜಾಬ್ಡೇಕರ್ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು:
– ಮೂರು ತಿಂಗಳ ಪಡಿತರವನ್ನು ಮುಂಗಡವಾಗಿಯೇ ನೀಡಲಾಗುವುದು.
– ಗುತ್ತಿಗೆ ಕಾರ್ಮಿಕರಿಗೆ ಕಡ್ಡಾಯ ವೇತನ.
– ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ.
– ಪ್ರದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ 1340 ಕೋಟಿ ರೂಪಾಯಿಗಳ ಅನುದಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್