ಒಬ್ಬ ಭಾರತೀಯನಿಂದ 4 ಜನರಿಗೆ ಸೋಂಕು ; ಕೋವಿಡ್ 19 ಪ್ರಾರಂಭದಲ್ಲಿ ಸಿದ್ಧಪಡಿಸಿದ್ದ ವರದಿ


Team Udayavani, Mar 25, 2020, 1:43 AM IST

ಒಬ್ಬ ಭಾರತೀಯನಿಂದ 4 ಜನರಿಗೆ ಸೋಂಕು ; ಕೋವಿಡ್ 19 ಪ್ರಾರಂಭದಲ್ಲಿ ಸಿದ್ಧಪಡಿಸಿದ್ದ ವರದಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ‘ಒಬ್ಬ ಭಾರತೀಯನಿಗೆ ಕೋವಿಡ್ 19 ವೈರಸ್ ಸೋಂಕು ತಗಲಿದರೆ ಅದು ಆತನಿಂದ ಏಕಕಾಲಕ್ಕೆ ನಾಲ್ವರಿಗೆ ಹರಡಬಹುದು. ಹಾಗಾಗಿ ಸೋಂಕಿತರನ್ನು ಅಥವಾ ಸೋಂಕು ಶಂಕಿತರನ್ನು 3 ದಿನಗಳ ಕಾಲ ಸ್ವಯಂನಿರ್ಬಂಧಕ್ಕೆ ಒಳಪಡಿಸಿದರೆ ಸಾಕು, ಕೊರೊನಾ ಹರಡುವಿಕೆಯನ್ನು ಶೇ. 62ರಷ್ಟು ಕಡಿಮೆ ಮಾಡಬಹುದು.

ಮಿತಿಮೀರಿದ ಸಂದರ್ಭಗಳಲ್ಲಿ ಈ ಸೋಂಕನ್ನು ಶೇ. 89ರಷ್ಟು ಕಡಿಮೆಗೊಳಿಸಬಹುದು’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಸಿದ್ಧಪಡಿಸಿರುವ ಗಣಿತಶಾಸ್ತ್ರ ಆಧಾರಿತ ಸಂಶೋಧನಾ ವರದಿಯೊಂದು ಹೇಳಿದೆ. ಬಹುಮುಖ್ಯವಾಗಿ ಇದು ಸಾಮಾಜಿಕ ಅಂತರ ಕಾಪಾಡುವುದರ ಪ್ರಯೋಜನಗಳನ್ನು ಅಂಕಿ-ಅಂಶಗಳ ಮೂಲಕ ಪ್ರಸ್ತುತಗೊಳಿಸಿದೆ.

ಈ ವರದಿಯನ್ನು ಫೆಬ್ರವರಿಯಲ್ಲಿ, ಅಂದರೆ ಸೋಂಕು ಆಗ ತಾನೇ ಭಾರತಕ್ಕೆ ಕಾಲಿಡುತ್ತಿದ್ದ ಸಂದರ್ಭದಲ್ಲಿ ಸಿದ್ಧಪಡಿಸಲಾಗಿತ್ತು. ಆದರೆ ಈಗ ದೇಶದೆಲ್ಲೆಡೆ ಹರಡಿದೆ. ಸೋಂಕಿತರ ಸಂಖ್ಯೆ 515ನ್ನು ದಾಟಿದೆ.
ದೇಶವೇ ಲಾಕ್‌ಡೌನ್‌ ಆಗಿದೆ. ಹೀಗಿರುವಾಗ ಆರಂಭಿಕ ಹಂತದಲ್ಲಿ ತಯಾರಿಸಲಾದ ವರದಿ ಈಗ ಅನ್ವಯವಾಗುತ್ತದೆಯೇ ಎಂಬ ಪ್ರಶ್ನೆಗೆ ಐಸಿಎಂಆರ್‌ನ ಸಾಂಕ್ರಾಮಿಕ ರೋಗಗಳ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ರಮಣ ಆರ್‌. ಗಂಗಖೇಡ್ಕರ್‌ ಅವರು ಉತ್ತರಿಸಿದ್ದಾರೆ.

‘ಸೋಂಕು ಆರಂಭಿಕ ಹಂತದಲ್ಲಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. ನಿಜ. ಆದರೆ ಸೋಂಕಿತರು ನಿರ್ದಿಷ್ಟ ಅವಧಿಯಲ್ಲಿ ಎಷ್ಟು ಜನರಿಗೆ ಹರಡುತ್ತಾರೆ ಎಂಬುದು ಬದಲಾಗದ ಸತ್ಯ. ಏಕೆಂದರೆ ಆ ವೈರಾಣು ಹರಡಿಕೊಳ್ಳುವ ವೇಗವನ್ನು ಲೆಕ್ಕ ಇಟ್ಟು ಈ ವರದಿ ಸಿದ್ಧಪಡಿಸಲಾಗಿದೆ. ಆ ವೇಗ ಬದಲಾಗುವುದಿಲ್ಲ. ಹಾಗಾಗಿ ಈ ವರದಿಯು ಸರ್ವಕಾಲಿಕ’ ಎಂದು ಅವರು ತಿಳಿಸಿದ್ದಾರೆ.

‘ಇದು ನಿರ್ದಿಷ್ಟ ಪ್ರಾಂತ್ಯ ಅಥವಾ ದೇಶದಲ್ಲಿ ರೋಗಾಣುಗಳ ಹರಡುವಿಕೆಯ ವೇಗವನ್ನು ಆರ್‌- ನಾಟ್‌ (R0) ಎಂದು ಸಾಂಕೇತಿಕವಾಗಿ ವರದಿಯಲ್ಲಿ ಉಲ್ಲೇಖೀಸಲಾಗಿದೆ. 0 ಮೌಲ್ಯ 1 ಅಥವಾ ಅದಕ್ಕಿಂತ ಕೆಳಗಿದ್ದರೆ ವೈರಾಣುಗಳು ಸಾಯುವ ಹಂತದಲ್ಲಿವೆ ಎಂದರ್ಥ. ಆದರೆ ಈ ಮೌಲ್ಯ 2 ಅಥವಾ ಅದಕ್ಕಿಂತ ಹೆಚ್ಚಿದ್ದರೆ ವೈರಾಣುಗಳು ಅಪಾಯಕಾರಿ ಸ್ಥಿತಿಯಲ್ಲಿ ಹರಡುತ್ತಿವೆ ಎಂದರ್ಥ’ ಎಂದು ಡಾ| ರಮಣ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.