Covid ರೋಗಿಗಳ ಸೇವೆ;ಹಲೋ…ನಾನು ಪ್ರಧಾನಿ ಮಾತನಾಡ್ತಾ ಇರೋದು;ಪುಣೆ ಆಸ್ಪತ್ರೆ ನರ್ಸ್ ಗೆ ಕರೆ
ಶುಕ್ರವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ನರ್ಸ್ ಛಾಯಾ ಜಗ್ ತಪ್ ಗೆ ಕರೆ ಮಾಡಿ ಆಕೆಯ ಸೇವೆಗೆ ಅಭಿನಂದನೆ ಸಲ್ಲಿಕೆ
Team Udayavani, Mar 29, 2020, 10:34 AM IST
PM Narendra Modi
ನವದೆಹಲಿ/ಪುಣೆ:ಪುಣೆ ನಗರಾಡಳಿತ ಸ್ವಾಮಿತ್ವದ ನಾಯ್ಡು ಆಸ್ಪತ್ರೆಯಲ್ಲಿ ಮಾರಣಾಂತಿಕ ಕೋವಿಡ್ 19 ಸೋಂಕು ಪೀಡಿತ ರೋಗಿಗಳನ್ನು ಆರೈಕೆ ಮಾಡುತ್ತಿರುವ ನರ್ಸ್ ಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗಳ ಕಾರ್ಯ ವೈಖರಿಗೆ ಪ್ರಧಾನಿ ಹರ್ಷ ವ್ಯಕ್ತಪಡಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿ
ವಿವರಿಸಿದೆ.
ಶುಕ್ರವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ನರ್ಸ್ ಛಾಯಾ ಜಗ್ ತಪ್ ಗೆ ಕರೆ ಮಾಡಿ ಆಕೆಯ ಸೇವೆಗೆ ಅಭಿನಂದನೆ ಸಲ್ಲಿಸಿರುವುದಾಗಿ ಪುಣೆ ಮುನ್ಸಿಪಲ್ ಕಾರ್ಪೋರೇಶನ್ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ಕರೆ ಮಾಡಿದಾಗ ನರ್ಸ್ ಛಾಯಾ ಮರಾಠಿಯಲ್ಲಿ ಸಂಭಾಷಣೆ ಆರಂಭಿಸಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು ಆಕೆಯ ಕೆಲಸದ ಬಗ್ಗೆ ಹಾಗೂ ಆಕೆಯ ಕುಟುಂಬದವರ ಆತಂಕ ಹೇಗಿದೆ, ಕೋವಿಡ್ 19 ರೋಗಿಗಳ ಸೇವೆ ಮಾಡುತ್ತಿರುವ ಬಗ್ಗೆ ಅನಿಸಿಕೆ ವಿಚಾರಿಸಿರುವುದಾಗಿ ವರದಿ ವಿವರಿಸಿದೆ.
ಹೌದು ನನಗೆ ನನ್ನ ಕುಟುಂಬದ ಬಗ್ಗೆ ಕಾಳಜಿ ಇದೆ. ಆದರೆ ಒಂದು ಸಲ ಕೆಲಸ ಆರಂಭಿಸಿದ ಮೇಳೆ ನಾವು ಇಂತಹ ಪರಿಸ್ಥಿತಿಯಲ್ಲಿ ರೋಗಿಗಳ ಸೇವೆ ಮಾಡಲೇಬೇಕು. ನಾನು ಇದನ್ನು ಸಮತೋಲನದಲ್ಲಿ ನಿರ್ವಹಿಸುತ್ತಿದ್ದೇನೆ ಎಂದು ನರ್ಸ್ ಉತ್ತರ ನೀಡಿದ್ದರು.
ಒಂದು ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳು ಭಯದಿಂದ ಇರುತ್ತಾರೆಯೇ ಎಂದು ಪ್ರಧಾನಿ ಪ್ರಶ್ನಿಸಿದ್ದರು. ದಾಖಲಾದ ರೋಗಿಗಳ ಜತೆ ನಾವು ಮಾತನಾಡಲು ಪ್ರಯತ್ನಿಸುತ್ತೇವೆ. ಅಲ್ಲದೇ ಯಾವುದೇ ಕಾರಣಕ್ಕೂ ಭಯಪಡಬೇಡಿ. ಏನೂ ಆಗುವುದಿಲ್ಲ, ನಿಮ್ಮ ರಿಪೋರ್ಟ್ ನೆಗೆಟೀವ್ ಆಗಿ ಬರಲಿದೆ ಎಂದು ಧೈರ್ಯ ತುಂಬುವುದಾಗಿ ತಿಳಿಸಿದ್ದರು ಎಂದು ವರದಿ ತಿಳಿಸಿದೆ.
ಈವರೆಗೆ ಆಸ್ಪತ್ರೆಯಲ್ಲಿ ಕೋವಿಡ್ 19 ವೈರಸ್ ರೋಗಿಗಳು ಗುಣಮುಖರಾದ ನಂತರ ಡಿಸ್ ಚಾರ್ಜ್ ಆಗಿರುವುದಾಗಿ ಛಾಯಾ ಜಗ್ ತಪ್ ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದರು. ಬಳಿಕ ಪ್ರಧಾನಿ ಮೋದಿ ಅವರು ನರ್ಸ್ ಬಳಿ, ದೇಶದ ವಿವಿಧ ಆಸ್ಪತ್ರೆಗಳಲ್ಲಿ ಲಕ್ಷಾಂತರ ಮಂದಿ ಸಿಬ್ಬಂದಿಗಳು ಅವಿರತವಾಗಿ ಕೆಲಸ ನಿರ್ವಹಿಸುತ್ತಿದ್ದು ಅವರಿಗೆ ಯಾವ ಸಂದೇಶ ನೀಡುತ್ತೀರಿ ಎಂದು ಪ್ರಶ್ನಿಸಿದ್ದರು.
ಅದಕ್ಕೆ ನರ್ಸ್ ಛಾಯಾ, ಯಾವುದೇ ಕಾರಣಕ್ಕೂ ಭಯಪಡಬೇಕಾದ ಅಗತ್ಯವಿಲ್ಲ. ಈ ವೈರಸ್ ವಿರುದ್ಧ ಹೋರಾಡಲೇಬೇಕಾಗಿದೆ. ಈ ವೈರಸ್ ವಿರುದ್ಧ ದೇಶ ಗೆಲುವು ಸಾಧಿಸಬೇಕಾಗಿದೆ. ಇದೇ ಆಸ್ಪತ್ರೆಗಳ ಮತ್ತು ಸಿಬ್ಬಂದಿಗಳ ಮುಖ್ಯ ಉದ್ಧೇಶವಾಗಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ