3ನೇ ಅಲೆಯ ತೀವ್ರತೆ ಕಡಿಮೆ?
Team Udayavani, Jul 16, 2021, 7:00 AM IST
ಹೊಸದಿಲ್ಲಿ: ಆಗಸ್ಟ್ ಅಂತ್ಯದ ವೇಳೆಗೆ ದೇಶಕ್ಕೆ ಕೊರೊನಾ 3ನೇ ಅಲೆ ಅಪ್ಪಳಿಸಲಿದ್ದು, ಇದು ಎರಡನೇ ಅಲೆಯಷ್ಟು ಭೀಕರವಾಗಿರುವ ಸಾಧ್ಯತೆ ಕಡಿಮೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ(ಐಸಿಎಂಆರ್) ಹೇಳಿದೆ.
ಮೊದಲ ಮತ್ತು 2ನೇ ಅಲೆಯಲ್ಲಿ ಗಳಿಸಿದ ರೋಗನಿರೋಧಕ ಶಕ್ತಿಯು ಈಗ ಕುಗ್ಗಿರುವುದು, ಕೊರೊನಾದ ಹೊಸ ರೂಪಾಂತರಿಯು ವೇಗವಾಗಿ ಹಬ್ಬುತ್ತಿರುವುದು, ನಿರ್ಬಂಧಗಳು ತೆರವಾಗಿರುವುದು ಮತ್ತಿತರ ಕಾರಣಗಳಿಂದಾಗಿ ರಾಷ್ಟ್ರಮಟ್ಟದಲ್ಲಿ 3ನೇ ಅಲೆ ವ್ಯಾಪಿಸುವುದಂತೂ ಖಚಿತ. ಹಾಗೆಂದು ಅದರ ಅಬ್ಬರ ಹೆಚ್ಚಿರುತ್ತದೆ ಎಂದು ಹೇಳಲಾಗದು ಎಂದು ಐಸಿಎಂಆರ್ ಹೇಳಿದೆ.
ಜಾಗತಿಕ ಪ್ರಕರಣ ಹೆಚ್ಚಳ: 3ನೇ ಅಲೆ ಭೀತಿಯ ನಡುವೆಯೇ, ಜಾಗತಿಕ ಕೊರೊನಾ ಪ್ರಕರಣ, ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಸಾವಿನ ಪ್ರಮಾಣ ಶೇ.3ರಷ್ಟು ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಶೇ.10ರಷ್ಟು ಹೆಚ್ಚಳವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಭಾರತದಲ್ಲಿ ಬುಧವಾರದಿಂದ ಗುರುವಾರಕ್ಕೆ 41,806 ಪ್ರಕರಣಗಳು ಪತ್ತೆಯಾಗಿ, 581 ಮಂದಿ ಮೃತಪಟ್ಟಿದ್ದಾರೆ.
20 ಮಕ್ಕಳಿಗೆ ಪಾಸಿಟಿವ್: ಪುದುಚೇರಿಯಲ್ಲಿ ಗುರುವಾರ ಒಂದೇ ದಿನ 20 ಮಕ್ಕಳಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಎಲ್ಲ ಮಕ್ಕಳನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಕೇರಳದಲ್ಲಿ ಮತ್ತೆ 5 ಮಂದಿಗೆ ಝೀಕಾ ವೈರಸ್ ತಗುಲಿದ್ದು, ಝೀಕಾ ಪ್ರಕರಣಗಳ ಸಂಖ್ಯೆ 28ಕ್ಕೇರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್