ಆರು ತಿಂಗಳಲ್ಲಿ ಸೋಂಕು ಸಾಮಾನ್ಯಕ್ಕೆ
Team Udayavani, Sep 16, 2021, 7:00 AM IST
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕಿನ ಹಾವಳಿಯ ತೀವ್ರತೆ ಇಳಿಮುಖವಾಗುವ ಹಂತದಲ್ಲಿದೆ. ಆರು ತಿಂಗಳುಗಳಲ್ಲಿ ಅದು ಸಾಮಾನ್ಯ ಸಮಸ್ಯೆ (ಎಂಡೆಮಿಕ್) ಹಂತಕ್ಕೆ ಬರಲಿದೆ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ನಿರ್ದೇಶಕ ಸುಜೀತ್ ಸಿಂಗ್ ತಿಳಿಸಿದ್ದಾರೆ.
“ಎನ್ಡಿಟಿವಿ’ ಜತೆಗೆ ಮಾತನಾಡಿದ ಅವರು, ಕೊರೊನಾ ತೀವ್ರತೆ ತಗ್ಗಿ, ಅದನ್ನು ನಿಭಾಯಿಸಲು ಸಾಧ್ಯವಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಲಿರುವುದರಿಂದ ದೇಶದ ಆರೋಗ್ಯ ಕ್ಷೇತ್ರದ ಮೇಲಿನ ಒತ್ತಡವೂ ತಗ್ಗಲಿದೆ ಎಂದು ಹೇಳಿದ್ದಾರೆ. ಕೊರೊನಾದ ಹೊಸ ಪೀಳಿಗೆಯ ವೈರಾಣು ಹುಟ್ಟಿಕೊಂಡರೂ 3ನೇ ಅಲೆ ಸೃಷ್ಟಿಸುವಷ್ಟು ಪ್ರಬಲವಾಗಿರುವುದಿಲ್ಲ ಎಂದಿದ್ದಾರೆ.
ಪ್ರಯೋಗಕ್ಕೆ ಅನುಮತಿ: ರಷ್ಯಾ ನಿರ್ಮಿತ ಸ್ಫುಟ್ನಿಕ್ ಲೈಟ್ ಸದ್ಯದಲ್ಲೇ ಭಾರತೀಯರಿಗೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿವೆ. ಈ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಸಲು, ಈ ಲಸಿಕೆಯನ್ನು ಭಾರತದಲ್ಲಿ ತಯಾರಿಸಲು ಅನುಮತಿ ಪಡೆದಿರುವ ಪನೇಶಿಯಾ ಬಯೋಟೆಕ್ ಕಂಪನಿಗೆ ಅನುಮತಿ ನೀಡಲಾಗಿದೆ. ಮತ್ತೂಂದೆಡೆ, ಅಮೆರಿಕದ “ಜಾನ್ಸನ್ ಆ್ಯಂಡ್ ಜಾನ್ಸನ್’ ಕಂಪನಿಯ ಲಸಿಕೆಯ ಗುಣಮಟ್ಟ ಹಾಗೂ ಸುರಕ್ಷತೆಯ ಪರೀಕ್ಷೆಗಾಗಿ ಕಸೌಲಿಯಲ್ಲಿರುವ ಪ್ರಯೋಗಾಲಯಕ್ಕೆ ಲಸಿಕೆಯ 35 ಲಕ್ಷ ಡೋಸ್ಗಳನ್ನು ಕಳುಹಿಸಲಾಗಿದೆ.
27 ಸಾವಿರ ಹೊಸ ಕೇಸ್: ದೇಶದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಬುಧವಾರ ಬೆಳಗ್ಗೆ 8ರವರೆಗಿನ ಅವಧಿಯಲ್ಲಿ, ಹೊಸದಾಗಿ 27,176 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 284 ಸೋಂಕಿತರು ಸಾವನ್ನಪ್ಪಿದ್ದಾರೆ.
ಜಗತ್ತಿನಿಂದ ಕೊರೊನಾ ಮರೆಯಾಗಲಾರದು. ಹೆಚ್ಚು ಲಸಿಕೆ ನೀಡುತ್ತಿರುವುದರಿಂದ ನಾವು ಹರ್ಡ್ ಇಮ್ಯುನಿಟಿ ಸಾಧಿಸಿದ್ದೇವೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿದೆ. ಆದರೆ ಕೊರೊನಾ, ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಾಗಿ ಮುಂದುವರಿಯುತ್ತದೆ. –ಮೈಕ್ ರ್ಯಾನ್, ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ನಿರ್ವಾಹಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ