ಸೋಂಕು ಹರಡುವವರ ವಿರುದ್ಧ ಕಾನೂನಾಸ್ತ್ರ; ಈ ಸೆಕ್ಷನ್‌ಗಳು ಏನು ಹೇಳುತ್ತವೆ?


Team Udayavani, Mar 30, 2020, 7:40 AM IST

ಸೋಂಕು ಹರಡುವವರ ವಿರುದ್ಧ ಕಾನೂನಾಸ್ತ್ರ; ಈ ಸೆಕ್ಷನ್‌ಗಳು ಏನು ಹೇಳುತ್ತವೆ?

ದೂರದ ದುಬಾೖಯಿಂದ ಹಿಮಾಚಲ ಪ್ರದೇಶದ ಕಾಂಗ್ರಾಕ್ಕೆ ಆಗಮಿಸಿದ್ದ ಮಹಿಳೆಯೊಬ್ಬರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿತ್ತು. ಆದರೆ ಟ್ರಾವೆಲ್‌ ಹಿಸ್ಟರಿಯನ್ನು ವಿವರಿಸದ ಕಾರಣ, ಅವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 270ರ ಅನ್ವಯ ಪ್ರಕರಣ ದಾಖಲಿಸಲಾಯಿತು. ಇನ್ನು, ಸೋಂಕಿಗೊಳಗಾಗಿದ್ದ ಬಾಲಿವುಡ್‌ ಗಾಯಕಿ ಕನ್ನಿಕಾ ಕಪೂರ್‌ ವಿರುದ್ಧ ಐಪಿಸಿ ಸೆಕ್ಷನ್‌ 269, 188ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಈ ಸೆಕ್ಷನ್‌ಗಳು ಏನು ಹೇಳುತ್ತವೆ, ಇದನ್ನು ಯಾವಾಗ, ಹೇಗೆ ಬಳಸಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ:

ಸೆಕ್ಷನ್‌ 269, 270 ನಡುವಿನ ವ್ಯತ್ಯಾಸ
ಮಾರಣಾಂತಿಕ ಕಾಯಿಲೆ ಅಥವಾ ಸೋಂಕನ್ನು ಇತರರಿಗೆ ಹರಡದಂತೆ ಎಚ್ಚರಿಕೆ ವಹಿಸದೆ, ಬೇಜವಾಬ್ದಾರಿ ವಹಿಸುವವರ ಮೇಲೆ ಐಪಿಸಿಯ 269ನೇ ವಿಧಿಯನ್ನು ಪ್ರಯೋಗಿಸಲಾಗುತ್ತದೆ.

ಇನ್ನು, ಐಪಿಸಿ 270ನೇ ವಿಧಿಯು ಪ್ರಜಾದ್ರೋಹಕ್ಕೆ ಸಂಬಂಧಿಸಿದ್ದಾಗಿದೆ. ತನಗೆ ಮಾರಣಾಂತಿಕ ಕಾಯಿಲೆ ಇರುವುದು ತಿಳಿದಿದ್ದರೂ ಉಳಿದ ಪ್ರಜೆಗಳಿಗೆ ಹರಡುವಂಥ ನಡೆಯನ್ನು ಅನುಸರಿಸಿದ್ದಕ್ಕಾಗಿ ಇದರನ್ವಯ ಪ್ರಯೋಗ ದಾಖಲಿಸಬಹುದಾಗಿದೆ.

ಸೆಕ್ಷನ್‌ 188 ಎಂಬ ಮತ್ತೂಂದು ಅಸ್ತ್ರ
ಸೋಂಕು ಹರಡುವವರ ವಿರುದ್ಧ ಬಳಸಲಾಗುವ ಸೆಕ್ಷನ್‌ 269, 270 ಹೊರತಾಗಿ ಸೆಕ್ಷನ್‌ 188 ಅನ್ನೂ ದಾಖಲಿಸಬಹುದಾಗಿದೆ. ಸರಕಾರದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಇದನ್ನು ಬಳಸಲಾಗುತ್ತದೆ. ಉದಾಹರಣೆಗೆ, ಈಗ ದೇಶದೆಲ್ಲೆಡೆ ಲಾಕ್‌ಡೌನ್‌ ಪರಿಸ್ಥಿತಿ ಇದ್ದು ಈ ನಿಬಂಧನೆಯನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಸೆಕ್ಷನ್‌ 188 ಬಳಸಬಹುದು.

ಶಿಕ್ಷೆಯ ಪ್ರಮಾಣ ಹೇಗೆ?
ಐಪಿಸಿ 269ನೇ ವಿಧಿಯನ್ವಯ ಅಪರಾಧಿಗಳಿಗೆ 6 ತಿಂಗಳು ಜೈಲು ಅಥವಾ ದಂಡ ವಿಧಿಸಬಹುದು. ವಿಶೇಷ ಸಂದರ್ಭ ಗಳಲ್ಲಿ ಇವೆರಡನ್ನೂ ವಿಧಿಸಬಹುದು.

ಐಪಿಸಿ 270ನೇ ವಿಧಿಯನ್ವಯ ಎರಡು ವರ್ಷ ಜೈಲು ಅಥವಾ ದಂಡ ವಿಧಿಸಬಹುದು. ಕೆಲವೊಮ್ಮೆ ಇವೆರಡನ್ನೂ ಸೇರಿಸಿ ಶಿಕ್ಷೆ ಪ್ರಕಟಿಸಬಹುದು.

ಹಿಂದಿನ ಪ್ರಕರಣಗಳು
1886ರಲ್ಲಿ ವ್ಯಕ್ತಿಯೊಬ್ಬ ತನಗೆ ಕಾಲರಾ ಇದ್ದರೂ ರೈಲಿನಲ್ಲಿ ಪ್ರಯಾಣಿಸಿದ್ದಕ್ಕೆ ಆತನ ವಿರುದ್ಧ ಸೆಕ್ಷನ್‌ 269ರ ಅನ್ವಯ ಮದ್ರಾಸ್‌ ಹೈಕೋರ್ಟ್‌ ಶಿಕ್ಷೆ ಜಾರಿಗೊಳಿಸಿತ್ತು.

2015ರಲ್ಲಿ ಮ್ಯಾಗಿ ನೂಡಲ್ಸ್‌ ಬಗ್ಗೆ ಜಾಹೀರಾತು ನೀಡಿದ್ದಕ್ಕೆ ಬಾಲಿವುಡ್‌ ನಟ ನಟಿಯರಾದ ಅಮಿತಾಭ್‌ ಬಚ್ಚನ್‌, ಮಾಧುರಿ ದೀಕ್ಷಿತ್‌, ಪ್ರೀತಿ ಝಿಂಟಾ ಹಾಗೂ ನೆಸ್ಲೆ ಕಂಪನಿಯ ಇಬ್ಬರು ಅಧಿಕಾರಿಗಳ ವಿರುದ್ಧ ಸೆಕ್ಷನ್‌ 270, 273 (ಅಪಾಯಕಾರಿ ತಿನಿಸು ಮಾರಾಟಕ್ಕೆ ಸಹಕಾರ) ಮತ್ತು 420 (ಮೋಸ) ಪ್ರಕಾರ ಕೇಸ್‌ ದಾಖಲಾಗಿತ್ತು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.