ದೆಹಲಿ ಹೈಕೋರ್ಟ್ ನ್ಯಾಯಾಧೀಶರಿಗೆ 5 ಸ್ಟಾರ್ ಹೋಟೆಲ್ ನಲ್ಲಿ ಕೋವಿಡ್ ಕೇರ್ ಸೆಂಟರ್
Team Udayavani, Apr 27, 2021, 8:10 AM IST
ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳು ಹಾಗೂ ಅವರ ಕುಟುಂಬದವರಿಗೆ 5 ಸ್ಟಾರ್ (ಪಂಚತಾರಾ ಹೋಟೆಲ್) ಹೋಟೆಲ್ ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳ ವ್ಯವಸ್ಥೆ ಮಾಡಲಾಗಿದೆ. ದೆಹಲಿಯ ಅಶೋಕ ಹೋಟೆಲ್ ನಲ್ಲಿ 100 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ಚಾಣಕ್ಯಪುರಿ ಉಪವಿಭಾಗ ಮ್ಯಾಜಿಸ್ಟ್ರೇಟ್ ಗೀತಾ ಗ್ರೋವರ್ ತಿಳಿಸಿದ್ದಾರೆ.
ಇನ್ನು ಪ್ರಿಮಸ್ ಆಸ್ಪತ್ರೆಯು ಕೋವಿಡ್ ಕೇರ್ ಸೇವೆಗಳನ್ನು ಪಂಚತಾರಾ ಹೋಟೆಲ್ನಲ್ಲಿ ನಡೆಸಲಿದೆ ಎಂದು ತಿಳಿಸಲಾಗಿದೆ. ವೈದ್ಯಕೀಯ ತ್ಯಾಜ್ಯ ವಿಲೇವಾರಿ ಆಸ್ಪತ್ರೆಯ ಜವಾಬ್ದಾರಿಯಾಗಿದೆ. ಹೋಟೆಲ್ ಸಿಬ್ಬಂದಿಗೆ ಎಲ್ಲಾ ರಕ್ಷಣಾತ್ಮಕ ಸಾಧನಗಳನ್ನು ಒದಗಿಸಬೇಕು ಮತ್ತು ಅವರಿಗೆ ತರಬೇತಿಯನ್ನು ನೀಡಬೇಕು. ರೋಗಿಗಳ ವರ್ಗಾವಣೆಗೆ ಆಂಬ್ಯುಲೆನ್ಸ್ ಗಳನ್ನು ಪ್ರಿಮಸ್ ಆಸ್ಪತ್ರೆಯಿಂದ ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೆಲಸಕ್ಕೆ ಹೋಟೆಲ್ ಸಿಬ್ಬಂದಿಗಳ ಕೊರತೆಯಾದರೆ ಆಸ್ಪತ್ರೆಯಿಂದಲೂ ಸಿಬ್ಬಂದಿಗಳನ್ನು ಒದಗಿಸಲಾಗುವುದು. ಕೊಠಡಿಗಳು, ಆಹಾರ, ಸ್ವಚ್ಛತೆ ಸೇರಿದಂತೆ ಹೋಟೆಲ್ ನಲ್ಲಿ ಇರುವ ನ್ಯಾಯಾಂಗ ಸಿಬ್ಬಂದಿಗೆ ಎಲ್ಲಾ ಸೇವೆಗಳನ್ನು ಹೋಟೆಲ್ ಒದಗಿಸುತ್ತದೆ ಎಂದು ತಿಳಿಸಲಾಗಿದೆ. ಹೋಟೆಲ್ ನಲ್ಲಿ ಇರುವ ರೋಗಿಗಳ ವೈದ್ಯಕೀಯ ಖರ್ಚನ್ನು ಆಸ್ಪತ್ರೆಯೇ ಭರಿಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ